ಗ್ರಾಮೀಣರಿಗೆ “ಡಿಜಿಟಲ್‌ ಸಾಕ್ಷರತಾ’ ದೀಕ್ಷೆ ಅಭಿಯಾನ


Team Udayavani, Apr 11, 2017, 10:41 AM IST

digital.jpg

ಹುಬ್ಬಳ್ಳಿ: ಕೆಲ ದಶಕಗಳ ಹಿಂದೆ ದೇಶಾದ್ಯಂತ ವಯಸ್ಕರ ಶಿಕ್ಷಣ ಹಾಗೂ ಸಾಕ್ಷರತಾ ಅಭಿಯಾನ ದೊಡ್ಡ ಪ್ರಚಾರ ಪಡೆದಿತ್ತು. ಅದರ ಮುಂದುವರಿದ ಭಾಗವಾಗಿ ಇದೀಗ ಡಿಜಿಟಿಲ್‌ ಸಾಕ್ಷರತಾ ಅಭಿಯಾನ ಗಮನ ಸೆಳೆಯುತ್ತಿದೆ. ಕೇಂದ್ರ ಸರಕಾರ ದೇಶದ ಸುಮಾರು 6 ಕೋಟಿ ಜನರಿಗೆ ಡಿಜಿಟಲ್‌ ಸಾಕ್ಷರತೆ ದೀಕ್ಷೆಗೆ ಸದ್ದಿಲ್ಲದ ಸಾಧನೆಗೆ ಮುಂದಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಹಲವು ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಡಿಜಿಟಲ್‌ ಇಂಡಿಯಾವೂ ಒಂದಾಗಿದೆ.
ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮಾಹಿತಿ-ತಂತ್ರಜ್ಞಾನ ಪರಿಣಾಮಕಾರಿಯಾಗಿ ಜಾರಿಯಾಗಬೇಕು, ಇದರ
ಪ್ರಯೋಜನವನ್ನು ಗ್ರಾಮೀಣ ಜನತೆ ಸಮರ್ಪಕವಾಗಿ ಪಡೆದುಕೊಳ್ಳಬೇಕೆಂಬ ನಿಟ್ಟಿನಲ್ಲಿ ಹಲವು ಯತ್ನಗಳನ್ನು
ಕೈಗೊಳ್ಳಲಾಗುತ್ತಿದೆ. ಅದರ ಭಾಗವಾಗಿಯೇ ಡಿಜಿಟಲ್‌ ಸಾಕ್ಷರತಾ ಅಭಿಯಾನ ಆರಂಭಗೊಂಡಿದೆ.

ದೇಶದ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಗ್ರಾಮೀಣ ಭಾಗದಲ್ಲಿ ಪ್ರತಿ ಕುಟುಂಬದ ಒಬ್ಬರನ್ನು ಡಿಜಿಟಲ್‌
ಸಾಕ್ಷರರನ್ನಾಗಿ ಮಾಡುವ ಗುರಿಯಿದೆ. ಗ್ರಾಮೀಣ ಜನತೆ ಕಂಪ್ಯೂಟರ್‌, ಅಂತರ್ಜಾಲ ಬಳಕೆಯೊಂದಿಗೆ ಸರಕಾರಿ ಯೋಜನೆ ಹಾಗೂ ಸೇವೆಗಳ ಮಾಹಿತಿ ಪಡೆಯುವುದು, ವಹಿವಾಟುಗಳನ್ನು ಡಿಜಿಟಲ್‌ ರೂಪದಲ್ಲೇ ಮಾಡುವಂತೆ ಮಾಡುವ ಉದ್ದೇಶವನ್ನು ಈ ಅಭಿಯಾನ ಹೊಂದಿದೆ.

ಪ್ರತಿ ಗ್ರಾಪಂಗೆ 300: ಪರಿಶಿಷ್ಟ ಜಾತಿ-ಪಂಗಡ, ಬಡತನ ರೇಖೆಗಳಿಗಿಂತ ಕೆಳಗಿನ ಕುಟುಂಬಗಳು, ಮಹಿಳೆಯರು,
ಅಂಗವಿಕಲರು, ಅಲ್ಪಸಂಖ್ಯಾತರಿಗೆ ಆದ್ಯತೆಯೊಂದಿಗೆ ಅಭಿಯಾನ ಆರಂಭಿಸಲಾಗಿದೆ. ದೇಶದ ಸುಮಾರು 2.50 ಲಕ್ಷ
ಗ್ರಾಪಂಗಳ ವ್ಯಾಪ್ತಿಯಲ್ಲಿ 200ರಿಂದ 300 ಫ‌ಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಒಂದು ಜಿಲ್ಲೆಯ
ಇ-ಆಡಳಿತ ಸೊಸೈಟಿ ಅಧ್ಯಕ್ಷರಾಗಿರುವ ಜಿಲ್ಲಾ ನ್ಯಾಯಾಧೀಶರು ಜಿಲ್ಲೆಯ ಜನಸಂಖ್ಯೆ, ಸ್ಥಳೀಯ ಅಗತ್ಯತೆ, ಜಿಲ್ಲೆಯ ವ್ಯಾಪ್ತಿಗಳನ್ನು ಗಮನಿಸಿ, ಒಂದು ಗ್ರಾಪಂನಲ್ಲಿ ಇಂತಿಷ್ಟು ಫಲಾನುಭವಿಗಳಾಗಬೇಕು ಎಂದು ತೀರ್ಮಾನಿಸುತ್ತಾರೆ.

ರಾಜ್ಯದಲ್ಲಿ ಒಟ್ಟಾರೆ 27.05 ಲಕ್ಷ ಜನರನ್ನು ಡಿಜಿಟಲ್‌ ಸಾಕ್ಷರನ್ನಾಗಿಸುವ ಗುರಿಯಿದೆ. ಪ್ರಧಾನಮಂತ್ರಿ ಆದರ್ಶ ಗ್ರಾಮ
ಯೋಜನೆಯಡಿ ಬರುವ ಹಳ್ಳಿಗಳೂ ಡಿಜಿಟಲ್‌ ಸಾಕ್ಷರತೆ ಯೋಜನೆ ವ್ಯಾಪ್ತಿಗೆ ಬರಲಿದೆ.

ಗ್ರಾಮೀಣ ಪ್ರದೇಶಕ್ಕಷ್ಟೇ ಅನ್ವಯ
ದೇಶದ ಜನರಲ್ಲಿ ಡಿಜಿಟಲ್‌ ಸಾಕ್ಷರತೆ ಸಾಧಿಧಿಸಲು ರಾಷ್ಟ್ರೀಯ ಡಿಜಿಟಲ್‌ ಸಾಕ್ಷರತಾ ಮಿಷನ್‌(ಎನ್‌ಡಿಎಲ್‌ಎಂ) ಮತ್ತು ಡಿಜಿಟಲ್‌ ಸಾಕ್ಷರತಾ ಮಿಷನ್‌ (ಡಿಐಎಸ್‌ಎಚ್‌ಎ) ಎಂಬ ಎರಡು ಕಾರ್ಯಕ್ರಮಗಳಿಗೆ ಸರ್ಕಾರ ಅನುಮೋದನೆ ನೀಡಿದೆ. ಇವುಗಳ ಮೇಲ್ವಿಚಾರಣೆಯನ್ನು ಸಿಎಸ್‌ಸಿ-ಎಸ್‌ಪಿವಿ ನಡೆಸುತ್ತದೆ. 2018ರೊಳಗೆ 52.05 ಲಕ್ಷ ಜನರನ್ನು ಡಿಜಿಟಲ್‌ ಸಾಕ್ಷರರನ್ನಾಗಿಸಿ ಪ್ರಮಾಣ ಪತ್ರ ವಿತರಿಸಲಾಗುವುದು. ಈ ಯೋಜನೆ ಗ್ರಾಮೀಣ ಪ್ರದೇಶಕ್ಕೆ ಮಾತ್ರ ಅನ್ವಯವಾಗಲಿದೆ. ಬೇರು ಮಟ್ಟದಲ್ಲಿ ಯೋಜನೆ ಸಹಕಾರಗೊಳಿಸಲು ಸಿಎಸ್‌ಸಿ- ಎಸ್‌ಪಿವಿನಿಂದ ತರಬೇತಿ ಪಡೆದವರು ಯೋಜನೆ ಅನುಷ್ಠಾನದಲ್ಲಿ ಪಾಲ್ಗೊಳ್ಳುತ್ತಾರೆ.

ದೇಶಾದ್ಯಂತ 2,500 ತರಬೇತಿ ಪಾಲುದಾರರು/ ಕೇಂದ್ರಗಳಿದ್ದು, ಅವುಗಳನ್ನು 2.05 ಲಕ್ಷ ತರಬೇತಿ ಕೇಂದ್ರಗಳಿಗೆ ಹೆಚ್ಚಿಸುವ ಪ್ರಯತ್ನ ನಡೆಯುತ್ತಿದೆ. ಸಿಎಸ್‌ಸಿ-ಪಿಎಸ್‌ವಿ ನಿಯಮಗಳ ಪ್ರಕಾರ ಡಿಜಿಟಲ್‌ ಸಾಕ್ಷರತೆಯ ನೇರ ತರಬೇತಿಯನ್ನು ಕೈಗೊಳ್ಳಲಾಗುತ್ತದೆ. ಇವುಗಳಲ್ಲಿ ಸಿಎಸ್‌ಸಿ, ಎನ್‌ಐಇಎಲ್‌ ಐಟಿ ಕೇಂದ್ರಗಳು, ವಯಸ್ಕರ ಸಾಕ್ಷರತಾ ಕೇಂದ್ರಗಳು, ಶಾಲೆಗಳಲ್ಲಿ ತರಬೇತಿ ಜರುಗಲಿದೆ.

ಟಾಪ್ ನ್ಯೂಸ್

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

kar49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

JDS MP ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.