ಪಿಸಿ ಪತ್ನಿಗೆ ಚುಡಾವಣೆ ಮತ್ತು ಹಲ್ಲೆ ಎರಡೂ ತನಿಖೆಯಾಗಲಿ: ಪ್ರಮೋದ್‌


Team Udayavani, Apr 11, 2017, 12:39 PM IST

pramod.jpg

ಉಡುಪಿ: ಪೊಲೀಸ್‌ ಕಾನ್ಸ್‌ಟೆಬಲ್‌ ಹಲ್ಲೆ ನಡೆಸಿದ ಪ್ರಕರಣ ಮತ್ತು ಕಾನ್ಸ್‌ಟೆಬಲ್‌ ಪತ್ನಿ ಮೇಲೆ ಚುಡಾಯಿಸಿದ ಪ್ರಕರಣ ಎರಡೂ ತನಿಖೆಯಾಗಲಿ. ಪಿಸಿ ಜತೆ ಬೇರೆಯವರು ಸೇರಿ ಹೊಡೆದಿದ್ದರೆ ಅದೂ ತನಿಖೆಯಾಗಲಿ. ಎಲ್ಲವೂ ಕಾನೂನು ಪ್ರಕಾರ ನಡೆಯಲಿ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದ್ದಾರೆ.

ಕುಮಾರ್‌ ನನ್ನ ಕಂಪೆನಿಯಲ್ಲಿ ದುಡಿಯುವ ಡ್ರೈವರ್‌. ಆತ ಕಾಮುಕನೋ? ಬೀದಿ ಕಾಮುಕನೋ? ತನಿಖೆ ನಡೆಸಲಿ. ಪತ್ರಕರ್ತರೂ ಸೇರಿದಂತೆ ಯಾರೂ ಕೂಡ ತನಿಖೆ ನಡೆಸಬಹುದು. ಹೌದಾದರೆ ಶಿಕ್ಷೆಯೂ ಆಗಲಿ. ಎಟಿಎಂನಲ್ಲಿ ಹಣ ತೆಗೆಯುವಾಗ ಆತ ಕಾನ್ಸ್‌ಟೆಬಲ್‌ ಪತ್ನಿಯನ್ನು ಚುಡಾಯಿಸಿದನೆಂಬ ಕಾರಣಕ್ಕೆ ಬೆನ್ನು ಮೂಳೆ ಮುರಿಯುವಂತೆ ಹೊಡೆಯಲು ಪೊಲೀಸರಿಗೆ ಅಧಿಕಾರವಿದೆಯೆ? ಈ ಪ್ರಕರಣದಲ್ಲಿ ಕುಮಾರ್‌ ಗಾಯಾಳುವಾಗಿ ಆಸ್ಪತ್ರೆಗೆ ಸೇರಿದ್ದರಿಂದ ಮೆಡಿಕೋ ಲೀಗಲ್‌ ಕೇಸ್‌ ದಾಖಲಾಗುತ್ತದೆ. ಇದು ಕಾನೂನಿನ ಭಾಗ. ನಾನು ಸೇರಿದರೂ ಆಗುತ್ತದೆ. ಇದನ್ನು ತಪ್ಪಿಸಿಕೊಳ್ಳಲು ಆಗುವುದಿಲ್ಲ. ಇಂತಹ ಪ್ರಕರಣದಲ್ಲಿ ಆರೋಪಿ ಅಮಾನತು ಆಗಬೇಕಾಗುತ್ತದೆ ಎಂದು ಸಚಿವರು ತಿಳಿಸಿದರು. 

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು ಕೇಸ್‌, ಕೌಂಟರ್‌ ಕೇಸ್‌ ವ್ಯವಸ್ಥೆಯಲ್ಲಿ ಸಹಜ. ಪೊಲೀಸರಿಗೆ ಯಾವ ಕೇಸ್‌ ಹಾಕಬೇಕು ಎನ್ನುವುದು ಗೊತ್ತಿರುವುದಿಲ್ಲವೆ? ನನ್ನ ಪತ್ನಿ ಬಳಿ ಪ್ರಕರಣ ದಾಖಲಿಸುವುದು ಬೇಡ ಎಂದು ಪಿಸಿ ಹೇಳಿದ್ದು ಹೌದು. ಆದರೆ ಆಸ್ಪತ್ರೆಗೆ ಸೇರಿದಾಗ ಪ್ರಕರಣ ಬೇಡ ಎಂದು ಹೇಳಲು ಆಗುವುದಿಲ್ಲ. ನಮ್ಮ ಕಂಪೆನಿಯಲ್ಲಿ ಗಾಯಾಳುವಾದವರನ್ನು ಆಸ್ಪತ್ರೆಗೆ ಸೇರಿಸಿಯೇ ಸೇರಿಸುತ್ತೇವೆ. ಇದರಲ್ಲಿ ಹೊಸತೇನಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾನೂನು ಕೈಗೆತ್ತಿಕೊಂಡರೆ ಸಹಿಸಬೇಕೆ?
ನಾನು ಎಸ್ಪಿಯವರ ಮೇಲೆ ಯಾವುದೇ ಒತ್ತಡ ತಂದಿಲ್ಲ. ತನಿಖೆ ಮಾಡಿ ಎಂದು ಹೇಳಿದ್ದೆ. ಬೆನ್ನು ಹುರಿ ಮುರಿದುಹೋಗುವ ವರೆಗೆ ಹೊಡೆದರೆ ಅದನ್ನು ಸಹಿಸಿಕೊಂಡು ಇರಬೇಕೆಂದು ನೀವು ಬಯಸುತ್ತೀರಾ ಎಂದು ಪತ್ರಕರ್ತರಿಗೆ ಪ್ರಶ್ನಿಸಿದರು.

ನಾನು ಸಚಿವನಾದ ಬಳಿಕ ನನ್ನ ಪತ್ನಿ ಕಂಪೆನಿಯನ್ನು ನೋಡಿಕೊಳ್ಳುತ್ತಿರುವುದು ನಿಮಗೆಲ್ಲಾ ತಿಳಿದಿದೆ. ಪತ್ನಿ ನನ್ನ ರಾಜಕೀಯ ಅಧಿಕಾರದಲ್ಲಿ ಹಸ್ತಕ್ಷೇಪ ನಡೆಸುತ್ತಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಿದೆ. ಅಲ್ಲಿಗೆ ಪಿಸಿ ಮಾತನಾಡಲು ಬಂದಿದ್ದರು. ನನಗೆ ಪಿಸಿ ಅಮಾನತಾದರೂ ಒಂದೇ, ಅಮಾನತಾಗದಿದ್ದರೂ ಒಂದೇ. ನನಗೆ ನನ್ನ ಚಾಲಕನ ಆರೋಗ್ಯವೇ ಮುಖ್ಯ ಎಂದರು.
**
ಮುಂದುವರಿದ ತನಿಖೆ
ಉಡುಪಿ: ಮಲ್ಪೆ  ಫಿಶ್‌ಮೀಲ್‌ ಸಿಬಂದಿ ಕುಮಾರ್‌ ಅವರ ಮೇಲೆ ಮಲ್ಪೆ ಪೊಲೀಸ್‌ ಕಾನ್ಸ್‌ಟೆಬಲ್‌ ಪ್ರಕಾಶ್‌ ಅವರು ಹಲ್ಲೆ ನಡೆಸಿದ ಪ್ರಕರಣ ಮತ್ತು ಪ್ರಕಾಶ್‌ ಅವರ ಪತ್ನಿ ಜ್ಯೋತಿ ಅವರನ್ನು ಕುಮಾರ್‌ ಚುಡಾಯಿಸಿದ ಪ್ರಕರಣಗಳೆರಡರ ತನಿಖೆ ಮುಂದುವರಿದಿದೆ.

ಕಾನ್‌ಸ್ಟೆಬಲ್‌ ಹಲ್ಲೆ ನಡೆಸಿದ ಪ್ರಕರಣ ಕುರಿತು ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಉಡುಪಿ ಸರ್ಕಲ್‌ ಇನ್ಸ್‌ಪೆಕ್ಟರ್‌ ಇದರ ನೇತೃತ್ವ ವಹಿಸಲಿದ್ದಾರೆ. ಜ್ಯೋತಿ ಅವರು ನೀಡಿದ ದೂರಿನಂತೆ ಮಹಿಳಾ ಠಾಣೆ ಎಸ್‌ಐ ತನಿಖೆ ನಡೆಸುತ್ತಿದ್ದಾರೆಂದು ಪೊಲೀಸ್‌ ಉನ್ನತ ಮೂಲಗಳು ತಿಳಿಸಿವೆ.

ತಾನು ಪತ್ನಿಗೆ ಔಷಧ ತರಲೆಂದು ಹೋದಾಗ ಚುಡಾಯಿಸಿದ್ದಕ್ಕೆ ಹಲ್ಲೆ ನಡೆಸಿದೆ ಎಂದು ಪ್ರಕಾಶ್‌ ಹೇಳಿಕೊಂಡಿದ್ದರೆ, ಕುಮಾರ್‌ ಅವರು ತಾನು ಎಟಿಎಂಗೆ ಹಣ ತರುವಾಗ ಏಕಾಏಕಿ ಬಂದು ಹಲ್ಲೆ ನಡೆಸಿದರು ಮತ್ತು ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದರು ಎಂದು ದೂರು ನೀಡಿದ್ದಾರೆ. ಪ್ರಕಾಶ್‌ ಪತ್ನಿ ಜ್ಯೋತಿ ಮಹಿಳಾ ಠಾಣೆಗೆ ದೂರು ನೀಡಿದ್ದರು. ಕುಮಾರ್‌ ಆಸ್ಪತ್ರೆಗೆ ದಾಖಲಾಗಿದ್ದು ಪ್ರಕರಣದ ಆಧಾರದಲ್ಲಿ ಎಸ್ಪಿಯವರು ಪ್ರಕಾಶ್‌ ಅವರನ್ನು ಅಮಾನತುಗೊಳಿಸಿರುವುದರಿಂದ ಮತ್ತು ಕುಮಾರ್‌ ಅವರು ಸಚಿವ ಪ್ರಮೋದ್‌ ಮಧ್ವರಾಜ್‌ ಅವರ ಫಿಶ್‌ಮೀಲ್‌ ಸಿಬಂದಿಯಾದ ಕಾರಣ ಘಟನೆ ಸುದ್ದಿಗೆ ಗ್ರಾಸವಾಗಿ ಎರಡು ದಿನಗಳಿಂದ ಪರವಿರೋಧ ಹೇಳಿಕೆಗಳು ಹರಿದಾಡುತ್ತಿವೆ. ಎರಡೂ ಪ್ರಕರಣ ತನಿಖೆಯಲ್ಲಿದ್ದು ಸೋಮವಾರ ಯಾವುದೇ ಹೊಸ ಬೆಳವಣಿಗೆಗಳು ನಡೆದಿಲ್ಲ.

ಪ್ರಧಾನ ಎರಡು ಪಕ್ಷಗಳು ಘಟನೆಯನ್ನು ಕೇಂದ್ರೀಕರಿಸಿಕೊಂಡು ಕೆಸರೆರಚಾಟದಲ್ಲಿ ತೊಡಗಿವೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.