ಕಾರವಾರ-ಯಶವಂತಪುರ ರೈಲು ಪ್ರಯಾಣಿಕರ ಕೊರತೆ; 3 ಬೋಗಿಗಳ ಕಡಿತ


Team Udayavani, Apr 12, 2017, 12:16 PM IST

train.jpg

ಮಂಗಳೂರು: ಪ್ರಯಾಣಿಕರ ಕೊರತೆಯಿಂದಾಗಿ  ಯಶವಂತಪುರ-ಕಾರವಾರ ನಡುವೆ ಸಂಚರಿಸುತ್ತಿರುವ ಹಗಲು ರೈಲಿನ (ನಂ. 16515/16516) ಮೂರು ಬೋಗಿಗಳನ್ನು ಕಡಿತಗೊಳಿಸಲಾಗಿದೆ. ಆ ಮೂಲಕ ಒಟ್ಟು  ಕೋಚ್‌ಗಳ ಸಂಖ್ಯೆಯನ್ನು ಈಗ 18ರಿಂದ 15ಕ್ಕೆ ಇಳಿಸಲಾಗಿದೆ. 

ಹಗಲು ಹೊತ್ತಿನಲ್ಲಿ ವಾರಕ್ಕೆ ಮೂರು ದಿನ ಈ ರೈಲು ಕಾರವಾರದಿಂದ ಮಂಗಳೂರು-ಸುಬ್ರಹ್ಮಣ್ಯ, ಹಾಸನ ಮಾರ್ಗವಾಗಿ ಯಶವಂತಪುರಕ್ಕೆ ಸಂಚರಿಸುತ್ತಿದೆ. ಪ್ರಸ್ತುತ ಈ ರೈಲು ಒಂದು ಎಸಿ ಚೆಯರ್‌ ಕಾರ್‌ ಬೋಗಿ, 9 ದ್ವಿತೀಯ ದರ್ಜೆ ರಿಸರ್ವೇಶನ್‌ ಬೋಗಿ, 6 ಸಾಮಾನ್ಯ ಬೋಗಿ ಹಾಗೂ 2  ಎಸ್‌ಎಲ್‌ಆರ್‌ (ಗಾರ್ಡ್‌) ಬೋಗಿಗಳನ್ನು ಹೊಂದಿವೆ. ಅಲ್ಲದೆ, ಈ ರೈಲಿನ ದ್ವಿತೀಯ ದರ್ಜೆ ರಿಸರ್ವೇಶನ್‌ನಲ್ಲಿ  2 ಬೋಗಿ ಕಡಿತಗೊಳಿಸಿ 7ಕ್ಕೆ ಇಳಿಸಲಾಗಿದೆ. ಸಾಮಾನ್ಯ ಬೋಗಿಗಳ ಪೈಕಿಯೂ 1 ಬೋಗಿ ಕಡಿತಗೊಳಿಸಲಾಗಿದ್ದು, ಆ ಮೂಲಕ ಅದರ ಸಂಖ್ಯೆಯನ್ನು 6ಕ್ಕೆ ಇಳಿಸಲಾಗಿದೆ. ಈ ಬದಲಾವಣೆಯೂ ಎ. 10ರಿಂದಲೇ ಜಾರಿಗೆ ಬಂದಿರುವುದಾಗಿ ನೈಋತ್ಯ ರೈಲ್ವೇ ವಲಯ ತಿಳಿಸಿದೆ.

ಪ್ರಯಾಣಿಕರ ಕೊರತೆ ಕಾರಣ
ಬೋಗಿಗಳನ್ನು ಕಡಿತಗೊಳಿಸಿರುವುದಕ್ಕೆ  ನೈಋತ್ಯ ರೈಲ್ವೇ ಕಾರಣ ನೀಡಿಲ್ಲ. ಆದರೆ  ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ ಆಗಿರುವುದರಿಂದಲೇ ಬೋಗಿಗಳನ್ನು ಕಡಿತಗೊಳಿಸಲು ಕಾರಣ ಎನ್ನಲಾಗಿದೆ. ಈಗ ಈ ರೈಲಿನಲ್ಲಿ ಸುಬ್ರಹ್ಮಣ್ಯದವರೆಗೆ ಮಾತ್ರ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರಿರುತ್ತಾರೆ.  

ಶ್ರವಣಬೆಳಗೊಳ ಮಾರ್ಗ ಬಳಕೆಗೆ ಆಗ್ರಹ
ಕಾರವಾರ- ಯಶವಂತಪುರ- ಕಾರವಾರ (16515/16516) ರೈಲು ಗಾಡಿಯ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವ  ಮೂಲಕ ಶ್ರವಣಬೆಳಗೊಳ ಮಾರ್ಗವಾಗಿ ಓಡಿಸಬೇಕು. ಆಗ ಪ್ರಯಾಣದ ಅವಧಿಯು ಕಡಿಮೆಯಾಗುತ್ತದೆ ಎನ್ನುವುದು ಕರಾವಳಿ ಭಾಗದ ಜನತೆಯ ಒತ್ತಾಸೆಯಾಗಿದೆ.

ವೇಳಾಪಟ್ಟಿ  ಸಮಸ್ಯೆ
ಈ ರೈಲು ಕಾರವಾರದಿಂದ ಬೆಳಗ್ಗೆ  5.30ಕ್ಕೆ  ಹೊರಟು 10.55ಕ್ಕೆ ಮಂಗಳೂರಿನ ಕಂಕನಾಡಿ ಜಂಕ್ಷನ್‌ ತಲುಪುತ್ತದೆ. ಅನಂತರ 11.10ಕ್ಕೆ ಅಲ್ಲಿಂದ ನಿರ್ಗಮಿಸಿ  ರಾತ್ರಿ 10 ಗಂಟೆಗೆ ಯಶವಂತಪುರ ತಲುಪುತ್ತದೆ.  ಮಂಗಳವಾರ, ಗುರುವಾರ ಶನಿವಾರ ಸಂಚರಿಸುತ್ತದೆ. 

ಅದೇ ರೀತಿ, ಯಶವಂತ ಪುರದಿಂದ ಮತ್ತೂಂದು ರೈಲು ಮುಂಜಾನೆ 6.30ಕ್ಕೆ  ಹೊರಟು ಸಂಜೆ 5.40ಕ್ಕೆ ಕಂಕನಾಡಿ ತಲುಪುತ್ತ¤ದೆ. ಅಲ್ಲಿಂದ ಅದು 6 ಗಂಟೆಗೆ ಹೊರಟು ರಾತ್ರಿ 11 ಗಂಟೆಗೆ ಕಾರವಾರ ತಲುಪುತ್ತದೆ. ವಾರದಲ್ಲಿ ಈ ರೈಲು ಸೋಮವಾರ, ಬುಧವಾರ ಹಾಗೂ ಶುಕ್ರವಾರ ಸಂಚರಿಸುತ್ತದೆ.

ಈ ವೇಳಾಪಟ್ಟಿ ಕರಾವಳಿ  ಪ್ರಯಾಣಿಕರಿಗೆ ಹೊಂದಾಣಿಕೆಯಾಗುತ್ತಿಲ್ಲ ಎಂಬ ಬಗ್ಗೆ ದೂರುಗಳು ಹಲವು ತಿಂಗಳಿಂದ ಕೇಳಿಬರುತ್ತಿವೆ.  ಕಾರವಾರದಿಂದ ಬೆಳಗ್ಗೆ  5.30ಕ್ಕೆ  ಹೊರಟರೆ ಯಶವಂತಪುರಕ್ಕೆ  ತಲುಪುವಾಗ  ರಾತ್ರಿ 10 ಗಂಟೆಯಾಗುತ್ತದೆ. ಅಲ್ಲಿಂದ ಮತ್ತೆ  ಬಸ್‌ನಲ್ಲಿ ಅಥವಾ ಇತರ ವಾಹನಗಳಲ್ಲಿ ಬೇರೆ ಕಡೆಗಳಿಗೆ ಹೋಗುವುದಕ್ಕೆ ತೊಂದರೆಯಾಗುತ್ತದೆ. ಇದೇ ರೀತಿ ಬೆಂಗಳೂರಿನಿಂದ ಬೆಳಗ್ಗೆ 6.30ಕ್ಕೆ ಹೊರಟು ಕಂಕನಾಡಿ ಜಂಕ್ಷನ್‌ಗೆ ಬರುವಾಗ ಸಂಜೆ 5.30 ಆಗುತ್ತದೆ. ಮತ್ತೆ ಅದು ಕಾರವಾರ ತಲುಪುವಾಗಲೂ ರಾತ್ರಿ 11 ಗಂಟೆಯಾಗುತ್ತದೆ. ಅಲ್ಲಿಂದಲೂ ಬೇರೆ ಊರುಗಳಿಗೆ  ಪ್ರಯಾಣಿಸುವುದಕ್ಕೆ ಸೂಕ್ತ ಬಸ್‌ ಸೌಲಭ್ಯಗಳಿಲ್ಲ. 

ಮಂಗಳೂರಿನಿಂದ ಬೆಂಗಳೂರಿಗೆ ಹೋಗುವ ಪ್ರಯಾಣಿಕರಿಗೂ ಈ ರೀತಿಯ ವೇಳಾಪಟ್ಟಿ  ಹೊಂದಿಕೆಯಾಗುತ್ತಿಲ್ಲ. ಅದರಲ್ಲಿಯೂ ಈ ರೈಲು ಅರಸೀಕೆರೆ ಮಾರ್ಗವಾಗಿ ಸುತ್ತಿ ಬಳಸಿಕೊಂಡು ಯಶವಂತಪುರ ತಲುಪಲು ಸುಮಾರು 11 ತಾಸುಗಳು ಬೇಕಾಗುತ್ತವೆ. 

ಟಾಪ್ ನ್ಯೂಸ್

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.