ಮಹಾನಗರ ಕನ್ನಡ ಸಂಸ್ಥೆ ವತಿಯಿಂದ  ಸ್ವರ ಸಂಧ್ಯಾ ಕಾರ್ಯಕ್ರಮ 


Team Udayavani, Apr 13, 2017, 3:33 PM IST

11-mum04A.jpg

ಡೊಂಬಿವಲಿ: ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ನಮ್ಮ ಸಿರಿವಂತ ಸಂಸ್ಕೃತಿ  ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹಾನಿಯುಂಟಾಗುವ ಆತಂಕವಿದ್ದು, ನಮ್ಮ ಸಂಸ್ಕೃತಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಮುಂದಿನ ಪೀಳಿಗೆಗಳಿಗೆ ಪರಿಚಯಿಸುವ ಅಗತ್ಯವಿದೆ ಎಂದು ಖ್ಯಾತ ಹಿಂದುಸ್ತಾನಿ ಗಾಯಕ ಪಂಡಿತ ಶೇಷಗಿರಿದಾಸ ಹೇಳಿದ್ದಾರೆ. ಅವರು ಎ. 9ರಂದು ಡೊಂಬಿವಲಿ ಪಶ್ಚಿಮದ ಜನಗಣ ಮನ ಶಾಲೆಯ ಆವರಣದಲ್ಲಿ ಡೊಂಬಿವಲಿ ಮಹಾನಗರ ಕನ್ನಡ ಸಂಸ್ಥೆ ಆಯೋಜಿಸಿದ ಸ್ವರ ಸಂಧ್ಯಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ನಮ್ಮ ಭಾಷೆಗೆ ಗಡಿ ಇದ್ದರೂ ಭಕ್ತಿಗೆ ಯಾವುದೇ ಗಡಿ ಇಲ್ಲ. ನಾವೆಲ್ಲರೂ ಭಗವಂತನನ್ನು ನಿರಂತರವಾಗಿ ಆರಾಧಿಸಬೇಕೆಂಬುದೇ ನಮ್ಮ  ದಾಸ, ಸಂತರ ಅನಿಸಿಕೆ. ಆದ್ದರಿಂದ ಅವರು ರಚಿಸಿದ ರಚನೆಗಳನ್ನು ಹಾಡಿ ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಲ್ಲದೆ,ಪ್ರತಿ ತಾಯಂದಿರು ತಮ್ಮ ಮಗುವಿಗೆ ಒಂದಾದರೂ ದಾಸರ ಪದವನ್ನು ಕಲಿಸಬೇಕೆಂದು ಕರೆ ನೀಡಿದ ಶೇಷಗಿರಿದಾಸರು, ಡೊಂಬಿವಲಿ ಮಹಾನಗರ ಕನ್ನಡ ಸಂಸ್ಥೆಯ ಕನ್ನಡ ನಾಡು ನುಡಿಯ ಸೇವೆಯನ್ನು ಶ್ಲಾಘಿಸಿದರು.

ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಜನಗಣಮನ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ| ರಾಜಕುಮಾರ್‌ ಕೋಹ್ಲಿ ಅವರು, ಸಂಗೀತಕ್ಕೆ ಭಾಷೆ ಇಲ್ಲ. ಸಂಗೀತದಿಂದ ಮನಸ್ಸು ಹಾಗೂ ಪರಿಸರವು ಪವಿತ್ರವಾಗುತ್ತದೆ. ಡೊಂಬಿವಲಿ ಮಹಾನಗರ ಕನ್ನಡ ಸಂಸ್ಥೆಯಿಂದ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಅದಕ್ಕೆ ನಮ್ಮ ಸಹಾಯ ಸಹಕಾರ ಸದಾ ಇರಲಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಪಂಡಿತ ಶೇಷಗಿರಿದಾಸ ಹಾಗೂ ಡಾ| ರಾಜಕುಮಾರ್‌ ಕೋಹ್ಲಿ ಅವರನ್ನು ಸಂಸ್ಥೆಯ ವತಿಯಿಂದ ಶಾಲು, ಶ್ರೀಫಲ, ನೆನಪಿನ ಕಾಣಿಕೆ, ಸಮ್ಮಾನ ಪತ್ರ ನೀಡಿ ಗೌರವಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಸತೀಶ್‌ ಆಲಗೂರ ಅವರು ಸ್ವಾಗತ ಹಾಗೂ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆ ನಡೆದುಬಂದ ದಾರಿ ಹಾಗೂ ಅದರ ಯೋಚನೆ ಮತ್ತು ಯೋಜನೆಗಳನ್ನು ವಿವರಿಸಿದರು.

ಪಂ| ಶೇಷಗರಿದಾಸ ಅವರು 2 ಗಂಟೆಗಳ ಕಾಲ ತಮ್ಮ ಸುಮಧುರ ಕಂಠಸಿರಿಯಿಂದ ದಾಸವಾಣಿಯನ್ನು ಪ್ರಸ್ತುತ ಪಡಿಸಿ ನೂರಾರು ಸಂಗೀತ ಪ್ರಿಯರನ್ನು ಮಂತ್ರಮುಗªಗೊಳಿಸಿದರು. ಈ ಸ್ವರ ಸಂಧ್ಯಾ ಕಾರ್ಯಕ್ರಮಕ್ಕೆ ಶ್ರೀಪಾದದಾಸ (ಹಾರೊ¾àನಿಯಂ) ವಿಜಯ್‌ ಕುಲಕರ್ಣಿ, ಗೋಪಾಲ್‌ (ತಬಲಾ) ಅವರು ಸಹಕರಿಸಿದರು.

ಸಮಾರಂಭಕ್ಕೆ ಗೌರವ ಅತಿಥಿಗಳಾಗಿ ಆಗಮಿಸಿದ ಬಂಟರ ಸಂಘ ಡೊಂಬಿವಲಿ ವಿಭಾಗದ ಗೌರವ ಕಾರ್ಯದರ್ಶಿ ಆನಂದ ಶೆಟ್ಟಿ ಎಕ್ಕಾರು ಅವರನ್ನು ಸಂಸ್ಥೆಯ ವತಿಯಿಂದ ಸಮ್ಮಾನಿಸಲಾಯಿತು.

ವಾಸಂತಿ ದೇಶಪಾಂಡೆ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ವಿದ್ಯಾವತಿ ಆಲಗೂರ ನಿರೂಪಿಸಿದರು. ವೆಂಕಟೇಶ ಕುಲಕರ್ಣಿ ಅವರು ಗಣ್ಯರನ್ನು ಪರಿಚಯಿಸಿದರು. ಡಾ| ಬಿ.ಆರ್‌. ದೇಶಪಾಂಡೆ ವಂದಿಸಿದರು.

ಡೊಂಬಿವಲಿ ಕರ್ನಾಟಕ ಸಂಘದ ಕಾರ್ಯಾಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ, ಕಾರ್ಯದರ್ಶಿ ಸನತ್‌ಕುಮಾರ್‌ ಜೈನ್‌, ಡೊಂಬಿವಲಿ ಮಹಾನಗರ ಕನ್ನಡ ಸಂಘದ ಪದಾಧಿಕಾರಿಗಳಾದ ಜಿ. ಎನ್‌. ಸೋಮಾ, ಗುರುರಾಜ ಪೋತನೀಸ್‌, ದತ್ತಾತ್ರೇಯ ದೇಶಪಾಂಡೆ, ಎಂ. ಆರ್‌. ಹೊಸಕೋಟಿ, ಸೋಮಶೇಖರ ಮಸಳಿ, ಲಕ್ಷ್ಮೀ ನಾರಾಯಣ ಆಲೂರ್‌ ಹಾಗೂ ಮೊದಲಾದವರು ಉಪಸ್ಥಿತರಿದ್ದರು. 

 ಚಿತ್ರ-ವರದಿ: ಗುರುರಾಜ ಪೋತನೀಸ್‌

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.