ತಮಿಳು ಮೂಲದ ಯಕ್ಷ ಕಲಾವಿದನಿಗೆ “ಸೂರು ಯೋಜನೆ’


Team Udayavani, Apr 13, 2017, 4:01 PM IST

Arun-Kumar-Jarkala.jpg

ಉಡುಪಿ: ಹಾಸ್ಯರಂಗದಲ್ಲಿ ಉತ್ತುಂಗಕ್ಕೇರಿದವರ ಜೀವನ ನೋವಿನಿಂದ ಕೂಡಿತ್ತೆಂಬುದಕ್ಕೆ ಹಲವು ಉದಾಹರ‌ಣೆಗಳಿವೆ. ಯಕ್ಷಗಾನವೂ ಈ ಪರಿಸ್ಥಿತಿಗೆ ಹೊರತೇನಲ್ಲ. ಅನೇಕ ಯಕ್ಷ ಕಲಾವಿದರ ಬದುಕು ನಿಜಜೀವನದಲ್ಲಿ ಬಡತನದಿಂದ ಕೂಡಿರುತ್ತದೆಂಬುದು ಒಪ್ಪಿಕೊಳ್ಳಲೇಬೇಕಾದ ಕಟುಸತ್ಯ. ಅಂತಹವರಲ್ಲಿ  ತಮಿಳುನಾಡು ಮೂಲದ ಯಕ್ಷ ಕಲಾವಿದ ಅರುಣ್‌ ಕುಮಾರ್‌ ಜಾರ್ಕಳ ಕೂಡ ಒಬ್ಬರು.

ಸತತ 14 ವರ್ಷಗಳಿಂದ ಯಕ್ಷರಂಗದಲ್ಲಿ ಕಲಾವಿದನಾಗಿªರೂ ವಾಸಕ್ಕಾಗಿ  ಸ್ವಂತ ಸೂರಿಲ್ಲ. ಈಗ ತಾನು ಇಷ್ಟೆಲ್ಲ ಬೆಳೆಯಲು ಸಾಧ್ಯವಾದ ಯಕ್ಷರಂಗ ತನಗೊಂದು ಮನೆಯನ್ನು ಕಟ್ಟಿಸಿ ಕೊಡಲಾರದೇ ಎಂದು ಯೋಚಿಸಿದ ಅರುಣ್‌ ಗೃಹ ನಿರ್ಮಾಣ ಸಹಾಯಾರ್ಥ ಎ. 13ರಂದು ಕುಂದಾಪುರದಲ್ಲಿ ಸಾಲಿಗ್ರಾಮ ಮೇಳ ಹಾಗೂ ಅತಿಥಿ ಕಲಾವಿದರೊಂದಿಗೆ   “ಮಾನಿಷಾದ’ ಯಕ್ಷಗಾನ ಪ್ರಸಂಗದ ಪ್ರದರ್ಶನ ನಡೆಯಲಿದೆ.

ಮೂಲ ತಮಿಳುನಾಡಾದರೂ ಅರುಣ್‌ ಹುಟ್ಟಿದ್ದು ಉಡುಪಿ ಜಿÇÉೆಯ ಕಟಪಾಡಿ ಸಮೀಪದ ಪಾಜಕದಲ್ಲಿ. ಹೆತ್ತವರಾದ ದೊರೆಸ್ವಾಮಿ ಹಾಗೂ ಲೀಲಾವತಿ ದಂಪತಿ ಉದ್ಯೋಗ ನಿಮಿತ್ತವಾಗಿ ಇಲ್ಲಿಗೆ ಬಂದು ಇಲ್ಲಿಯೇ ವಾಸವಾಗಿದ್ದಾರೆ. ದೈವ ಭಕ್ತರಾದ ದೊರೆಸ್ವಾಮಿ ಪ್ರತಿ ವರ್ಷ ಅಯ್ಯಪ್ಪನ ಮಾಲೆ ಹಾಕುವುದನ್ನು ತಪ್ಪಿಸುತ್ತಿರಲಿಲ್ಲ. ಆ ಸಮಯದಲ್ಲಿ ಊರವರ ಸಹಾಯದೊಂದಿಗೆ ಯಕ್ಷಗಾನ ಬಯಲಾಟ ಆಡಿಸುತ್ತಿದ್ದರು. 

ಇದರಿಂದ ಅರುಣ್‌ ಕುಮಾರ್‌ ಪ್ರೇರಣೆಗೊಂಡು ಯಕ್ಷಗಾನ ಕಲಾವಿದನಾಗಿ ರೂಪುಗೊಳ್ಳಲು ಸಾಧ್ಯವಾಯಿತು. ಅರುಣ್‌ ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ಮಿಂಚುತ್ತಿರುವುದು ಅವರ ಅಸಾಧಾರಣ ಪ್ರತಿಭೆಗೆ ಹಿಡಿದ ಕೈಗನ್ನಡಿ. ಪ್ರಸ್ತುತ ತೆಂಕು ಹಾಗೂ ಬಡಗು ಉಭಯ ತಿಟ್ಟುಗಳಲ್ಲಿಯೂ ವಿಶಿಷ್ಟ ಶೈಲಿಯ ಹಾಸ್ಯದಿಂದ ಜನರನ್ನು ರಂಜಿಸುತ್ತಿದ್ದಾರೆ. ಧರ್ಮಸ್ಥಳ ತರಬೇತಿ ಶಿಬಿರದಲ್ಲಿ ಯಕ್ಷಗಾನದ ಕಲೆಗಳನ್ನು ಕರಗತ ಮಾಡಿಕೊಂಡ ಅವರು ಅನಂತರ ಕಟೀಲು ಮೇಳಕ್ಕೆ ಸೇರಿಕೊಂಡರು. ಮೊದಲು ಚಿಕ್ಕ ಪುಟ್ಟ ವೇಷಗಳನ್ನು ಮಾಡ‌ುತ್ತಾ ಆನಂತರ ಪ್ರಧಾನ ಹಾಸ್ಯಗಾರನಾಗಿ ಹೆಸರು ಗಳಿಸಿರುತ್ತಾರೆ. 

ವಿಶಿಷ್ಟ ಶೈಲಿಯ ಆಂಗಿಕ ಅಭಿನಯದಿಂದ ಜನರನ್ನು ನಗೆಗಡಲಲ್ಲಿ ತೇಲಿಸಬಲ್ಲ ಸಮರ್ಥ ಹಾಸ್ಯಗಾರರೆಂಬ ಖ್ಯಾತಿಯೂ ಅವರಿಗಿದೆ. ಅಮೆರಿಕ ಹಾಗೂ ಲಂಡನ್‌ನಲ್ಲೂ  ಯಕ್ಷಗಾನ ಪ್ರದರ್ಶಿಸಿದ್ದಾರೆ.ಯಕ್ಷಗಾನ ಕಲಾಭಿಮಾನಿಗಳು ಕೈಸೇರಿಸಿದರೆ ಅರುಣರಂತಹ ಅನೇಕ ಕಲಾವಿದರಿಗೆ ಸೂರು ಬಂದೀತು. 
 

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.