ಅ.ಭಾ.ಹೊರನಾಡ ಕನ್ನಡ ಸಂಘಗಳ 7ನೇ ಮಹಾಮೇಳ ಸಮಾಪ್ತಿ


Team Udayavani, Apr 13, 2017, 5:04 PM IST

12-Mum02a.jpg

ಮುಂಬಯಿ: ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರದ ಜಂಟಿ ಆಯೋಜನೆಯಲ್ಲಿ ಅಖೀಲ ಭಾರತ ಹೊರನಾಡ ಕನ್ನಡ ಸಂಘಗಳ ಏಳನೇ ಮಹಾಮೇಳವು ಎ. 8 ಮತ್ತು ಎ. 9ರಂದು ಎರಡು ದಿನಗಳ ಕಾಲ ಹೈದರಾಬಾದಿನ ಗಚ್ಚಿಬೌಲಿಯ ಮೌಲನಾ ಆಜಾದ್‌ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯದ ಆವರಣದಲ್ಲಿ ವಿವಿಧ ಸಾಹಿತ್ಯಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ದೇಶದಾದ್ಯಂತದ ಸುಮಾರು 450 ಮಂದಿ ಹೊರನಾಡ ಕನ್ನಡ ಸಂಘಗಳ ಪದಾಧಿಕಾರಿಗಳು ಎರಡು ದಿನ ಪಾಲ್ಗೊಂಡು ಮಹಾಮೇಳದ ಯಶಸ್ಸಿಗಾಗಿ ಸಹಕರಿಸಿದರು. ಹಿರಿಯ ಸಾಹಿತಿ, ಕವಿ ನಾಡೋಜ ಪ್ರೊ| ಕೆ. ಎಸ್‌. ನಿಸಾರ್‌ ಅಹಮದ್‌ ಅವರು ಮಹಾಮೇಳವನ್ನು ಉದ್ಘಾಟಿಸಿ  ಶುಭ ಹಾರೈಸಿದರು. ಮಹಾಮೇಳದ ಅಧ್ಯಕ್ಷತೆಯನ್ನು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ನಾಡೋಜ ಡಾ| ಪಾಟೀಲ ಪುಟ್ಟಪ್ಪ ಅವರು ವಹಿಸಿದ್ದರು.

ಬೀದರ್‌ನ ಪೂಜ್ಯಶ್ರೀ ಬಸವಾನಂದ ಸ್ವಾಮಿಗಳು ಹಾಗೂ ತೋಂಟದಾರ್ಯ ಮಠದ ಪೂಜ್ಯಶ್ರೀ ನಿಜಗುಣ ಪ್ರಭು ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಮಹಾಮೇಳವು ಉದ್ಘಾಟನೆಗೊಂಡಿತು. ಭಾಷಾ ಬಾಂಧವ್ಯ, ಮಹಿಳಾ ಅಂತಶಕ್ತಿ, ಕಲಾ ಪ್ರತಿಭೋತ್ಸವ, ಕವಿ ಮಿಲನ, ಗಡಿನಾಡು ಮತ್ತು ಹೊರನಾಡಿನಲ್ಲಿ ಕನ್ನಡ ಮತ್ತು ಕನ್ನಡಿಗರು ಹೀಗೆ ಐದು ಗೋಷ್ಠಿಗಳು ನಡೆದವು.

ಏಳನೇ ಮಹಾಮೇಳದ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ಗಡಿನಾಡ ಹಾಗೂ ಹೊರನಾಡ ಕನ್ನಡ ಶಾಲೆಗಳಿಗೆ ಕನ್ನಡದ ಬೆಳವಣಿಗೆಗೆ ಹೆಚ್ಚಿನ ಅನುದಾನ ನೀಡಲು ಸರಕಾರ ಬದ್ಧವಾಗಿದೆ ಎಂದು ಘೋಷಿಸಿದರು.

ಒಳನಾಡು ಕನ್ನಡ ಶಾಲೆ ಮತ್ತು ವಿದ್ಯಾರ್ಥಿಗಳಿಗೆ ನೀಡುವ ಎಲ್ಲ ಸವಲತ್ತುಗಳನ್ನು ಗಡಿ ಹಾಗೂ ಹೊರನಾಡು ಕನ್ನಡ ಶಾಲೆಗಳಿಗೂ ಒದಗಿಸಬೇಕು ಎಂಬ ಒಕ್ಕೊರಲಿನ ಆಗ್ರಹಗಳನ್ನೊಳಗೊಂಡ ನಾಲ್ಕು ನಿರ್ಣಯಗಳನ್ನು ಮಹಾ ಮೇಳದಲ್ಲಿ ಕೈಗೊಂಡು, ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶಂಕರ ಹಲಗತ್ತಿ ಮಂಡಿಸಿದ ನಿರ್ಣಯಗಳನ್ನು ಸಭೆಯು ಅನುಮೋದಿಸಿತು.

ಮುಂಬಯಿಯಿಂದ  ಕನ್ನಡ ಭವನ ಎಜುಕೇಶನ್‌ ಸೊಸೈಟಿಯ ಅಧ್ಯಕ್ಷ ಎ. ಬಿ. ಶೆಟ್ಟಿ, ಉಪಾಧ್ಯಕ್ಷ ಡಿ. ಬಿ. ಅಮೀನ್‌, ಕೋಶಾಧಿಕಾರಿ ಪುರುಷೋತ್ತಮ ಪೂಜಾರಿ, ಮಾಟುಂಗ ಪೂರ್ವದ ಮುಂಬಯಿ ಕನ್ನಡದ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸತೀಶ್‌ ಎನ್‌. ಬಂಗೇರ, ಕೋಶಾಧಿಕಾರಿ ಸುಧಾಕರ ಸಿ. ಪೂಜಾರಿ, ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಶೋಕ್‌ ಸುವರ್ಣ ಮತ್ತು ದಯಾನಂದ ಬಂಗೇರ ಅವರು ಮಹಾಮೇಳದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.