ಭೀಮ್ ಆಧಾರ್ app ಬಿಡುಗಡೆ, ಅಂಬೇಡ್ಕರ್ ಈಶ್ವರ ಇದ್ದಂತೆ; ಮೋದಿ
Team Udayavani, Apr 14, 2017, 3:08 PM IST
ಮಹಾರಾಷ್ಟ್ರ:ಡಿಜಿಟಲ್ ಇಂಡಿಯಾಗೆ ಹೆಚ್ಚಿನ ಒತ್ತು ನೀಡಿದ್ದೇವೆ. ನಗದು ರಹಿತ ವಹಿವಾಟಿಗೆ ಈಗ ಸೂಕ್ತ ಕಾಲ ಬಂದಿದೆ. ಡಿಜಿಟಲ್ ಇಂಡಿಯಾದಿಂದ ಬಡವರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮಹಾರಾಷ್ಟ್ರದ ನಾಗ್ಪುರದಲ್ಲಿ ಶುಕ್ರವಾರ ಡಿಜಿ ಧನ್ ಜನ್ ಮೇಳಕ್ಕೆ ಚಾಲನೆ ನೀಡಿದ ಅವರು ಅಂಬೇಡ್ಕರ್ ಅವರ 126ನೇ ಜನ್ಮ ಜಯಂತಿ ಹಿನ್ನೆಲೆಯಲ್ಲಿ ಭೀಮ್ ಆಧಾರ್ ಪೇ ಆಪ್ ಬಿಡುಗಡೆ ಮಾಡಿ ಮಾತನಾಡಿದರು.
ಅಂಬೇಡ್ಕರ್ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಅಂಬೇಡ್ಕರ್ ಅವರು ಈಶ್ವರ ಇದ್ದಂತೆ, ತಾನು ವಿಷ ಕುಡಿದು ಬೇರೆಯವರಿಗೆ ಅಮೃತ ನೀಡಿದ ಮಹಾನ್ ವ್ಯಕ್ತಿ. ದೇಶದಲ್ಲಿ ಅಸ್ಪ್ರಶ್ಯತೆ ಹೋಗಲಾಡಿಸಿದ ವ್ಯಕ್ತಿ ಅವರು ಎಂದು ಹೇಳಿದರು.
ಭೀಮ್ ಆಪ್ ಬಡವರು ಸೇರಿದಂತೆ ಪ್ರತಿಯೊಬ್ಬರಿಗೂ ಹೆಚ್ಚಿನ ಅನುಕೂಲ ಒದಗಿಸಲಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ನಿಮ್ಮ ಮೊಬೈಲ್ ಫೋನ್ ನಿಮ್ಮ ಎಟಿಎಂ ಆಗಲಿದೆ ಎಂದು ತಿಳಿಸಿದರು.
ಭೀಮ್ ಆಪ್ ನ ಯಶಸ್ಸಿನ ಬಗ್ಗೆ ಇಡೀ ಜಗತ್ತೇ ಅಧ್ಯಯನ ನಡೆಸಲಿದೆ. ಈ ಡಿಜಿಧನ್ ಯೋಜನೆ ಸ್ವಚ್ಛತೆಯ ಅಭಿಯಾನವಾಗಿದೆ. ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೂ ಇದು ದಾರಿಯಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ