ಬಿಜೆಪಿ ವಿರೋಧಿ ಬಣಕ್ಕೆ ಅಖೀಲೇಶ್ ಯಾದವ್ ಬೆಂಬಲ
Team Udayavani, Apr 16, 2017, 12:51 PM IST
ಲಕ್ನೋ: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವಿರುದ್ಧ ಬಿಎಸ್ಪಿ ನಾಯಕಿ ಮಯಾವತಿ ಬಿಜೆಪಿ ವಿರುದ್ಧ ಸಮರ ಸಾರಿರುವಂತೆಯೇ, ಎಸ್ಪಿ ನಾಯಕ ಅಖೀಲೇಶ್ ಯಾದವ್ ಅದಕ್ಕೆ ದನಿಗೂಡಿಸಿದ್ದಾರೆ. ಇವಿಎಂಗಳು ವಿಶ್ವಾಸಾರ್ಹತೆ ಕಳೆದುಕೊಂಡಿವೆ. ಮುಂಬರುವ ಚುನಾವಣೆಯಲ್ಲಿ ಮತಪತ್ರಗಳನ್ನು ಬಳಕೆ ಮಾಡಬೇಕು. ಚುನಾವಣಾ ಆಯೋಗ ಮತಯಂತ್ರಗಳ ಬಗ್ಗೆ ಎದ್ದಿರುವ ಶಂಕೆ ನಿವಾರಿಸುವ ಉತ್ತರದಾಯಿತ್ವ ಹೊಂದಿದೆ ಎಂದಿದ್ದಾರೆ.
ಲಕ್ನೋದಲ್ಲಿ ಮಾತನಾಡಿದ ಅವರು, “ಬಿಜೆಪಿ ಪ್ರಚಾರದ ವಿರುದ್ಧದ ಬಣದ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸಲು ಸಿದ್ಧನಿದ್ದೇನೆ. ಬಿಜೆಪಿ ವಿಪಕ್ಷಗಳ ನಾಯಕರನ್ನು ಒಂದೇ ವೇದಿಕೆಯಡಿ ತರುವ ನಿಟ್ಟಿನಲ್ಲಿ ನಮ್ಮ ಪಕ್ಷ ಮಹತ್ವದ ಪಾತ್ರ ನಿರ್ವಹಿಸಲಿದೆ’ ಎನ್ನುವ ಮೂಲಕ ಮಾಯಾವತಿ ಪ್ರಯತ್ನಕ್ಕೆ ದನಿಗೂಡಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಅನಂತರ ಬಿಎಸ್ಪಿ ಹಾಗೂ ಎಸ್ಪಿ ನಾಯಕರಿಂದ ಒಮ್ಮತದ ಹೇಳಿಕೆ ಬಂದಿರುವುದು ಇದೇ ಮೊದಲು.
“ಮತಯಂತ್ರದಲ್ಲಿ ಯಾವಾಗ ಸಮಸ್ಯೆ ಕಾಣಿಸಿಕೊಳ್ಳುತ್ತದೆ, ಯಾವಾಗ ಸಾಫ್ಟ್ವೇರ್ ಕೈಕೊಡುತ್ತದೆ ಎಂದು ಹೇಳಲಾಗದು. ಹೀಗಾಗಿ ನಮಗೆ ವಿದ್ಯುನ್ಮಾನ ಮತಯಂತ್ರಗಳ ಮೇಲೆ ವಿಶ್ವಾಸವಿಲ್ಲ’ ಎಂದು ಅಖೀಲೇಶ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ
Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ
IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ