ಶಾಲ್ಮಲಾದಿಂದ ಥೇಮ್ಸ್‌ವರೆಗೆ ಶಾಸಕ ಬೆಲ್ಲದ ಪ್ರವಾಸ


Team Udayavani, Apr 18, 2017, 3:45 AM IST

17hub-dwd1.jpg

ಧಾರವಾಡ: ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ದಕ್ಷಿಣ ಏಷಿಯಾ ಮತ್ತು ಯುರೋಪ್‌ ರಾಷ್ಟ್ರಗಳ ಮಧ್ಯೆ ಐತಿಹಾಸಿಕವಾಗಿ ದಾಖಲಾಗಿರುವ ರೇಷ್ಮೆ ಮಾರ್ಗದಲ್ಲಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ.

ಈಶಾನ್ಯ ಭಾರತದ ಮಣಿಪುರ ರಾಜ್ಯದ ರಾಜಧಾನಿ ಇಂಫಾಲ್‌ ನಗರದಿಂದ ಕಾರಿನಲ್ಲಿ ಪ್ರಯಾಣ ಆರಂಭಿಸಿರುವ ಅವರು, ಭಾರತದಿಂದ ಲಂಡನ್‌ವರೆಗಿನ 19 ಸಾವಿರ ಕಿ.ಮೀ. ರಸ್ತೆ ಮಾರ್ಗದ ಮೂಲಕವೇ ಪ್ರವಾಸ ಕೈಗೊಂಡಿದ್ದಾರೆ. 2  ದಿನಗಳ ಹಿಂದೆಯೇ ಧಾರವಾಡದಿಂದ ತೆರಳಿರುವ ಶಾಸಕ ಬೆಲ್ಲದ, ಬೆಂಗಳೂರಿನಿಂದ ಮಣಿಪುರದ ರಾಜಧಾನಿ ಇಂಫಾಲ್‌ವರೆಗೂ ವಿಮಾನದಲ್ಲಿ ತೆರಳಿ, ಅಲ್ಲಿಂದ ತಮ್ಮ ಸ್ನೇಹಿತರೊಂದಿಗೆ ಕಾರ್‌ ಮೂಲಕ ತೆರಳಿದ್ದಾರೆ.

ಭಾರತೀಯ ಸಂಸ್ಕೃತಿ ಸಾಗಿದ ಹೆಜ್ಜೆ ಗುರುತುಗಳ ಪುನರ್‌ ಭೇಟಿ ಮಾಡುವ ಉದ್ದೇಶದಿಂದ ಈ ಪ್ರವಾಸ ಹಮ್ಮಿಕೊಂಡಿರುವುದಾಗಿ ಹೇಳಿರುವ ಬೆಲ್ಲದ, ತಮ್ಮ ಪತ್ನಿ ಹಾಗೂ ಕೆಲವು ಸ್ನೇಹಿತರನ್ನು ತಮ್ಮೊಂದಿಗೆ ಕರೆದೊಯ್ದಿದ್ದಾರೆ. ಈ ಪ್ರವಾಸವು ಇಂಫಾಲದಿಂದ ಆರಂಭವಾಗಿ ಮಾಯನ್ಮಾರ್‌ಗೆ ಭೇಟಿ ನೀಡಿ ಅಲ್ಲಿ ನೇತಾಜಿ ಸುಭಾಸಚಂದ್ರ ಬೋಸ್‌ ಕಟ್ಟಿದ್ದ ಇಂಡಿಯನ್‌ ನ್ಯಾಷನಲ್‌ ಆರ್ಮಿ ಹಾಗೂ ಮೊಘಲ್‌ ಸಾಮ್ರಾಟ್‌ ಬಹದ್ದೂರ್‌ ಷಾ ಜಾಫರ್‌ ಅವರ ಸಮಾಧಿಗೆ ಭೇಟಿ, ಆ ನಂತರ ವಿಯಟ್ನಾಂ, ಚೀನಾ, ತಜಿಕಿಸ್ತಾನ, ಕಜಿಕಿಸ್ತಾನ, ಕರ್ಗಿಸ್ತಾನ, ರಷ್ಯಾ  ಮೂಲಕ ಲಂಡನ್‌ ನಗರ ತಲುಪಲಿದ್ದಾರೆ. ಅಲ್ಲಿನ ಥೇಮ್ಸ್‌ ನದಿಯ ದಂಡೆಯ ಮೇಲಿರುವ ವಿಶ್ವಗುರು ಬಸವಣ್ಣವರ ಮೂರ್ತಿಯ ದರ್ಶನ ಪಡೆಯುವುದರೊಂದಿಗೆ ತಮ್ಮ ಪ್ರವಾಸ ಕೊನೆಗೊಳಿಸಲಿದ್ದಾರೆ.

ಪ್ರವಾಸದ ಕುರಿತು ಶಾಸಕ ಬೆಲ್ಲದ  ಯಾರಿಗೂ ಹೇಳದೇ ತಮ್ಮ ಒಡನಾಡಿಗಳಿಗೆ ಮಾತ್ರ ತಿಳಿಸಿದ್ದು, ಮಾಧ್ಯಮಗಳಿಗೂ ಈ ಕುರಿತು ಯಾವುದೇ ಸುಳಿವು ನೀಡಿಲ್ಲ.

ರೇಷ್ಮೆ ಹೆದ್ದಾರಿ ಪ್ರವಾಸ: ಈ ಕುರಿತು ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ ನೀಡಿರುವ ಶಾಸಕ ಬೆಲ್ಲದ, ಭಾರತವು ಕ್ರಿ.ಪೂ 300ರ ವೇಳೆಯಲ್ಲಿ ಜಗತ್ತಿನ ಇತರೇ ದೇಶಗಳೊಂದಿಗೆ ವಾಣಿಜ್ಯ ಹಾಗೂ ವ್ಯಾಪಾರ ಸಂಬಂಧಗಳನ್ನು ಹೊಂದಿತ್ತು. ಮೂರು ಕಡೆ ಸಮುದ್ರ ಹಾಗೂ ಒಂದು ಭಾಗಕ್ಕೆ ಹಿಮಾಲಯ ಹೊಂದಿರುವ ಈ ದೇಶ, ವಿಭಿನ್ನ ಮಾರ್ಗಗಳನ್ನು ಕಂಡುಕೊಂಡು ಹೊರ ದೇಶಗಳೊಂದಿಗೆ ವ್ಯಾಪಾರ ವಹಿವಾಟು ನಡೆಸುತ್ತಿತ್ತು. ಪುರಾತನ ಕಾಲದಲ್ಲಿ ಭಾರತೀಯರು ಹೊಸ ಹೊಸ ವ್ಯವಹಾರಿಕ ಅವಕಾಶಗಳಿಗಾಗಿ ದೂರ ದೂರದ ದೇಶಗಳಿಗೆ ಪ್ರಯಾಣಿಸಿದ್ದಾರೆ.

ಚೀನಾ, ರೋಮ್‌ಗಳಿಗೂ ಸಂಪರ್ಕವಿತ್ತು. ಈ ಪಥದ ಮೂಲಕ ಪೂರ್ವ ಹಾಗೂ ಪಶ್ಚಿಮ ರಾಷ್ಟ್ರಗಳು ಸಾಗಿ ಅಲ್ಲಿಯ ಜನರ ಬದುಕು, ವಿದ್ಯೆ, ಕಲೆ, ಸಂಗೀತ ಹಾಗೂ ಸಂಸ್ಕೃತಿಗಳ ಮೇಲೆ ತನ್ನ ಪ್ರಭಾವ ಬೀರಿದೆ. ಈ ತರಹದ ದಾರಿಗಳಲ್ಲಿ ನಮ್ಮ ದೇಶದ ಸಂಸ್ಕೃತಿಯ ಬೇರೆ ಬೇರೆ ದೇಶಗಳಿಗೆ ಪ್ರಯಾಣಿಸಿ ಅಲ್ಲಿನ ನಾಗರಿಕತೆಗಳೊಂದಿಗೆ ಬೆರೆತುಕೊಂಡ ರೀತಿ ಇಂದಿಗೂ ನನ್ನನ್ನು ವಿಸ್ಮಯಗೊಳಿಸಿದೆ. ಈ ಕಾರಣಕ್ಕೆ ನಾನು ನನ್ನ ಸ್ನೇಹಿತರೊಂದಿಗೆ  ಇದೇ ರೇಶೆ¾ ಹೆದ್ದಾರಿ ಮುಖಾಂತರ ಸಾಗಿ ಭಾರತೀಯ ಸಂಸ್ಕೃತಿ ಸಾಗಿದ ಹೆಜ್ಜೆ ಗುರುತುಗಳ ಪುನರ್‌ ಭೇಟಿ ಮಾಡಬೇಕೆಂದು ನಿರ್ಧರಿಸಿದ್ದೇನೆ ಎಂದು ಶಾಸಕ ಅರವಿಂದ ಹೇಳಿದ್ದಾರೆ.

ಸದ್ದಿಲ್ಲದೇ ಪ್ರಯಾಣ: ಈ ಪ್ರವಾಸದ ಕುರಿತು ಶಾಸಕ ಬೆಲ್ಲದ ಹೆಚ್ಚು ಸದ್ದು ಮಾಡಿಲ್ಲ. ಯಾರಿಗೂ ಹೇಳದೇ ತಮ್ಮ ಒಡನಾಡಿಗಳಿಗೆ ಮಾತ್ರ ತಿಳಿಸಿದ್ದು, ಮಾಧ್ಯಮಗಳಿಗೂ ಈ ಕುರಿತು ಯಾವುದೇ ಸುಳಿವು ನೀಡಿಲ್ಲ.

ಡಾ|ಅಂಬೇಡ್ಕರ್‌ ಜಯಂತಿ ದಿನಾಚರಣೆ ವೇಳೆಯೇ ಸಾಂದರ್ಭಿಕವಾಗಿ ಕಾರ್ಯಕರ್ತರಿಗೆ ಈ ವಿಚಾರ ತಿಳಿಸಿ, ಅಲ್ಲಿಂದಲೇ ಪ್ರಯಾಣ ಬೆಳೆಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಅಂಬೇಡ್ಕರ್‌ ಜಯಂತಿ ದಿನವೇ ಅವರಿಗೆ ಬೀಳ್ಕೊಟ್ಟಿದ್ದಾರೆ.

ಈ ಸಂದರ್ಭದಲ್ಲಿ ಮೋಹನ ಸಿದ್ಧಾಂತಿ, ಸಂಜಯ ಕಪಟಕರ, ಶಿವು ಹಿರೇಮಠ, ಪ್ರಕಾಶ ಗೋಡಬೋಲೆ, ವಿಜಯಾನಂದ ಶೆಟ್ಟಿ, ರಾಜು ಕೋಟೆನ್ನವರ, ಸುರೇಶ ಬೇದರೆ, ಈರಣ್ಣ ಹಪಳಿ, ಆನಂದ ಯಾವಗಲ್‌, ಮೋಹನ ರಾಮದುರ್ಗ, ಅರವಿಂದ ಏಗನಗೌಡರ, ರಾಮಚಂದ್ರ ಪೋದೊಡ್ಡಿ ಸೇರಿದಂತೆ ಹಲವರು ಶಾಸಕರ ಪ್ರವಾಸಕ್ಕೆ ಶುಭ ಕೋರಿದ್ದಾರೆ.

ಈ ಪ್ರಯಾಣದ ಹಾದಿಯು ದೂರ ಹಾಗೂ ಕಠಿಣವಾಗಿದ್ದು, ಸುಮಾರು 19,000 ಕಿ.ಮೀ.ಗಳಷ್ಟಿದೆ. ಈ ಸಂದರ್ಭದಲ್ಲಿ ನನ್ನ ಕ್ಷೇತ್ರದ ಜನತೆಯು ನನ್ನನ್ನು ನಮ್ಮ ಬೆಲ್ಲದ ಆ್ಯಪ್‌ ಮುಖಾಂತರ, ಇ-ಮೇಲ್‌ ಮುಖಾಂತರ ಅಥವಾ ನಮ್ಮ ಹುಬ್ಬಳ್ಳಿ-ಧಾರವಾಡ ಕಚೇರಿಗಳಿಗೆ ಭೇಟಿ ಕೊಟ್ಟು ಸಂಪರ್ಕಿಸಬಹುದು.
– ಅರವಿಂದ ಬೆಲ್ಲದ, ಶಾಸಕ

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.