ಕಟ್ಟಪ್ಪನ ಮೇಲಿನ ಸಿಟ್ಟು “ಬಾಹುಬಲಿ 2′ ಮೇಲೆ ಬೇಡ್ರಪ್ಪ


Team Udayavani, Apr 21, 2017, 3:45 AM IST

raJAMOULI.jpg

ಬೆಂಗಳೂರು: ಸತ್ಯರಾಜ್‌ ಅವರ ಅಭಿಪ್ರಾಯ ಏನೇ ಇದ್ದರೂ ಅದು ವೈಯಕ್ತಿಕ. ಅದಕ್ಕೂ ಚಿತ್ರಕ್ಕೂ ಸಂಬಂಧವಿಲ್ಲವಾದ್ದರಿಂದ, ಚಿತ್ರ ಬಿಡುಗಡೆ ಮಾಡುವುದಕ್ಕೆ ಅನುವು ಮಾಡಿಕೊಡಬೇಕೆಂದು ನಿರ್ದೇಶಕ ರಾಜಮೌಳಿ ಮನವಿ ಮಾಡಿದ್ದಾರೆ.

ಕಾವೇರಿ ನದಿಯ ವಿಷಯವಾಗಿ ಕನ್ನಡ ಮತ್ತು ಕರ್ನಾಟಕದ ಕುರಿತು ಅವಹೇಳನಕಾರಿಯಾಗಿ ಮಾತಾಡಿರುವ ತಮಿಳು ನಟ ಸತ್ಯರಾಜ್‌ ಅವರು ಕನ್ನಡಿಗರ ಕ್ಷಮೆ ಕೇಳದಿದ್ದರೆ, ಅವರು ಅಭಿನಯಿಸಿರುವ “ಬಾಹುಬಲಿ 2′ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬುಧವಾರವಷ್ಟೇ ತಿಳಿಸಿದ್ದರು. 

ಜೊತೆಗೆ, ಚಿತ್ರ ಬಿಡುಗಡೆಯಾಗುತ್ತಿರುವ ಏಪ್ರಿಲ್‌ 28ರಂದು ಬೆಂಗಳೂರು ಬಂದ್‌ ಮಾಡುವುದಾಗಿ ಹೇಳಿದ್ದರು. ಈ ವಿಷಯವಾಗಿ “ಬಾಹುಬಲಿ 2′ ಚಿತ್ರದ ನಿರ್ದೇಶಕ ಎಸ್‌.ಎಸ್‌. ರಾಜಮೌಳಿ ಅವರು ಗುರುವಾರ ಬೆಳಗ್ಗೆ ಒಂದು ವೀಡಿಯೋ ಬಿಡುಗಡೆ ಮಾಡಿದ್ದಾರೆ. ಈ ವೀಡಿಯೋದಲ್ಲಿ, ಚಿತ್ರವನ್ನು ಕರ್ನಾಟಕದಾದ್ಯಂತ ಬಿಡುಗಡೆ ಮಾಡುವುದಕ್ಕೆ ಅನುವು ಮಾಡಿಕೊಡಬೇಕೆಂದು ಕನ್ನಡಿಗರನ್ನು ಕೇಳಿಕೊಂಡಿದ್ದಾರೆ.

ನಮಗೂ ಬೇಸರವಿದೆ:
“ಸತ್ಯರಾಜ್‌ ಅವರ ಕೆಲವು ಮಾತುಗಳಿಂದ ಕನ್ನಡಿಗರಿಗೆ ನೋವಾಗಿದೆ ಎಂಬ ಬೇಸರ ನಮಗೂ ಇದೆ. “ಬಾಹುಬಲಿ’ ಚಿತ್ರಕ್ಕೂ ಸತ್ಯರಾಜ್‌ ಮಾತುಗಳಿಗೂ ಯಾವ ಸಂಬಂಧವೂ ಇಲ್ಲ. ಈ ಚಿತ್ರವನ್ನು ನಿರ್ಮಾಣ ಮಾಡಿದವರು ಅವರಲ್ಲ. ಈ ಚಿತ್ರಕ್ಕಾಗಿ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಮುಂತಾದ ಯಾವ ವಿಭಾಗದಲ್ಲೂ ಅವರು ಕೆಲಸ ಮಾಡಿರಲಿಲ್ಲ. ಅವರು ಒಂದು ಪಾತ್ರದಲ್ಲಿ ನಟಿಸಿದ್ದಾರಷ್ಟೇ. ಅದಕ್ಕೆ ಸಂಭಾವನೆಯನ್ನು ಪಡೆದಿದ್ದಾರೆ. ಸತ್ಯರಾಜ್‌ ಅಭಿಪ್ರಾಯ ಏನೇ ಇದ್ದರೂ ಅದು ವೈಯಕ್ತಿಕವೇ ಹೊರತು ಚಿತ್ರತಂಡದಲ್ಲ. ಓರ್ವ ನಟನ ವೈಯಕ್ತಿಕ ಅಭಿಪ್ರಾಯದಿಂದಾಗಿ ಆತ ನಟಿಸಿರುವ ಒಂದು ಚಿತ್ರಕ್ಕೆ ಅಡ್ಡಿ ಉಂಟಾಗುವುದು ಸರಿಯಲ್ಲ’ ಎಂದು ರಾಜಮೌಳಿ ಹೇಳಿದ್ದಾರೆ.

ಸತ್ಯರಾಜುಗೇನು ನಷ್ಟವಿಲ್ಲ:
ಈ ವಿಚಾರದ ಕುರಿತು ಸತ್ಯರಾಜ್‌ ಅವರಿಗೆ ಫೋನ್‌ ಮಾಡಿ ಪರಿಸ್ಥಿತಿಯನ್ನು ತಿಳಿಸಿದ್ದಾಗಿ ಹೇಳುವ ರಾಜಮೌಳಿ , “ಅದಕ್ಕೂ ಮೀರಿದ ಶಕ್ತಿ ನಮಗಿಲ್ಲ. ಒಂಭತ್ತು ವರ್ಷಗಳ ಹಿಂದೆ ಸತ್ಯರಾಜ್‌ ಅವರು ಈ ರೀತಿ ಮಾತನಾಡಿದ್ದಾರೆ. ಆ ನಂತರ ಅವರು ನಟಿಸಿರುವ, ನಿರ್ಮಾಣ ಮಾಡಿರುವ ಹಲವು ಚಿತ್ರಗಳು ಕರ್ನಾಟಕದಲ್ಲಿ ಬಿಡುಗಡೆ ಆಗಿವೆ. “ಬಾಹುಬಲಿ’ ಸಹ ಬಿಡುಗಡೆ ಆಗಿದೆ. ಅವುಗಳನ್ನು ಪ್ರೋತ್ಸಾಹಿಸಿದ್ದ ಹಾಗೆಯೇ “ಬಾಹುಬಲಿ – 2′ ಚಿತ್ರವನ್ನು ಸಹ ಪ್ರೀತಿಯಿಂದ ನೋಡಬೇಕಾಗಿ ನಮ್ಮ ವಿನಂತಿ. ಈ ಚಿತ್ರದ ಬಿಡುಗಡೆಯನ್ನು ನಿಲ್ಲಿಸುವುದರಿಂದ  ಸತ್ಯರಾಜ್‌ ಅವರಿಗೆ ಆಗುವ ಕಷ್ಟ ನಷ್ಟ ಏನೂ ಇಲ್ಲ. ಐದು ವರ್ಷಗಳ ಕಾಲ ಕಷ್ಟಪಟ್ಟು ಕೆಲಸ ಮಾಡಿದ ಕಲಾವಿದರು, ತಂತ್ರಜ್ಞರು, ಹಂಚಿಕೆದಾರರು ಮತ್ತು ಪ್ರೇಕ್ಷಕರ ಕುತೂಹಲಕ್ಕೆ ತಣ್ಣೀರೆರಚಿದಂತಾಗುತ್ತದೆ’ ಎಂದು ಅವರು ಹೇಳಿದ್ದಾರೆ. ಸತ್ಯರಾಜ್‌ ಅವರ ಮೇಲಿನ ಕೋಪವನ್ನು “ಬಾಹುಬಲಿ 2′ ಮೇಲೆ ತೋರಿಸಬಾರದೆಂದು ಎಂದು ವಿನಂತಿಸಿಕೊಳ್ಳುವ ಅವರು, ಕನ್ನಡಿಗರು “ಬಾಹುಬಲಿ – 2′ ಚಿತ್ರವನ್ನು ಪ್ರೋತ್ಸಾಹಿಸಬೇಕೆಂದು ಮನವಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.