ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ: ಪರಮೇಶ್ವರ್
Team Udayavani, Apr 21, 2017, 3:45 AM IST
ಚಿಕ್ಕಮಗಳೂರು: ಮುಂಬರುವ ವಿಧಾನಸಭಾ ಚುನಾವಣೆಯನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ಎದುರಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ, ಗೃಹ ಸಚಿವ ಡಾ|ಜಿ. ಪರಮೇಶ್ವರ್ ಹೇಳಿದರು.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲಾಗುವುದು. ಆದರೂ ಅದಕ್ಕೆ ಓರ್ವ ಮುಖಂಡ ಬೇಕಿದ್ದು, ಆ ಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಲಂಕರಿಸಲಿದ್ದಾರೆ ಎಂದರು. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಪ್ರತಿಕ್ರಿಯಿಸಿ, ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ತಾವು ಬದ್ಧ. ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ, ರಾಹುಲ್ಗಾಂಧಿ ಸೂಚಿಸಿದ ಕೆಲಸ ಮಾಡಲಾಗುವುದು. ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಿರಿ ಎಂದರೂ ಸರಿ, ಸಚಿವರಾಗಿ ಮುಂದುವರಿಯಿರಿ ಎಂದರೂ ಸರಿ. ಅವರು ನೀಡುವ ಆದೇಶ ಪಾಲಿಸುತ್ತೇನೆ ಎಂದು ಹೇಳಿದರು.
ರಾಜ್ಯದ ಉಸ್ತುವಾರಿ ಹೊಣೆ ಹೊತ್ತಿರುವ ದಿಗ್ವಿಜಯ ಸಿಂಗ್ ಈಗಾಗಲೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಹೇಳಿಕೆ ನೀಡಿದ್ದಾರೆ. ಅವರು ಪಕ್ಷದ ಹೈಕಮಾಂಡ್ನ ಪ್ರತಿನಿಧಿ. ಅವರ ಹೇಳಿಕೆಗಿಂತ ಹೆಚ್ಚಿನದೇನನ್ನೂ ಹೇಳುವುದಿಲ್ಲ. ಪಕ್ಷದ ಹೈಕಮಾಂಡ್ 2018ರ ವಿಧಾನಸಭಾ ಚುನಾವಣೆ ಸಮಯದಲ್ಲಿ ರಾಜ್ಯದ ರಾಜಕೀಯದ ಸ್ಥಿತಿಗತಿ ಸಾಧಕ-ಬಾಧಕವನ್ನು ಅರ್ಥ ಮಾಡಿಕೊಂಡು ಒಳ್ಳೆಯ ತೀರ್ಮಾನ ಕೈಗೊಳ್ಳುತ್ತದೆ ಎಂಬ ನಂಬಿಕೆ ತಮಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ