ದಾರಿ ತಪ್ಪಿದ ಮಕ್ಕಳು: ಜಂಗಲ್‌ ಬುಕ್‌ ಅಲ್ಲ; ಇದು ಪುಟಾಣಿ ಸಫಾರಿ


Team Udayavani, Apr 21, 2017, 12:18 PM IST

21-SUCHI-1.jpg

ಕನ್ನಡದಲ್ಲಿ ಈಗಾಗಲೇ ಸಾಕಷ್ಟು ಮಕ್ಕಳ ಚಿತ್ರಗಳು ತಯಾರಾಗಿ ಬಿಡುಗಡೆಯಾಗಿವೆ. ಆ ಸಾಲಿಗೆ “ಪುಟಾಣಿ ಸಫಾರಿ’ ಹೊಸ ಸೇರ್ಪಡೆ. ಹೊಸತಂಡ ಸೇರಿಕೊಂಡು ಹೀಗೊಂದು ಅಡ್ವೆಂಚರ್‌ ಕುರಿತು ಸಿನಿಮಾ ಮಾಡಿದೆ. ಆ ಬಗ್ಗೆ ಹೇಳಲೆಂದೇ ನಿರ್ದೇಶಕ ರವೀಂದ್ರ ವಂಶಿ ತಮ್ಮ ತಂಡದೊಂದಿಗೆ ಪತ್ರಕರ್ತರ ಮುಂದೆ ಹಾಜರಾಗಿದ್ದರು. ನಿರ್ದೇಶಕ ರವೀಂದ್ರ ವಂಶಿ ಅವರಿಗೆ “ಜಂಗಲ್‌ ಬುಕ್‌’ ಚಿತ್ರ ನೋಡಿದಾಗ, ನಾವೇಕೆ ಅಂಥದ್ದೊಂದು ಮಕ್ಕಳ ಸಿನಿಮಾವನ್ನು ಕನ್ನಡದಲ್ಲಿ ಮಾಡಬಾರದು ಅಂತ ಯೋಚನೆ ಬಂತಂತೆ. ಹಾಗೆ ಹುಟ್ಟಿಕೊಂಡ ಯೋಚನೆಯೇ “ಪುಟಾಣಿ ಸಫಾರಿ’. ಇದೊಂದು ಅಡ್ವೆಂಚರ್‌ ಕುರಿತಾದ ಸಿನಿಮಾ ಎಂದು ಮಾತಿಗಿಳಿದ ಅವರು, ಬರೀ ಓದಿನ ಕಡೆ ಗಮನಹರಿಸುವ ಮಕ್ಕಳು, ಒಮ್ಮೆ ಕಾಡಿಗೆ ಹೋಗಿ, ಅಲ್ಲಿ ದಾರಿ ತಪ್ಪಿ, ಕಾಡು ಪ್ರಾಣಿಗಳ ನಡುವೆ ಸಿಲುಕಿ ಅನುಭವಿಸುವ ಸಮಸ್ಯೆಗಳು ಹಾಗೂ ಅವರು ಹೇಗೆ ಅಲ್ಲಿಂದ ಆಚೆ ಬರುತ್ತಾರೆ ಎಂಬುದು ಚಿತ್ರದ ಒನ್‌ಲೈನ್‌. ಇಲ್ಲಿ ಸಫಾರಿ ಅಂದಮೇಲೆ ಪ್ರಾಣಿಗಳು ಇರಲೇಬೇಕು. ಗ್ರಾಫಿಕ್ಸ್‌ ಹೆಚ್ಚಾಗಿ ಬಳಸಲಾಗಿದೆ. ಗ್ರೀನ್‌ಮ್ಯಾಟ್‌ನಲ್ಲೇ ಬಹುತೇಕ ಚಿತ್ರೀಕರಣ ಮಾಡಲಾಗಿದೆ. ಶಿರಸಿ, ಸಿದ್ಧಾಪುರ ಸುತ್ತಮುತ್ತಲ ಅರಣ್ಯ ಪ್ರದೇಶದಲ್ಲಿ ಯಶಸ್ವಿಯಾಗಿ ಚಿತ್ರೀಕರಣ ಮಾಡಿದ್ದು, ಇಷ್ಟರಲ್ಲೇ ಸಿನಿಮಾ ತೋರಿಸುವುದಾಗಿ ಹೇಳಿಕೊಂಡರು ನಿರ್ದೇಶಕರು.

ನಿರ್ಮಾಪಕ ಚಂದ್ರಶೇಖರ್‌ ಅವರಿಗೆ ಇದು ಮೊದಲ ಸಿನಿಮಾ. “ಶಾಸಕ ಮುನಿರತ್ನ ಅವರ ಸಹಕಾರ, ಸಲಹೆಯಿಂದ ಈ ಚಿತ್ರ ಮಾಡಿದ್ದೇನೆ. ಇಲ್ಲಿ ಮಕ್ಕಳಿಗೆ ಇಷ್ಟವಾಗುವಂತಹ ಅಂಶಗಳಿವೆ. ಪೋಷಕರೂ ತಿಳಿದುಕೊಳ್ಳುವ ವಿಷಯಗಳಿವೆ. ಇದೊಂದು ಮನರಂಜನೆಯ ಜತೆಗೆ ಸಣ್ಣದ್ದೊಂದು ಸಂದೇಶ ಸಾರುವ ಚಿತ್ರ’ ಎಂದು ವಿವರ ಕೊಟ್ಟರು ಅವರು.

ಅಂದು ಚಿತ್ರದ ಹಾಡು ಮತ್ತು ಟೀಸರ್‌ ರಿಲೀಸ್‌ ಮಾಡಿದ ಶಾಸಕ ಹಾಗೂ ನಿರ್ಮಾಪಕರ ಸಂಘದ ಅಧ್ಯಕ್ಷ ಮುನಿರತ್ನ, “ಚಂದ್ರಶೇಖರ್‌ ನಮ್ಮ ಕ್ಷೇತ್ರದವರು. ಮೊದಲ ಸಿನಿಮಾ ಆಗಿದ್ದರಿಂದ ಭಯ ಇದ್ದೇ ಇರುತ್ತೆ. ಮಕ್ಕಳ ಸಿನಿಮಾಗೆ ಸರ್ಕಾರದಿಂದ ಸಿಗುವ ಎಲ್ಲಾ ಸವಲತ್ತುಗಳನ್ನೂ ಕಾನೂನು ರೀತಿಯಲ್ಲಿ ಸಿಗಲು ಸಹಾಯ ಮಾಡುತ್ತೇನೆ. ಕನ್ನಡ ಚಿತ್ರರಂಗ ಸಣ್ಣ ಮಾರುಕಟ್ಟೆ ಹೊಂದಿದೆ. ಹಾಗಾಗಿ ಇಲ್ಲಿ ಯಾರೇ ಬಂದರೂ, ಇತಿಮಿತಿಯಲ್ಲಿ ಸಿನಿಮಾ ಮಾಡಬೇಕು’ ಎಂದು ಕಿವಿ ಮಾತು ಹೇಳಿದರು ಮುನಿರತ್ನ.

ಚಿತ್ರಕ್ಕೆ ಯೋಗರಾಜ್‌ ಭಟ್‌ ಗೀತೆ ಬರೆದರೆ, ವೀರ್‌ ಸಮರ್ಥ್ ಸಂಗೀತ ನೀಡಿದ್ದಾರೆ. ಜೀವನ್‌ ಛಾಯಾಗ್ರಹಣವಿದೆ. ಸಿ.ರವಿಚಂದ್ರನ್‌ ಅವರು ಕತ್ತರಿ ಪ್ರಯೋಗಿಸಿದ್ದಾರೆ. ಚಿತ್ರದಲ್ಲಿ ರಾಕಿನ್‌, ರಾಜೀವ್‌, ವಿಜಯ್‌, ಸಹನಾ, ಬೇಬಿ ಮಾನಸ ಇತರರು ನಟಿಸಿದ್ದಾರೆ. ಮನೀಶ್‌, ರೇಣುಕಾ ಪ್ರಸಾದ್‌, ರವಿಗೌಡ್ರು, ಮೋಹನ್‌ಕುಮಾರ್‌ ಇತರರು “ಪುಟಾಣಿ ಸಫಾರಿ’ ತಂಡಕ್ಕೆ ಶುಭಹಾರೈಸುವ ಹೊತ್ತಿಗೆ ಪತ್ರಿಕಾಗೋಷ್ಠಿಗೆ ತೆರೆಬಿತ್ತು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.