ಮಾಸಾಶನಕ್ಕೆ ಸಭೆ, ಗರೋಡಿಗಳಿಗೆ ಅನುದಾನ


Team Udayavani, Apr 24, 2017, 12:47 PM IST

pension.jpg

ಭೂಮಂಜೂರಾತಿಗೆ ಅರ್ಜಿ ಕೊಡಿ: ಸಚಿವ ಕಾಗೋಡು ತಿಮ್ಮಪ್ಪ
ಉಡುಪಿ
,: ಗರೋಡಿಗಳಿಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಅನುದಾನ ಕೊಡಿಸಲು ಅವಕಾಶಗಳಿವೆ. ಗರೋಡಿಗಳ ಜಾಗವನ್ನು ಗರೋಡಿ ಹೆಸರಿನಲ್ಲಿ ಮಾಡಿಕೊಡಲು ತಹಶೀಲ್ದಾರ್‌ಗೆ ಅರ್ಜಿ ಕೊಡಿ. 3 ತಿಂಗಳಲ್ಲಿ ಜಾಗ ಮಂಜೂರು ಮಾಡಿಸಲು ಪ್ರಯತ್ನಿಸುತ್ತೇನೆ. ಗರೋಡಿಗಳ ಗುರಿಕಾರರಿಗೆ ಮಾಸಾಶನ ಕೊಡಿಸಲು ಸದ್ಯವೇ ಸಭೆ ಕರೆಯುತ್ತೇನೆ…

ಇದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪರ ಭರವಸೆ. ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ರವಿವಾರ ಪುರಭವನದಲ್ಲಿ ನಡೆದ ಜಿಲ್ಲಾ ವ್ಯಾಪ್ತಿಯ ಗರೋಡಿ ಗುರಿಕಾರರ ಸಮ್ಮಾನ ಮತ್ತು ಪ್ರಮುಖರ ಸಮ್ಮಿಲನ ಸಮಾರಂಭದ ಸಮಾರೋಪ ಸಭೆಧಿಯಲ್ಲಿ ಮಾತನಾಡಿದ ಅವರು, ಗರೋಡಿಗಳ ದುರಸ್ತಿಗೆ ಮುಜರಾಯಿ ಇಲಾಖೆಯಿಂದ ಹಣ ಕೊಡಿಸಲು ಸಾಧ್ಯವಿದೆ. ಆದರೆ ಮುಜರಾಯಿ ಇಲಾಖೆಗಳಲ್ಲಿ ನೋಂದಣಿಯಾದ ದೇವಧಿಸ್ಥಾನಗಳಿಗೆ ಸಿಕ್ಕಿದಷ್ಟು ಸಿಗುವುಧಿದಿಲ್ಲ ಎಂದರು.

ಸಮುದಾಯ ಭವನಕ್ಕೆ ಅನುದಾನ
ಇದಕ್ಕೂ ಮುನ್ನ ಮಾತನಾಡಿದ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು, ಗರೋಡಿಗಳಿಗೆ ಅನುದಾನ ನೀಡಲು ಮುಜರಾಯಿ ಇಲಾಖೆಯಿಂದ ಸಾಧ್ಯವಿದೆ. ಹಿಂದುಳಿದ ವರ್ಗಗಳ ಇಲಾಖೆಯಿಂದ ಸಮುದಾಯ ಭವನಕ್ಕೆ ಅನುದಾನ ನೀಡಲಾಗುತ್ತಿದೆ. ನನ್ನ ಕ್ಷೇತ್ರದಲ್ಲಿ ಹತ್ತಾರು ಬಿಲ್ಲವರ ಸಮುದಾಯ ಭವನಕ್ಕೆ ಹಣ ಮಂಜೂರು ಮಾಡಿದ್ದೇನೆ. ಗರೋಡಿಗಳ ಗುರಿಕಾರರಿಗೆ ಮಾಸಾಶನ ನೀಡಲು ಸಭೆಯನ್ನು ಕರೆಯುತ್ತೇವೆ ಎಂದು ತಿಳಿಸಿದರು.

ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಸದಸ್ಯ ಜನಾರ್ದನ ತೋನ್ಸೆ, ಮಾಜಿ ಅಧ್ಯಕ್ಷ ರಾಜು ಪೂಜಾರಿ, ಮಾಜಿ ಶಾಸಕ ಬಸವರಾಜ್‌, ಮೀನುಗಾರಿಕಾ ಒಕ್ಕೂಟದ ಅಧ್ಯಕ್ಷ ಯಶಪಾಲ್‌ ಸುವರ್ಣ, ಸಾಮಾಜಿಕ ಮುಖಂಡ ಕೆ. ಉದಯಕುಮಾರ ಶೆಟ್ಟಿ, ನಗರಸಭೆ ಮಾಜಿ ಅಧ್ಯಕ್ಷ ಕಿರಣ್‌ ಕುಮಾರ್‌, ಕಟಪಾಡಿ ವಿಶ್ವನಾಥ ಕ್ಷೇತ್ರದ ಮುಖ್ಯಸ್ಥ ಅಶೋಕ ಸುವರ್ಣ ಮುಖ್ಯ ಅತಿಥಿಗಳಾಗಿದ್ದರು. ವೇದಿಕೆ ಅಧ್ಯಕ್ಷ ಪ್ರವೀಣ್‌ ಪೂಜಾರಿ ಸ್ವಾಗತಿಸಿ ಗೌರವಾಧ್ಯಕ್ಷ ಅಚ್ಯುತ ಅಮೀನ್‌ ಕಲ್ಮಾಡಿ ಪ್ರಸ್ತಾವನೆಗೈದರು.

ಸಮಗ್ರ ಚಿಂತನೆ ಅಗತ್ಯ
ಆರಾಧನಾ ಸ್ಕೀಮ್‌ನಡಿ ಗರೋಡಿಧಿಗಳಿಗೆ ಅನುದಾನ ನೀಡಲು ಸಾಧ್ಯ. ಹಿಂದೆ ಜೈನರು, ಬಂಟರನ್ನು ಸೇರಿಸಿಕೊಂಡು ಗರೋಡಿಗಳ ಚಿಂತನ ಮಂಥನ ನಡೆದಿತ್ತು. ಆದರೆ ದ್ವಂದ್ವ ಉಂಟಾಗಿತ್ತು. ಗರೋಡಿಗಳು ಕೇವಲ ಬಿಲ್ಲವರ ಕೇಂದ್ರವಾಗಿರದೆ ಎಲ್ಲರ ಕೇಂದ್ರವಾಗಿರುವುದರಿಂದ ಎಲ್ಲರನ್ನೂ ಸೇರಿಸಿಕೊಂಡು ಸಮಗ್ರ ಚಿಂತನೆ ನಡೆಸಬೇಕು ಎಂದು ಗೋಷ್ಠಿಯಲ್ಲಿ ಮಾತನಾಡಿದ ಶಾಸಕ ವಿನಯ ಕುಮಾರ ಸೊರಕೆ ಹೇಳಿದರು.

ಗೇಣಿದಾರರಿಗೆ ಮೋಸ ಮಾಡಿದವರು…
ದೇವರಾಜ ಅರಸು ಕಾಲದಲ್ಲಿ 1974ರಲ್ಲಿ ಭೂಮಸೂದೆ ಕಾಯಿದೆ ಜಾರಿಗೆ ಬಂದಾಗ ನಾನು ಶಾಸಕನಾಗಿ ಅರ್ಜಿ ಪತ್ರಗಳನ್ನು ಮುದ್ರಿಸಿ ಇಲ್ಲಿಗೂ ತಂದು ವಿತರಿಸಲು ಹೇಳಿದ್ದೆ. ಕುಂದಾಪುರ ತಾಲೂಕಿನಲ್ಲಿ ಯಾರ್ಯಾರು ಯಾವ್ಯಾವ ರೈತರಿಗೆ ಮೋಸ ಮಾಡಿದ್ದಾರೆ? ಶಾಸಕರೂ ಏನೇನು ಮಾಡಿದ್ದಾರೆನ್ನುವುದು ಗೊತ್ತಿದೆ.

– ಕಾಗೋಡು ತಿಮ್ಮಪ್ಪ

ನಮ್ಮಿಂದಲೂ ತಪ್ಪು…
ದೇವಸ್ಥಾನಗಳಿಗೆ ಪ್ರವೇಶವಿಲ್ಲದ ಕಾಲದಲ್ಲಿ ಕೋಟಿ ಚೆನ್ನಯರು ಗರೋಡಿಧಿ ನಿರ್ಮಿಸಿದರು. ಈಗ ಗರೋಡಿಗಳಲ್ಲಿ ಕೊರಗರು ದೂರಧಿದಲ್ಲಿ ನಿಂತು ಡೋಲು ಹೊಡೆಯುತ್ತಿದ್ದಾರೆ. ನಾವು ಅದೇ ತಪ್ಪು ಮಾಡುಧಿತ್ತಿದ್ದೇವೆ. ಕೊರಗರನ್ನು ಒಳಗೆ ಕರೆದು ಡೋಲು ಸೇವೆ ನಡೆಸುವಂತೆ ನೋಡಬೇಕು. 
– ಸೂರ್ಯೋದಯ ಪೆರಂಪಳ್ಳಿ, ನಟ, ನಿರ್ದೇಶಕ, ನಿರ್ಮಾಪಕ (ಗೋಷ್ಠಿಯಲ್ಲಿ)

ಟಾಪ್ ನ್ಯೂಸ್

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.