ಹುತಾತ್ಮ ಯೋಧರಿಗೆ ನಮನ ಸಲ್ಲಿಸಲು ಮ್ಯಾರಥಾನ್‌


Team Udayavani, Apr 24, 2017, 1:06 PM IST

mys4.jpg

ಮೈಸೂರು: ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮ ಯೋಧರಿಗೆ ನಮನ ಸಲ್ಲಿಸುವ ಉದ್ದೇಶದಿಂದ ನಗರದ ಮೈಸೂರು-ಬನ್ನೂರು ರಸ್ತೆಯಲ್ಲಿರುವ ಎಟಿಎಂಇ ಎಂಜಿನಿಯರಿಂಗ್‌ ಕಾಲೇಜಿನ ವತಿಯಿಂದ ಅಮರ್‌ ಜವಾನ್‌ ಶೀರ್ಷಿಕೆಯಡಿಯಲ್ಲಿ ಭಾನುವಾರ ಮ್ಯಾರಥಾನ್‌ ನಡೆಸಲಾಯಿತು.

ಕಾಲೇಜಿನಲ್ಲಿ ನಡೆಯುತ್ತಿರುವ ಎಟಿಎಮಿ 2017 ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ಹಿಂದೂಸ್ಥಾನ್‌ ಪೆಟ್ರೋಲಿಯಂ ಸಯೋಗದಲ್ಲಿ ಮೈಸೂರು ವಿವಿ ಮೈದಾನದಲ್ಲಿ ಆಯೋಜಿಸಿದ್ದ ಮ್ಯಾರಥಾನ್‌ ಓಟಕ್ಕೆ ಮೇಜರ್‌ ಜನರಲ್‌ ಕುರಂಬಯ್ಯ ಚಾಲನೆ ನೀಡಿ ಮಾತನಾಡಿ, ಯುವಜನತೆ ಇಂತಹ ಮ್ಯಾರಥಾನ್‌ಗಳಲ್ಲಿ ಹೆಚ್ಚಾಗಿ ಭಾಗವಹಿಸುವುದರಿಂದ ಯುವಜನರಲ್ಲಿ ದೇಶಾಭಿಮಾನ ಮೂಡಲಿದೆ ಎಂದರು.

ದೇಶದ ಪ್ರತಿಯೊಬ್ಬ ಪ್ರಜೆಯು ದೇಶದ ಬಗ್ಗೆ ಹೆಮ್ಮೆ, ಗೌರವ ಪ್ರೀತಿಯನ್ನು ಹೊಂದಿರಬೇಕಿದ್ದು, ವಿಶೇಷವಾಗಿ ಯುವಜನರು ದೇಶಭಕ್ತಿ ಬೆಳೆಸಿಕೊಳ್ಳುವ ಮೂಲಕ ದೇಶದ ರಕ್ಷಣೆಗೆ ಸಿದ್ಧರಾಗಿರಬೇಕು. ಆ ಮೂಲಕ ದೇಶಕ್ಕೆ ಯಾವುದೇ ಸಂದರ್ಭದಲ್ಲಿ ಅಪಾಯ ಬಂದರು ಹಿಂಜರಿಯದೆ ದೇಶದ ರಕ್ಷಣೆಗೆ ನಿಲ್ಲಬೇಕು ಎಂದು ಕರೆ ನೀಡಿದರು.

5 ಕಿ.ಮೀ. ಮ್ಯಾರಥಾನ್‌ ಓವೆಲ್‌ ಮೈದಾನ ದಿಂದ ಪ್ರಾರಂಭವಾಗಿ ಸರಸ್ವತಿಪುರಂನ ಅಗ್ನಿ ಶಾಮಕ ಠಾಣೆ, ನ್ಯೂ ಕಾಂತ್‌ರಾಜ್‌ ರಸ್ತೆ, ಕುವೆಂಪುನಗರ ಮೂಲಕ ವಿಶ್ವಮಾನವ ಜೋಡಿರಸ್ತೆ ಮಾರ್ಗವಾಗಿ ಸಂಚರಿಸಿ ಕುಕ್ಕರಹಳ್ಳಿ ಮೂಲಕ ಓವೆಲ್‌ ಮೈದಾನದಲ್ಲಿ ಅಂತ್ಯಗೊಂಡಿತು.

ಇದೇ ಸಂದ¸‌ìದಲ್ಲಿ ಮೈಸೂರು ಜಿಲ್ಲೆ ವ್ಯಾಪ್ತಿಯಲ್ಲಿ ಹುತ್ಮಾತ ಯೋಧರ ಕುಟುಂಬಗಳನ್ನು ಗುರುತಿಸಿ ಅವರ ಕುಟುಂಬಕ್ಕೆ ಧನ ಸಹಾಯ ಮಾಡುವ ಉದ್ದೇಶದಿಂದ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಜನರಿಂದ ನೋಂದಣಿ ಶುಲ್ಕ ಸಂಗ್ರಹಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಗ್ರಹವಾಗುವ ಹಣವನ್ನು ಏ. 27ರಂದು ಕಾಲೇಜಿನಲ್ಲಿ ನಡೆಯುವ ಸಮಾರಂಭದಲ್ಲಿ ಹುತ್ಮಾತ ಯೋಧರ ಕುಟುಂಬಕ್ಕೆ ನೀಡಲಾಗುವುದು ಎಂದು ಕಾಲೇಜಿನ ಅಧಿಕಾರಿಯೊಬ್ಬರು ತಿಳಿಸಿದರು.

ಕ್ರಿಕೆಟಿಗ ಎನ್‌.ಸಿ. ಅಯ್ಯಪ್ಪ, ಸಂಸ್ಥೆ ಆಡಳಿತ ಮಂಡಳಿ ಅಧ್ಯಕ್ಷ ಎಲ್‌. ಅರುಣ್‌ ಕುಮಾರ್‌, ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಡಾ. ಪಾರ್ಥಸಾರಥಿ, ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಕೆ. ಶಿವಶಂಕರ್‌, ಖಜಾಂಚಿ ವೀರೇಶ್‌ ಸೇರಿದಂತೆ ಸಾವಿರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.