ನಕಲಿ ಪಾಸ್‌ಪೋರ್ಟ್‌: ರಾಜನ್‌ ದೋಷಿ 


Team Udayavani, Apr 25, 2017, 3:45 AM IST

Chhota.jpg

ನವದೆಹಲಿ: ಮಂಡ್ಯದ ವಿಳಾಸ ನೀಡಿ ನಕಲಿ ಪಾಸ್‌ಪೋರ್ಟ್‌ ಪಡೆದಿದ್ದ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್‌ ಛೋಟಾ ರಾಜನ್‌(55) ಮತ್ತು ಬೆಂಗಳೂರಿನ ಮೂವರು ನಿವೃತ್ತ ಸರ್ಕಾರಿ ಅಧಿಕಾರಿಗಳು ದೋಷಿಗಳು ಎಂದು ನವದೆಹಲಿಯ ವಿಶೇಷ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ.

ಮೌಲ್ಯಯುತವಾದ ಭದ್ರತೆ ಎನ್ನಲಾಗುವ ಪಾಸ್‌ಪೋರ್ಟ್‌ ಅನ್ನೇ ನಕಲಿ ಮಾಡಿರುವ ಅಪರಾಧಕ್ಕೆ ಜೀವಾವಧಿಯೇ ಗರಿಷ್ಠ ಶಿಕ್ಷೆ. ಮಂಗಳವಾರ ಇವರ ಶಿಕ್ಷೆಯ ಪ್ರಮಾಣಕ್ಕೆ ಸಂಬಂಧಿಸಿದ ವಾದ-ಪ್ರತಿವಾದ ನಡೆಯಲಿದೆ. ಛೋಟಾ ರಾಜನ್‌ ಸದ್ಯ ತಿಹಾರ್‌ ಜೈಲಿನಲ್ಲಿದ್ದು, ಉಳಿದ ಆರೋಪಿಧಿಗಳಾದ ಜಯಶ್ರೀ ದತ್ತಾತ್ರೇಯ ರಾಹಟೆ, ದೀಪಕ್‌ ನಟವರ್‌ಲಾಲ್‌ ಶಾ ಮತ್ತು ಲಲಿತಾ ಲಕ್ಷ್ಮಣನ್‌ ಜಾಮೀನಿನಲ್ಲಿ ಬಿಡುಗಡೆಯಾಗಿದ್ದಾರೆ. ಸೋಮವಾರ ತೀರ್ಪು ಪ್ರಕಟವಾಗುಧಿತ್ತಿದ್ದಂತೆ, ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಡ್ಯದ ವಿಳಾಸ ನೀಡಿದ್ದ: ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್‌ ಕಚೇರಿಯ ಮೂವರು ಅಧಿಕಾರಿಗಳ ನೆರವು ಪಡೆದು, ಪಾತಕಿ ರಾಜನ್‌ 1998-99ರಲ್ಲಿ ನಕಲಿ ಪಾಸ್‌ಪೋರ್ಟ್‌ ಪಡೆದುಕೊಂಡಿದ್ದ. “107/ಬಿ, ಹಳೇ ಎಂ.ಸಿ.ರಸ್ತೆ, ಆಜಾದ್‌ ನಗರ, ಮಂಡ್ಯ, ಕರ್ನಾಟಕ’ ಎಂಬ ವಿಳಾಸವನ್ನು ನೀಡಿ ಮೋಹನ್‌ ಕುಮಾರ್‌ ಎಂಬ ಹೆಸರಿನಲ್ಲಿ ಪಾಸ್‌ಪೋರ್ಟ್‌ ಮಾಡಿಕೊಂಡಿದ್ದ. ಆದರೆ, ಈ ಕುರಿತು ನಂತರ ಸಿಬಿಐ ತನಿಖೆ ನಡೆಸಿದಾಗ, ಆ ವಿಳಾಸದಲ್ಲಿ ಮೋಹನ್‌ ಕುಮಾರ್‌ ಎಂಬ ವ್ಯಕ್ತಿಯಾಗಲೀ, ಆ ವಿಳಾಸವಾಗಲೀ ಇಲ್ಲ ಎಂಬುದು ದೃಢವಾಗಿತ್ತು. ಜತೆಗೆ, ಅಂಚೆ ನೌಕರರೂ ಎಂಸಿ ರೋಡ್‌ ಮತ್ತು ಆಜಾದ್‌ ನಗರದಲ್ಲಿ 107/ಬಿ ಸಂಖ್ಯೆಯ ಮನೆ ಅಸ್ತಿತ್ವದಲ್ಲೇ ಇಲ್ಲ ಎಂದಿದ್ದರು. ಇದಲ್ಲದೆ, ಪ್ರಯಾಣ ದಾಖಲೆ ಪಡೆಯಲು ರಾಜನ್‌ ನಕಲಿ ಮತದಾರರ ಗುರುತಿನ ಚೀಟಿ ಮತ್ತು ನಕಲಿ ಪಡಿತರ ಕಾರ್ಡ್‌ ಅನ್ನೂ ಮಾಡಿಸಿಕೊಂಡಿದ್ದ.

ಸತ್ಯ ಮುಚ್ಚಿಟ್ಟ ಅಧಿಕಾರಿಗಳು: ರಾಜನ್‌ ಕೊಟ್ಟಿರುವ ದಾಖಲೆಗಳು ನಕಲಿ ಎಂದು ಗೊತ್ತಿದ್ದರೂ ಸತ್ಯ ಮುಚ್ಚಿಟ್ಟ ಆರೋಪವನ್ನು ಬೆಂಗಳೂರಿನ ಪಾಸ್‌ಪೋರ್ಟ್‌ ಕಚೇರಿ ಅಧಿಕಾರಿಗಳ ಮೇಲೆ ಹೊರಿಸಲಾಗಿದೆ. ಎಫ್004555 ಸಂಖ್ಯೆಯ ಪಾಸ್‌ಪೋರ್ಟ್‌ನಲ್ಲಿರುವ ಫೋಟೋ ಮತ್ತು ನವೀಕರಣಕ್ಕೆ ಸಲ್ಲಿಸಿದ್ದ ಹೊಸ ಅರ್ಜಿಯಲ್ಲಿದ್ದ ಫೋಟೋ ಮತ್ತು ಜನನ ದಿನಾಂಕ ಭಿನ್ನವಾಗಿದೆ ಎಂಬುದು ಗೊತ್ತಿದ್ದರೂ, ಅದನ್ನು ಲಲಿತಾ ಅವರು ಮುಚ್ಚಿಟ್ಟಿದ್ದರು ಎಂದು ಸಿಬಿಐ ಆರೋಪಪಟ್ಟಿಯಲ್ಲಿ ತಿಳಿಸಿತ್ತು.

ಇನ್ನು ಸೂಪರಿಂಟೆಂಡೆಂಟ್‌ ಆಗಿದ್ದ ಜಯಶ್ರೀ ಹಳೇ ಪಾನ್ಪೋರ್ಟ್‌ ನೋಡಿ, ಅದರಂತೆ ಜನನ ದಿನಾಂಕ ಬದಲಿಸಿದ್ದರು ಹಾಗೂ ಹೊಸ ಪಾಸ್‌ಪೋರ್ಟ್‌ ವಿತರಿಸಲು ಅನುಮತಿ ನೀಡಿದ್ದರು. ಪಾಸ್‌ಪೋರ್ಟ್‌ ಅಧಿಕಾರಿ ಷಾ ಅವರು, ಮೋಹನ್‌ ಕುಮಾರ್‌ ಹೆಸರಿನಲ್ಲಿ ಎ6705840 ಸಂಖ್ಯೆಯ ಪಾಸ್‌ಪೋರ್ಟ್‌ ಅನ್ನು ರಾಜನ್‌ಗೆ ನೀಡಿದ್ದರು. ಅಧಿಕಾರಿಗಳು ಮಂಡ್ಯ ಜಿಲ್ಲಾ ಪೊಲೀಸರಿಂದ ದೃಢೀಕರಣ ಪತ್ರಕ್ಕೆ ಕಾಯದೇ, ಪಾಸ್‌ಪೋರ್ಟ್‌ ನೀಡಿದ್ದರು ಎಂದು ಸಿಬಿಐ ಆರೋಪಿಸಿತ್ತು. ಹೀಗಾಗಿ ಆರೋಪಿಗಳ ವಿರುದ್ಧ ಕ್ರಿಮಿನಲ್‌ ಸಂಚು, ವಂಚನೆ, ನಕಲು ಮಾಡಿ ವಂಚಿಸಿದ ಆರೋಪ ಹೊರಿಸಲಾಗಿತ್ತು.

85 ಕೇಸುಗಳು
ಒಂದು ಕಾಲದಲ್ಲಿ ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಸಹಚರನಾಗಿದ್ದ ರಾಜನ್‌ 27 ವರ್ಷಗಳ ಕಾಲ ತಲೆಮರೆಸಿ ಕೊಂಡಿದ್ದ. 2015ರ ಅಕ್ಟೋಬರ್‌ನಲ್ಲಿ ಇಂಡೋನೇಷ್ಯಾದ ಬಾಲಿಯಲ್ಲಿ ರಾಜನ್‌ನನ್ನು ಬಂಧಿಸಿದ್ದ ಪೊಲೀಸರು ಅಲ್ಲಿಂದ ಭಾರತಕ್ಕೆ ಗಡಿಪಾರು ಮಾಡಿದ್ದರು. ಈತನ ವಿರುದ್ಧ ಕೊಲೆ, ಡ್ರಗ್‌ ಕಳ್ಳಸಾಗಣೆ, ವಸೂಲಿ ದಂಧೆ ಸೇರಿದಂತೆ 85 ಕೇಸುಗಳಿವೆ. 
 

ಟಾಪ್ ನ್ಯೂಸ್

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.