ಗುರು-ಶಿಷ್ಯರು ಮತ್ತೆ ಆಸ್‌ಪಾಸ್‌


Team Udayavani, Apr 25, 2017, 10:42 AM IST

jodi.jpg

– ಜೆಡಿಎಸ್‌ನಲ್ಲಿರುವವರೆಲ್ಲಾ ನನಗೆ ಆಪ್ತರು: ಸಿಎಂ
– ಸಿದ್ದು ನನ್ನ ಸ್ನೇಹಿತ: ದೇವೇಗೌಡ 

ಹಾಸನ: ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮತ್ತು ಮಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿನ ದಿನಗಳಲ್ಲಿ ಹತ್ತಿರವಾಗುತ್ತಿದ್ದಾರೆ ಎಂಬ ಸುದ್ದಿಗೆ ಶ್ರವಣಬೆಳಗೊಳದಲ್ಲಿ ಸೋಮವಾರ ನಡೆದ ಸಮಾರಂಭ ಮತ್ತೂಮ್ಮೆ ಸಾಕ್ಷಿಯಾಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ದೇವೇ ಗೌಡರು ಸಿಎಂ ಸಿದ್ದರಾಮಯ್ಯ ಅವರ ಹೆಗಲ ಮೇಲೆ ಕೈ ಹಾಕಿ ವೇದಿಕೆ ಹತ್ತಿ ಆತ್ಮೀಯವಾಗಿ ಮಾತನಾಡಿದರು.

ಕಿವಿಯಲ್ಲಿ ಏನೋ ಗುಟ್ಟಾಗಿ ಮಾತನಾಡಿದ್ದು ಗಮನ ಸೆಳೆಯಿತು. ಅಷ್ಟೇ ಅಲ್ಲದೆ ಕಾರ್ಯಕ್ರಮದಲ್ಲಿ ಮಾತ ನಾಡುವಾಗಲೂ ಗುರು-ಶಿಷ್ಯರು ಪರಸ್ಪರ ಶ್ಲಾಘನೆ ಯಲ್ಲಿ ತೊಡಗಿದ್ದು ವಿಶೇಷ.

ದೇವೇಗೌಡರು ಮಾತನಾಡುವಾಗ, “ನನ್ನ ಸ್ನೇಹಿತ ಸಿದ್ದರಾಮಯ್ಯ ಸಿಎಂ ಆದ ನಂತರ ಹಾಸನ- ಬೆಂಗಳೂರು ರೈಲು ಮಾರ್ಗಕ್ಕೆ ರಾಜ್ಯದ ಪಾಲನ್ನು ನೀಡುವುದರ ಜೊತೆಗೆ ಭೂಸ್ವಾಧೀನ ಸಮಸ್ಯೆಯನ್ನೂ ಬಗೆಹರಿಸಿದರು. ಹಾಸನ-ಬೆಂಗಳೂರು ರೈಲು ಮಾರ್ಗದ ಉದ್ಘಾಟ ನೆಯೂ ಅವರ ಸಮ್ಮುಖದಲ್ಲಿಯೇ ನೆರವೇರಿತು. ಇದೆಲ್ಲಾ ಆಯಾಯ ಕಾಲದ
ಮಹಿಮೆ’ ಎಂದು ಹೇಳಿದರು.

ಸಿದ್ದರಾಮಯ್ಯ ಮಾತನಾಡುವಾಗ, “ಜೆಡಿಎಸ್‌ನಲ್ಲಿರುವವರೆಲ್ಲಾ ನನಗೆ ವೈಯಕ್ತಿಕ ವಾಗಿ ಆಪ್ತರು. ಆದರೆ, ರಾಜಕೀಯವಾಗಿ ವಿರೋಧಿಗಳು. ಅಧಿಕಾರ ಬರುತ್ತದೆ, ಹೋಗುತ್ತದೆ. ಆದರೆ, ಮನುಷ್ಯ ಸಂಬಂಧಗಳು ಬಹಳ ಮುಖ್ಯ. ಮಸ್ತಕಾಭಿಷೇಕಕ್ಕೆ ಕೇಂದ್ರ ಸರ್ಕಾರದಿಂದ ವಿಶೇಷ ಅನುದಾನ ಕೇಳಿದ್ದೇವೆ, ಒತ್ತಡ ತರುವಂತೆ ದೇವೇಗೌಡರಿಗೆ ಮನವಿ
ಮಾಡಿದ್ದೇನೆ. ಇನ್ನೊಮ್ಮೆ ಪ್ರಧಾನಿ ಬಳಿ ನಮ್ಮನ್ನೆಲ್ಲಾ ಕರೆದುಕೊಂಡು ಹೋಗುವಂತೆ ಮನವಿ ಮಾಡುವೆ’ ಎಂದು ತಿಳಿಸಿದರು. ಕಳೆದ ವಿಧಾನಸಭೆ ಚುನಾವಣೆ ನಂತರ ರಾಜಕೀಯವಾಗಿ ಹಾಗೂ ವೈಯಕ್ತಿಕವಾಗಿ ಅಂತರ ಕಾಯ್ದುಕೊಂಡಿದ್ದ ದೇವೇಗೌಡ ಹಾಗೂ ಸಿದ್ದರಾಮಯ್ಯ, ಕಾವೇರಿ ವಿವಾದ, ಬಿಬಿಎಂಪಿ ಮೇಯರ್‌ ಚುನಾವಣೆ ವೇಳೆ ಮೈತ್ರಿ ವಿಚಾರದಲ್ಲಿ ಹತ್ತಿರವಾದರು.

ಈ ಮೈತ್ರಿ ಎರಡನೇ ವರ್ಷವೂ ಮುಂದುವರಿಯಲು ಇಬ್ಬರ ನಡುವಿನ ಆತ್ಮೀಯತೆಯೇ ಕಾರಣವಾಯಿತು. ನಂಜನಗೂಡು- ಗುಂಡ್ಲು ಪೇಟೆ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ, ದೇವೇಗೌಡರು ಕಾಂಗ್ರೆಸ್‌ಗೆ ಪರೋಕ್ಷ ಬೆಂಬಲ ನೀಡಿದ್ದರು. ಇದು ಇವರಿಬ್ಬರ ಸ್ನೇಹಕ್ಕೆ ಮತ್ತಷ್ಟು ಬಲ ನೀಡಿತ್ತು. ಇನ್ನು ಹಾಸನ ಜಿಲ್ಲೆಯ ಕಾರ್ಯಕ್ರಮಗಳಿಗೆ ಸಿದ್ದರಾಮಯ್ಯ ತಪ್ಪಿಸಿಕೊಳ್ಳುತ್ತಿಲ್ಲ. ಎರಡು ಮೂರು ಕಾರ್ಯಕ್ರಮಗಳಲ್ಲಿ ದೇವೇಗೌಡರೊಂದಿಗೆ
ವೇದಿಕೆ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಉಡುಪಿ ಜಿಲ್ಲೆ ಬಾರಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲೂ ಇಬ್ಬರು
ಪಾಲ್ಗೊಳ್ಳಬೇಕಿತ್ತು. ಆದರೆ, ಅದು ಸಾಧ್ಯವಾಗಿರಲಿಲ್ಲ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.