ಬೆಂಗಳೂರು – ಮಂಗಳೂರು ಮಧ್ಯೆ ಹೈಸ್ಪೀಡ್‌ ಹೆದ್ದಾರಿ


Team Udayavani, Apr 27, 2017, 11:14 AM IST

bangalore-Highway-26-4.jpg

ಹೊಸದಿಲ್ಲಿ: ಬೆಂಗಳೂರು-ಮಂಗಳೂರು ಮಧ್ಯೆ ಹೆದ್ದಾರಿಯೇನೋ ಇದೆ. ಆದರೆ ಪ್ರಯಾಣಕ್ಕೆ 8 ಗಂಟೆ ತಗಲುತ್ತದೆ. ಇನ್ನು ನಾಲ್ಕು ವರ್ಷಗಳಲ್ಲಿ ಅಂಥ ತಲೆನೋವೇ ಇರದು. ಆಜುಬಾಜು ನಾಲ್ಕು ಗಂಟೆಗಳಲ್ಲಿ ಬೆಂಗಳೂರನ್ನು ತಲುಪುವಂಥ ಉತ್ಕೃಷ್ಟ ಮಟ್ಟದ ಹೆದ್ದಾರಿ ನಿರ್ಮಾಣವಾಗಲಿದೆ. ಅಂತಾರಾಷ್ಟ್ರೀಯ ದರ್ಜೆಯ ಈ ರಸ್ತೆಗಳಲ್ಲಿ ಸುಖಾಸುಮ್ಮನೆ ಯು ಟರ್ನ್, ಬದಿಯಿಂದ ಪ್ರವೇಶಕ್ಕೆ ಅವಕಾಶವೂ ಇಲ್ಲ. ಸರಕು, ವೇಗದ ವಾಹನಗಳಿಗೆ ಪ್ರತ್ಯೇಕ ಲೇನ್‌ ಕೂಡ ಇರಲಿದೆ. ಇಂಥದ್ದೊಂದು ಹೊಸ ತಲೆಮಾರಿನ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರಕಾರ ಮುಂದಾಗಿದೆ. ಜತೆಗೆ ದೇಶಾದ್ಯಂತ 20 ಸಾವಿರ ಕಿ.ಮೀ. ಉದ್ದದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಿದೆ. ಅದಕ್ಕಾಗಿ ಭಾರತ್‌ ಮಾಲಾ ಯೋಜನೆಯ ಒಂದನೇ ಹಂತದ ಯೋಜನೆಯಡಿಯಲ್ಲೇ ಈ ರಸ್ತೆಗಳೂ ನಿರ್ಮಾಣವಾಗಲಿದ್ದು, 3.8 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ. ಮುಂದಿನ 5 ವರ್ಷದೊಳಗೆ ಈ ಯೋಜನೆ ಸಾಕಾರಗೊಳ್ಳಲಿದೆ.

ನಾಲ್ಕು ಹೆದ್ದಾರಿಗಳ ಆಯ್ಕೆ: ಹೈಸ್ಪೀಡ್‌ ಹೆದ್ದಾರಿಗಳ ನಿರ್ಮಾಣದಲ್ಲಿ ಮೊದಲನೇ ಹಂತಕ್ಕೆ ನಾಲ್ಕು ಹೆದ್ದಾರಿಗಳನ್ನು ಆಯ್ಕೆ ಮಾಡಲಾಗಿದೆ. ಇವುಗಳಲ್ಲಿ ಮಂಗಳೂರು -ಬೆಂಗಳೂರು, ಮುಂಬಯಿ- ಕೋಲ್ಕತಾ, ಲೂಧಿಯಾನಾ – ಕಾಂಡ್ಲಾ, ಪೋರಬಂದರ್‌-ಸಿಲ್ಚಾರ್‌ ರಸ್ತೆ ಇರಲಿವೆ. ಪ್ರಮುಖ ಆರ್ಥಿಕ ಚಟುವಟಿಕೆ ನಡೆಯುವ, ಬಂದರು ಸಂಪರ್ಕ, ಉತ್ಪಾದನಾ ಕ್ಷೇತ್ರಗಳು, ಪ್ರಮುಖ ವ್ಯಾಪಾರ ಕೇಂದ್ರಗಳಿರುವ ನಗರಗಳನ್ನು ಇವುಗಳು ಬೆಸೆಯಲಿವೆ.

ಅಡೆತಡೆ ಇಲ್ಲದ  ಹೆದ್ದಾರಿ: ರಿಕ್ಷಾ, ಸೈಕಲ್‌, ಸ್ಥಳೀಯ ಬೈಕ್‌ ಸವಾರರು ಈಗಿನ ರಸ್ತೆಗಳಲ್ಲಿ ಅಡ್ಡ ಬರುವುದು ಸಾಮಾನ್ಯ. ಆದರೆ ಕೇಂದ್ರದ ಉದ್ದೇಶಿತ ಹೈಸ್ಪೀಡ್‌ ಹೆದ್ದಾರಿಗಳಲ್ಲಿ ಇಂಥ ಯಾವುದೇ ವಾಹನ ಸವಾರರಿಗೆ ಟ್ರಾಫಿಕ್‌ ಕಿರಿಕಿರಿಗೆ ಅವಕಾಶವಿಲ್ಲ. ಇದಕ್ಕೆ ಪ್ರತ್ಯೇಕ ಮಾರ್ಗಗಳನ್ನು ನಿರ್ಮಿಸಲಾಗುತ್ತದೆ. ಕನಿಷ್ಠ 4 ಪಥದ ರಸ್ತೆಗಳು ಇರಲಿದ್ದು, ಈಗಿರುವ ರಸ್ತೆಗಳನ್ನೇ ಭಾರೀ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಜತೆಗೆ ಈಗಿನ ರಸ್ತೆಗಳಿಗೆ ಸುಧಾರಿತ ಸರ್ವೀಸ್‌ ರಸ್ತೆಗಳನ್ನು ನೀಡಲಾಗುತ್ತದೆ. ಇದರಿಂದ ಪ್ರತ್ಯೇಕ ಹೆದ್ದಾರಿ ನಿರ್ಮಾಣದ ಅಗತ್ಯ ಇರುವುದಿಲ್ಲ. 12 ಸಾವಿರ ಕಿ.ಮೀ. ರಸ್ತೆ ವರದಿ ಸಿದ್ಧ:  ಈಗಾಗಲೇ ಸಚಿವಾಲಯ 12 ಸಾವಿರ ಕಿ.ಮೀ. ಹೈಸ್ಪೀಡ್‌ ಹೆದ್ದಾರಿಗಳ ಅಭಿವೃದ್ಧಿಯ ಕುರಿತ ವರದಿ ತಯಾರಿಸಿದೆ. ಸದ್ಯ ದೇಶದ 60 ಸಾವಿರ ಕಿ.ಮೀ.ಗಳಷ್ಟು ರಾ. ಹೆದ್ದಾರಿಗಳಲ್ಲಿ ಶೇ. 80 ಸರಕು ಸಾಗಣೆ ನಡೆಯುತ್ತದೆ.

ಟಾಪ್ ನ್ಯೂಸ್

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.