2,550 ಕೋಟಿ ರೂ.ಚೆಕ್‌ ಬೌನ್ಸ್‌ ಆದ್ರೆ ಜೈಲಿಗೆ: ಸುಬ್ರತಾಗೆ ಸುಪ್ರೀಂ


Team Udayavani, Apr 27, 2017, 3:58 PM IST

Subrata Roy1-700.jpg

ಹೊಸದಿಲ್ಲಿ : ಸಹಾರಾ ಸಮೂಹದ ಮುಖ್ಯಸ್ಥ, 68ರ ಹರೆಯದ ಸುಬ್ರತಾ ರಾಯ್‌ ಅವರ ಪೆರೋಲ್‌ ಅನ್ನು ಸುಪ್ರೀಂ ಕೋರ್ಟ್‌ ಜುಲೈ 15ರ ವರೆಗೆ ವಿಸ್ತರಿಸಿದೆ. ಅಷ್ಟರೊಳಗೆ ರಾಯ್‌ ಅವರು 2,550 ಕೋಟಿ ರೂ.ಗಳನ್ನು ಕೋರ್ಟಿನಲ್ಲಿ ಠೇವಣಿ ಮಾಡದಿದ್ದರೆ ಅವರು ಮತ್ತೆ ಜೈಲಿಗೆ ಮರಳಬೇಕಾಗುವುದು ಎಂಬ ಎಚ್ಚರಿಕೆಯನ್ನು ಸುಪ್ರೀಂ ಕೋರ್ಟ್‌ ನೀಡಿದೆ. 

ಹೂಡಿಕೆದಾರರಿಗೆ ಸಹಸ್ರಾರು ಕೋಟಿ ರೂ. ಬಾಕಿ ಇರಿಸಿದ ಕಾರಣಕ್ಕೆ 2014ರಲ್ಲಿ ಬಂಧಿತರಾಗಿದ್ದ ಸಹಾರಾ ಮುಖ್ಯಸ್ಥ ಸುಬ್ರತಾ ರಾಯ್‌ ಅವರಿಗೆ ಸುಪ್ರೀಂ ಕೋರ್ಟ್‌ ಕಳೆದ ವರ್ಷ ಜಾಮೀನು ಬಿಡುಗಡೆಯನ್ನು ಮಂಜೂರು ಮಾಡಿತ್ತು. ಇಂದು ಕೋರ್ಟಿನಲ್ಲಿ  ಹಾಜರಿದ್ದ ಸುಬ್ರತಾ ರಾಯ್‌ ಅವರು ತಾನು 2,550 ಕೋಟಿ ರೂ.ಗಳಿಗೆ ಎರಡು ಚೆಕ್‌ಗಳನ್ನು ನೀಡುವುದಾಗಿ ನ್ಯಾಯಾಧೀಶರಲ್ಲಿ ಹೇಳಿದರು. 

ಈ ಚೆಕ್ಕುಗಳು ವಟಾವಣೆ ಆಗದಿದ್ದಲ್ಲಿ  ನಿಮ್ಮನ್ನು ಮತ್ತೆ ನಾವು ಕೋರ್ಟಿನಿಂದ ನೇರವಾಗಿ ತಿಹಾರ್‌ ಜೈಲಿಗೆ ಕಳುಹಿಸುತ್ತೇವೆ ಎಂದು ನ್ಯಾಯಾಧೀಶರು ರಾಯ್‌ ಅವರಿಗೆ ಎಚ್ಚರಿಕೆಯನ್ನು ಕೊಟ್ಟರು. 

ಹೂಡಿಕೆದಾರರಿಗೆ 24,000 ಕೋಟಿ ರೂ.ಗಳನ್ನು ಪಾವತಿಸಬೇಕಿದ್ದ ಸಹಾರಾ ಸಮೂಹ ಈ ತನಕ ಕೇವಲ 12,000 ಕೋಟಿ ರೂ.ಗಳನ್ನು ಮಾತ್ರವೇ ಪಾವತಿಸಿದೆ. ಈ 12,000 ಕೋಟಿ ರೂ. ಬಾಕಿ ಪಾವತಿಯ ಹಲವಾರು ಗಡುವುಗಳನ್ನು ಸಹಾರಾ ಸಂಸ್ಥೆ ಉಲ್ಲಂಘನೆ ಮಾಡಿದೆ.

ಅಂತಿರುವಾಗ ಸಹಾರಾ ಈ ಕೂಡಲೇ 5,000 ಕೋಟಿ ರೂ.ಗಳನ್ನು ತುರ್ತಾಗಿ ಒದಗಿಸಬೇಕು; ಇದರ ಅರ್ಧಾಂಶ ಮೊತ್ತದ ಹಣವನ್ನು ಜೂನ್‌ 15ರೊಳಗಾಗಿ ಪೂರೈಸಬೇಕು ಎಂದು ನ್ಯಾಯಾಲಯ ಕಟ್ಟಪ್ಪಣೆ ಮಾಡಿದೆ. 

ಕಳೆದ ಬಾರಿಯ ವಿಚಾರಣೆ ವೇಳೆ ರಾಯ್‌ ಅವರ ವಕೀಲರಾಗಿರುವ ಮಾಜಿ ಕೇಂದ್ರ ಸಚಿವ ಕಪಿಲ್‌ ಸಿಬಲ್‌ ಅವರು, ಸಹಾರಾ ಸಮೂಹದ 34,000 ಕೋಟಿ ರೂ. ಬೆಲೆಬಾಳುವ 10,000 ಎಕರೆ ಭೂಮಿಯ ಆ್ಯಂಬಿ ವ್ಯಾಲಿ ಟೌನ್‌ಶಿಪ್‌ ಆಸ್ತಿಯನ್ನು ಹರಾಜು ಹಾಕಲು ನಿರ್ಧರಿಸಿರುವುದನ್ನು ವಿರೋಧಿಸಿ ವಾದಿಸಿದ್ದರು. 

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.