ಅಕ್ರಮ ಅಡ್ಡೆಗೆ ದಾಳಿ: 40 ಲೋಡ್ ಮರಳು ವಶ
Team Udayavani, Apr 28, 2017, 2:04 PM IST
ಕಾರ್ಕಳ: ಅಕ್ರಮವಾಗಿ ದಾಸ್ತಾನು ಮಾಡಲ್ಪಟ್ಟ ಮರಳನ್ನು ಕಾರ್ಕಳ ತಹಶೀಲ್ದಾರ್ ಗುರುವಾರ ವಶಪಡಿಸಿಕೊಂಡಿದ್ದಾರೆ.
ಇಲ್ಲಿನ ಬೋಳ ಗ್ರಾಮದ ಬೋಪಾಡಿ ಹಾಗೂ ವಂಜಾರುಕಟ್ಟೆ ಸಮೀಪ ಸುಮಾರು 40 ಲೋಡ್ ಅಕ್ರಮವಾಗಿ ದಾಸ್ತಾನಿರಿಸಿದ ಮರಳನ್ನು ಕಾರ್ಕಳ ತಹಶೀಲ್ದಾರ್ ಟಿ.ಜಿ. ಗುರುಪ್ರಸಾದ್ ಹಾಗೂ ಲೋಕೋಪಯೋಗಿ ಅಧಿಕಾರಿ ಗಳ ತಂಡ ದಾಳಿ ನಡೆಸಿ ವಶಪಡಿಸಿ ಕೊಂಡು ಲೋಕೋಪ ಯೋಗಿ ಇಲಾಖೆಗೆ ಹಸ್ತಾಂತರಿಸಿ ಈ ಕುರಿತು ತನಿಖೆ ಮಾಡುವಂತೆ ಸೂಚಿಸಿದರು. ಬೋಳ ಶಾಂಭವಿ ನದಿಯ ತಟದಲ್ಲಿ ಬರು ಬೋಪಾಡಿ ಮತ್ತು ಸೇತುವೆ ಬಳಿ ನಿರಂತರ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು ಮರಳನ್ನು ಮಾರಾಟ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮರಳಿನ ಒಟ್ಟು ಮೌಲ್ಯ ಸುಮಾರು 4 ಲಕ್ಷ ರೂ. ಎನ್ನ ಲಾಗಿದೆ. ಅಕ್ರಮ ಮರಳು ಸಂಗ್ರಹಿಸಿಟ್ಟವರ ಕುರಿತು ಮಾಹಿತಿ ತಿಳಿದು ಬಂದಿಲ್ಲವಾದರೂ ಜನ ಪ್ರತಿನಿಧಿಯೊಬ್ಬರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನಡೆಸಿದ ಬಳಿಕ ನಿಜಾಂಶ ಬಯಲಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ