ಟ್ಯಾಂಕರ್ ಢಿಕ್ಕಿ: ಇಬ್ಬರಿಗೆ ಗಾಯ
Team Udayavani, May 4, 2017, 11:02 AM IST
ಬ್ರಹ್ಮಾವರ: ಬಾರಕೂರು ಹೇರಾಡಿ ಬಳಿ ಬುಧವಾರ ಹಾಲಿನ ಟ್ಯಾಂಕರ್ ಮತ್ತು ಗ್ಯಾಸ್ ಸಿಲಿಂಡರ್ ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಚಾಲಕರು ಗಾಯಗೊಂಡಿದ್ದಾರೆ.
ಮಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಗ್ಯಾಸ್ ಸಿಲಿಂಡರ್ ಸಾಗಾಟದ ಟ್ಯಾಂಕರ್ ಹಾಗೂ ಶಿವಮೊಗ್ಗದಿಂದ ಮಂಗಳೂರಿಗೆ ಬರುತ್ತಿದ್ದ ಹಾಲಿನ ಟ್ಯಾಂಕರ್ ನಡುವೆ ಮುಖಾಮುಖೀ ಢಿಕ್ಕಿ ಸಂಭವಿಸಿತು.
ಘಟನೆಯಲ್ಲಿ ಗ್ಯಾಸ್ ಟ್ಯಾಂಕರ್ನ ಚಾಲಕ ಹಾವೇರಿಯ ಚಂದ್ರಶೇಖರ್ ಹಾಗೂ ಹಾಲಿನ ಟ್ಯಾಂಕರ್ ಚಾಲಕ ಪವನ್ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎರಡು ಘನವಾಹನಗಳ ನಡುವೆ ಅಪಘಾತ ಸಂಭವಿಸಿದ್ದರಿಂದ ಕೆಲವು ತಾಸು ರಸ್ತೆ ಸಂಚಾರ ಸ್ಥಗಿತಗೊಂಡಿತು. ಟ್ಯಾಂಕರ್ಗಳನ್ನು ತೆರವುಗೊಳಿಸುವ ತನಕ ಮಂದಾರ್ತಿ ರಸ್ತೆಯಲ್ಲಿ ಸಂಚಾರಕ್ಕೆ ಅನುವು ಮಾಡಲಾಯಿತು. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.