ಧರ್ಮ ಎಂದರೆ ಬದುಕುವ ರೀತಿ: ಡಾ| ಭಟ್‌


Team Udayavani, May 7, 2017, 3:09 PM IST

0605btlph1.jpg

ಕಟ್ಟೆಮಾರು ತರವಾಡು ಕ್ಷೇತ್ರದ ದೈವಗಳ ಪುನಃ ಪ್ರತಿಷ್ಠೆ 
ಬಂಟ್ವಾಳ : ನಾವು ಹೇಗೆ ಬದುಕಬೇಕು ಎಂಬುದೇ ಧರ್ಮ ಹೊರತು ಅಂಧಾನುಕರಣೆಯಲ್ಲ. ಪ್ರಾಣಿಗಳೂ ಬದುಕುತ್ತವೆ. ಅವುಗಳಿಗೆ ಪ್ರಾಕೃತಿಕ ಧರ್ಮವಿದೆ. ಅಲ್ಲಿ ಆಹಾರ ಹೊರತುಪಡಿಸಿದರೆ ಹಿಂಸೆ, ನೋವು, ಸ್ವಾರ್ಥಗಳಿಲ್ಲ. ಮನುಷ್ಯ ಮೃಗವಲ್ಲ. ಹಾಗಾಗಿ ಅವನಿಗೆ ಶಿಸ್ತುಬದ್ಧ ಜೀವನ ಬೇಕು. ಅಂತಹ ಶಿಸ್ತು ಧರ್ಮ-ಸಂಸ್ಕೃತಿಯಿಂದ ಬರುವುದು, ಇದೇ ನೈಜ ಧರ್ಮ ಎಂದು ಪುತ್ತೂರು ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್‌ ಹೇಳಿದರು.

ಅವರು ಶುಕ್ರವಾರ ಕಟ್ಟೆಮಾರು ಶ್ರೀ ಧೂಮಾವತಿ, ನಾಗದೇವರು, ಚಾಮುಂಡಿ ಮತ್ತು ಪರಿವಾರ ದೈವಗಳ ತರವಾಡು ಕ್ಷೇತ್ರದ ದೈವಗಳ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ತರವಾಡು ಮನೆಯ ಗೃಹಪ್ರವೇಶ ಮೊದಲ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಆಧುನಿಕ ಆಂಗ್ಲ ಶಿಕ್ಷಣದಿಂದ ಎಳೆಯರಲ್ಲಿ ಸಂಸ್ಕಾರ ಕಡಿಮೆ ಆಗುತ್ತಿದೆ. ಶಿಕ್ಷಣದಲ್ಲಿ ಭಾರತೀಯ ವಿಚಾರಗಳ ಸೇರ್ಪಡೆ ಆಗಬೇಕು. ಅದು ವಿಚಾರ ಪ್ರಚೋದಕ ಆಗಬೇಕು. ನೀರಸ ಶಿಕ್ಷಣದಿಂದ ಆಸಕ್ತಿ ಕೆರಳುವುದಿಲ್ಲ. ಧರ್ಮದ ಮೌಲ್ಯದಿಂದ, ಶಿಕ್ಷಣದಿಂದ, ಆಚರಣೆಗಳಿಂದ ಹೊಸತನ ಮೂಡುವುದು ಎಂದು ಅವರು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ ಮಾತನಾಡಿ, ನಿಟಿಲಾಪುರ ಕ್ಷೇತ್ರ ಮತ್ತು ಇಲ್ಲಿನ ತರವಾಡು ಮನೆಗೆ ಅವಿನಾಭಾವ ಸಂಬಂಧವಿದೆ. ದೈವ-ದೇವರ ಸಾನ್ನಿಧ್ಯ ದೊರಕುವುದು ನಮ್ಮ ಪೂರ್ವ ಪುಣ್ಯ ಫಲದಿಂದ. ಸೇವೆ ಸಲ್ಲಿಸಬೇಕು ಎಂದು ಅಪೇಕ್ಷೆ ಪಟ್ಟವರಿಗೆ ಅನೇಕ ಸಂದರ್ಭಗಳಲ್ಲಿ ಅವಕಾಶ  ಲಭ್ಯವಾಗುವುದಿಲ್ಲ. ಆದರೆ ಕಟ್ಟೆಮಾರು ಕುಟುಂಬಕ್ಕೆ ಅಂತಹ ದೈವದೇವರ ಕೆಲಸ ಮಾಡಲು ಪೂರ್ವ ದಿಂದಲೇ ಅವಕಾಶ ಲಭ್ಯವಾಗಿದೆ ಎಂದರು.

ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗಬೇಕಾದರೆ ನಾವು ಅವರನ್ನು ಇಂತಹ ಕಾರ್ಯಕ್ರಮಗಳಲ್ಲಿ ತೊಡಗಿಸ ಬೇಕು. ಅವರಿಗೆ ಆಚರಣೆಗಳ ಮಾಹಿತಿ ನೀಡದಿದ್ದರೆ ಅವರು ದೈವದ ಕೋಲವನ್ನು ಪಾನೀಯ ಎಂದು ತಪ್ಪಾಗಿ ಅರ್ಥೈಸುವ ದಿನ ದೂರವಿಲ್ಲ ಎಂದರು.

ನೆಟ್ಲ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅಶೋಕ್‌ ಕುಮಾರ್‌ ಬರಿಮಾರು, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಉಮಾನಾಥ ಕೋಟ್ಯಾನ್‌, ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕ ಶಿವಪ್ಪ, ಜಿ.ಪಂ. ಮಾಜಿ ಸದಸ್ಯ ಚೆನ್ನಪ್ಪ ಆರ್‌. ಕೋಟ್ಯಾನ್‌ ಮಾತನಾಡಿದರು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಯೋಗೀಶ್‌ ಪೂಜಾರಿ ಕಡ್ತಿಲ ಪ್ರಸ್ತಾವನೆಗೈದರು. ಆಡಳಿತ ಸಮಿತಿ ಅಧ್ಯಕ್ಷ ಲೋಕಾನಂದ ಕಲ್ಲಕಟ್ಟ ಸ್ವಾಗತಿಸಿ, ಕಾರ್ಯ ದರ್ಶಿ ಜಯರಾಮ ಪೂಜಾರಿ ವಂದಿಸಿದರು. ಸತೀಶ್‌ ಬಲ್ಯ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.