ವಿಟ್ಲ: ಅಡಿಕೆ, ಗೇರುಬೀಜ ಕಳ್ಳರಿಬ್ಬರ ಬಂಧನ 


Team Udayavani, May 9, 2017, 11:53 AM IST

kalvu.jpg

ವಿಟ್ಲ: ವಿಟ್ಲ ಆಸುಪಾಸಿನಲ್ಲಿ  ಮೂರು ವರ್ಷಗಳಿಂದ ಅಡಿಕೆ, ಗೇರುಬೀಜ ಕಳ್ಳರನ್ನು ವಿಟ್ಲ ಸಮೀಪದ ಕಂಬಳಬೆಟ್ಟಿನಲ್ಲಿ ಸೋಮವಾರ ಬಂಧಿಸುವಲ್ಲಿ ವಿಟ್ಲ ಪೊಲೀಸರು ಯಶಸ್ವಿಯಾಗಿದ್ದು, ಅವರಿಂದ 6 ಕ್ವಿಂಟಾಲ್‌ ಅಡಿಕೆ, 3 ಕ್ವಿಂಟಾಲ್‌ ಗೇರುಬೀಜ, ಕಾರು, ಆಮ್ನಿ, ಎರಡು ಆಟೋ ರಿûಾಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಚಿಕ್ಕಮುಟ್ನೂರು ಗ್ರಾಮದ ತಾರಿಗುಡ್ಡೆ ನಿವಾಸಿ ಅನ್ವರ್‌ ಆಲಿ (36), ಸಾಲ್ಮರ ಮೌಂಟನ್‌ ವ್ಯೂ ಶಾಲಾ ಬಳಿ ಸಮೀಪದ ನಿವಾಸಿ ಮಹಮ್ಮದ್‌ ಇರ್ಫಾನ್‌ (19) ಬಂಧಿಸಲ್ಪಟ್ಟ ಕಳ್ಳರು.

ವಿಟ್ಲ ಠಾಣಾಧಿಕಾರಿ ನಾಗರಾಜ್‌ ನೇತೃತ್ವದ ತಂಡ ಕಂಬಳಬೆಟ್ಟು ಸಮೀಪ ವಾಹನ ತಪಾಸಣೆ ನಡೆಸುತ್ತಿದ್ದಾಗ ಅಡಿಕೆ ಹೇರಿಕೊಂಡಿದ್ದ ವಾಹನವು ದಾಖಲೆಗಳನ್ನು ಹೊಂದಿರಲಿಲ್ಲ.   ವಾಹನದಲ್ಲಿ ಅಡಿಕೆಯನ್ನು ರೈತರಿಂದ ಪಡೆದುಕೊಂಡ ಬಗ್ಗೆ ದಾಖಲೆಯೂ ಇರಲಿಲ್ಲ. ಅನುಮಾನಾಸ್ಪ ದವಾಗಿದ್ದ ಆರೋಪಿಗಳನ್ನು ಮಾಲು ಸಹಿತ, ವಿಟ್ಲ ಠಾಣೆಗೆ ಕರೆತಂದು ವಿಚಾರಿಸಿ ದಾಗ ಈ ಕಳ್ಳರ ಅಸಲಿಯತ್‌ ಪ್ರಕಟವಾಯಿತು.

ಸಾಕುಪ್ರಾಣಿಗಳಿಗೆ ವಿಷ ಹಾಕಿದ್ದರು
ಎರಡು ತಿಂಗಳ ಅವಧಿಯಲ್ಲಿ ಕೇಪು, ಕೋಡಪದವು, ನೇರಳಕಟ್ಟೆ, ಸೂರ್ಯ ಮೊದಲಾದ ಕಡೆಗಳಲ್ಲಿ ಅಡಿಕೆ ಹಾಗೂ ಗೇರುಬೀಜ ಕಳ್ಳತನ ಪ್ರಕರಣ ದಾಖಲಾಗಿತ್ತು. 2015ರಲ್ಲಿ ಸೂರಿಕುಮೇರು, ಮಾಣಿ, ಬುಡೋಳಿಯಲ್ಲಿ ಸುಮಾರು 20 ಲಕ್ಷ ರೂ.ಮೌಲ್ಯದ ಅಡಿಕೆ ಕಳವುಗೈದಿದ್ದರು. 2016ರಲ್ಲಿ ಕುಡ್ತಮುಗೇರು, ವಿಟ್ಲಪಟ್ನೂರಿನ ಕೆಲವು ಭಾಗದಲ್ಲಿ ದಾಸ್ತಾನಿರಿಸಿದ್ದ ಸುಮಾರು 16 ಲಕ್ಷ ರೂ. ಮೌಲ್ಯದ ಅಡಿಕೆ ಕಳ್ಳತನ ಮಾಡಿದ ಆರೋಪ ಇವರ ಮೇಲಿದೆ. ಕಳ್ಳತನ ಮಾಡುವುದಕ್ಕೆ ಮುನ್ನ ಕೆಲವು ಮನೆಗಳ ಸಾಕು ಪ್ರಾಣಿಗಳಿಗೆ ವಿಷ ಹಾಕಿ, ಕೊಂದು ಕೃತ್ಯವೆಸಗುತ್ತಿದ್ದರು.

ಒಟ್ಟು ಮೊತ್ತ 12.50 ಲಕ್ಷ ರೂ.
ಕಳ್ಳರಿಂದ 6 ಕ್ವಿಂಟಾಲ್‌ ಅಡಿಕೆ, 3 ಕ್ವಿಂಟಾಲ್‌ ಗೇರುಬೀಜ ಹಾಗೂ ಕಳವು ಮಾಡಲು ಉಪಯೋಗಿಸಿದ 1 ಮಾರುತಿ ರಿಡ್ಜ್, 1 ಮಾರುತಿ ಆಮ್ನಿ, 2 ಆಟೋರಿûಾಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಒಟ್ಟು ಮೊತ್ತ ಸುಮಾರು 12.50 ಲಕ್ಷ ಎಂದು ಅಂದಾಜಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.