ಅನೀಶ್‌ ಚಿತ್ರಕ್ಕೆ ನಿಶ್ವಿ‌ಕಾ ನಾಯಕಿ


Team Udayavani, May 10, 2017, 11:21 AM IST

Nishvika-Naidu-1.jpg

“ಕಾಲೇಜ್‌ ಕುಮಾರ್‌’ ಚಿತ್ರದವರೇನೋ ನಿರ್ಮಾಪಕರ ಸಂಘದವರೆಗೂ ಹೋಗಿ, ಸಂಯುಕ್ತಾ ಹೆಗ್ಡೆ ಅವರನ್ನು ತಮ್ಮ ಚಿತ್ರದ ನಾಯಕಿಯಾಗಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಆ ಭಾಗ್ಯ “ವಾಸು – ಪಕ್ಕಾ ಕಮರ್ಷಿಯಲ್‌’ ಚಿತ್ರಕ್ಕೆ ಸಿಗಲಿಲ್ಲ. ಆ ಚಿತ್ರದಿಂದ ಸಂಯುಕ್ತಾ ಹೊರನಡೆದಿದ್ದು, ಅವರ ಜಾಗಕ್ಕೆ ನಿಶ್ವಿ‌ಕಾ ನಾಯ್ಡು ಎಂಬ ಹೊಸ ಹುಡುಗಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

“ಕಿರಿಕ್‌ ಪಾರ್ಟಿ’ ಚಿತ್ರದ ನಂತರ ಸಂಯುಕ್ತಾ ಮೊದಲು ಒಪ್ಪಿದ್ದು “ವಾಸು – ಪಕ್ಕಾ ಕಮರ್ಷಿಯಲ್‌’ ಚಿತ್ರವನ್ನು ಅನೀಶ್‌ ತೇಜೇಶ್ವರ್‌ ನಾಯಕನಾಗಿ ನಟಿಸುವುದರ ಜೊತೆಗೆ ನಿರ್ಮಾಣ ಕೂಡಾ ಮಾಡುತ್ತಿರುವ ಈ ಚಿತ್ರಕ್ಕೆ ಸಂಯುಕ್ತಾ ನಾಯಕಿಯಾಗಿ ಆಯ್ಕೆಯಾದರು. ಆ ನಂತರ ಸಂತು ನಿರ್ದೇಶನದ “ಕಾಲೇಜ್‌ ಕುಮಾರ್‌’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದರು.

ಇನ್ನೇನು ಎರಡೂ ಚಿತ್ರಗಳು ಪ್ರಾರಂಭವಾಗಬೇಕು ಎನ್ನುವಷ್ಟರಲ್ಲಿ ಸಂಯುಕ್ತಾಗೆ ತಮಿಳು ಚಿತ್ರವೊಂದರಿಂದ ಆಫ‌ರ್‌ ಬಂದಿದ್ದು, ಅದರ ಸಲುವಾಗಿ ಅವರು ಎರಡೂ ಚಿತ್ರಗಳನ್ನು ಬಿಡುವುದಕ್ಕೆ ಮುಂದಾದರಂತೆ. ಈ ಹಂತದಲ್ಲಿ “ಕಾಲೇಜ್‌ ಕುಮಾರ್‌’ ಚಿತ್ರದ ನಿರ್ಮಾಪಕರು, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದವರೆಗೂ ಹೋಗಿ ಮಾತಾಡಿದ್ದರಿಂದ, ಸಂಯುಕ್ತಾ ಚಿತ್ರದ ನಾಯಕಿಯಾಗಿ ಮುಂದುವರೆದಿದ್ದಾರೆ.

ಆದರೆ, “ವಾಸು – ಪಕ್ಕಾ ಕಮರ್ಷಿಯಲ್‌’ ಚಿತ್ರತಂಡದವರು ಸುಮ್ಮನಾಗಿದ್ದಾರೆ. ಸಂಯುಕ್ತಾ ಅವರನ್ನು ಬಿಟ್ಟುಕೊಟ್ಟು, ಅವರ ಜಾಗಕ್ಕೆ ರಾತ್ರೋ ರಾತ್ರಿ ನಿಶ್ವಿ‌ಕಾ ಎಂಬ ಹೊಸ ನಾಯಕಿಯನ್ನು ಆಯ್ಕೆ ಮಾಡಿದ್ದಾರೆ. “ನಾವು ಸಹ ನಿರ್ಮಾಪಕರ ಸಂಘಕ್ಕೆ ಹೋಗಬಹುದಿತ್ತು. ಆದರೆ, ಸಂಯುಕ್ತಾ ಅವರಿಗೆ ಚಿತ್ರದಲ್ಲಿ ನಟಿಸುವ ಆಸಕ್ತಿ ಇಲ್ಲ ಎಂದ ಮೇಲೆ ಅವರನ್ನು ಫೋರ್ಸ್‌ ಮಾಡುವುದು ಸರಿಯಾಗಲಿಲ್ಲ.

ಮೇ 3ರಂದು ಫೋಟೋ ಶೂಟ್‌ನಲ್ಲಿ ಸಹ ಸಂಯುಕ್ತಾ ಭಾಗವಹಿಸಿದ್ದರು. ನಾಲ್ಕನೇ ತಾರೀಖು ಬಂದು ತಮಿಳು ಚಿತ್ರದಲ್ಲಿ ಅವಕಾಶ ಸಿಕ್ಕಿರುವುದರಿಂದ, ಚಿತ್ರೀಕರಣ ಮುಂದಕ್ಕೆ ಹಾಕುವುದಕ್ಕೆ ಸಾಧ್ಯವಾ ಎಂದು ಕೇಳಿದರು. ಆದರೆ, ಅಷ್ಟರಲ್ಲಿ ಎಲ್ಲವೂ ಫೀಕ್ಸ್‌ ಆಗಿತ್ತು. ಕಲಾವಿದರ ಕಾಲ್‌ಶೀಟ್‌ ಪಡೆಯುವುದರ ಜೊತೆಗೆ, ಶೂಟಿಂಗ್‌ ಮನೆಯನ್ನು ಸಹ ಬಾಡಿಗೆ ಪಡೆದಾಗಿತ್ತು. ಚಿತ್ರೀಕರಣ ಮುಂದಕ್ಕೆ ಹಾಕಿದ್ದರೆ, ಪ್ಲಾನ್‌ ಹಾಳಾಗುತ್ತಿತ್ತು.

ಅದನ್ನು ಬದಲಾಯಿಸುವುದಕ್ಕೆ ಸಾಧ್ಯವೇ ಇರಲಿಲ್ಲ. ಹಾಗಾಗಿ ಅವರ ಬದಲು ಬೇರೆ ನಾಯಕಿಯನ್ನು ಆಯ್ಕೆ ಮಾಡಬೇಕಾಯಿತು. ನಮ್ಮ ಗುಡ್‌ ಲಕ್‌ ಎಂದರೆ, ಆಡಿಷನ್‌ ಮಾಡಿದ ಮೊದಲ ಹುಡುಗಿಯೇ ಫಿಕ್ಸ್‌ ಆದರು. ಈಗ ಯಶವಂತಪುರದ ನಿಶ್ವಿ‌ಕಾ ನಾಯ್ಡು ಎನ್ನುವವರು ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ’ ಎನ್ನುತ್ತಾರೆ ಅನೀಶ್‌. ಇನ್ನು “ವಾಸು – ಪಕ್ಕಾ ಕಮರ್ಷಿಯಲ್‌’ ಚಿತ್ರದ ಚಿತ್ರೀಕರಣ ಈಗಾಗಲೇ 8ರಿಂದ ಪ್ರಾರಂಭವಾಗಿದೆ.

ಈ ತಿಂಗಳ 31ರವರೆಗೂ ಚಿತ್ರೀಕರಣ ನಡೆಯಲಿದೆಯಂತೆ. ವಾಸು ಚಿತ್ರವನ್ನು ಅಜಿತ್‌ವಾಸನ್‌ ಅವರೇ ನಿರ್ದೇಶಿಸುತ್ತಿದ್ದು, ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಗಳನ್ನ ರಚಿಸಿದ್ದಾರೆ. ಚಿತ್ರಕ್ಕೆ ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜಿಸಿದರೆ, ಶ್ರೀಕಾಂತ್‌ ಸಂಕಲನಕಾರರಾಗಿ ಕೆಲಸ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

BJP 2

Muslim ಆ್ಯನಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.