ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಸೋಮಶೇಖರ್ ಮಾತುಕತೆ
Team Udayavani, May 10, 2017, 12:19 PM IST
ಪಿರಿಯಾಪಟ್ಟಣ: ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಕೆ.ಎನ್.ಸೋಮಶೇಖರ್ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೊಂದಿಗೆ ಮಾತುಕತೆ ನಡೆಸಿದ್ದು ಪಕ್ಷ ಸಂಘಟನೆಯ ಬಗ್ಗೆ ಸಕಾರಾತ್ಮಕ ಭರವಸೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಪಿರಿಯಾಪಟ್ಟಣದ ರಾಜಕೀಯ ವಿದ್ಯಾಮಾನಗಳ ಬಗ್ಗೆ ಮಾತುಕತೆ ನಡೆಸಿದ ಕೆ.ಎನ್.ಸೋಮಶೇಖರ್, ಪರಿಸರ ಕಾಳಜಿಯ ಕೆಲಸಗಳನ್ನು ಮಾಜಿ ಪ್ರಧಾನಿಗಳು ಪ್ರಶಂಶಿಸಿದ್ದಾರೆ. ಅಲ್ಲದೆ ತಾಲೂಕಿನ ಪ್ರಸ್ತುತ ಜೆಡಿಎಸ್ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಹಾಗೂ ರೈತರ ಪರವಾದ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿಸಿ ಮತ್ತು ಸಾಧ್ಯವಾದರೆ ಅಂತಹ ಕಾರ್ಯಕ್ರಗಳಿಗೆ ತಾವು ಆಗಿಮಿಸುವುದಾಗಿ ತಿಳಿಸಿ ಪ್ರೋತ್ಸಾಹ ನೀಡಿದ್ಧಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೆ.ಎನ್.ಸೋಮಶೇಖರ್, ಎಚ್.ಡಿ.ದೇವೇಗೌಡರ ಅಭಿಮಾನಿಯಾಗಿ ಅವರ ಹೋರಾಟದಿಂದ ಸ್ಪೂರ್ತಿ ಪಡೆದಿರುವ ನಾನು ಜೆಡಿಎಸ್ ಪಕ್ಷದಲ್ಲಿ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಾಯ ಹೆಚ್ಚಾದ ಹಿನ್ನೆಲೆ ಜೆಡಿಎಸ್ ವರಿಷ್ಠರನ್ನು ಭೇಟಿ ಮಾಡಿ ಎಲ್ಲಾ ವಿಚಾರಗಳನ್ನು ತಿಳಿಸಿದ್ದು.
ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ರಾಷ್ಟ್ರೀಯ ಅಧ್ಯಕ್ಷರು ತಾಲೂಕಿನಲ್ಲಿ ಉತ್ತಮ ಕೆಲಸಗಳನ್ನು ಮಾಡುವಂತೆ ಸೂಚಿಸಿ ದ್ದಾರೆ. ಚುನಾವಣೆಯ ಸಮಯ ಬಂದಾಗ ಪಕ್ಷದ ವತಿಯಿಂದ ಸೂಕ್ತ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ಧಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ
Hunsur: ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಆತ್ಮಹತ್ಯೆಗೆ ಶರಣು
Renukaswamy Case: ದರ್ಶನ್ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!
Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ
Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆಬರ ಪತ್ತೆ
MUST WATCH
ಹೊಸ ಸೇರ್ಪಡೆ
Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ
Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ
Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ
Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ
Holalkere: ರಾಜ್ಯ ಸರ್ಕಾರ ಬೆಲೆ ಏರಿಕೆ ನೀತಿ ಖಂಡಿಸಿ ಗೋವಿಂದ ಕಾರಜೋಳ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.