ಕರ್ಣನ್ ನೇಪಾಲ,ಬಾಂಗ್ಲಾಗೆ ಎಸ್ಕೇಪ್ ? ರಾಷ್ಟ್ರಪತಿ ರಿಲೀಫ್ ಗೆ ಯತ್ನ
Team Udayavani, May 11, 2017, 3:55 PM IST
ಹೊಸದಿಲ್ಲಿ : ನ್ಯಾಯಾಲಯ ನಿಂದನೆಗಾಗಿ ಸುಪ್ರೀಂ ಕೋರ್ಟ್ನಿಂದ ಆರು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಲ್ಕತ್ತ ಹೈಕೋರ್ಟ್ ನ್ಯಾಯಾಧೀಶ ಜಸ್ಟಿಸ್ ಸಿ ಎಸ್ ಕರ್ಣನ್, ನೇಪಾಲ ಅಥವಾ ಬಾಂಗ್ಲಾದೇಶಕ್ಕೆ ಎಸ್ಕೇಪ್ ಆಗಿರಬಹುದು. ಅವರು ರಿಲೀಫ್ ಗಾಗಿ ರಾಷ್ಟ್ರಪತಿಯನ್ನು ಸಂಪರ್ಕಿಸುವ ಸಿದ್ಧತೆ ನಡೆಸುತ್ತಿರಬಹುದು ಎಂದು ಅವರ ಕಾನೂನು ಸಲಹೆಗಾರ ಇಂದು ಗುರುವಾರ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಇದು ದೇಶದ ಉನ್ನತ ನ್ಯಾಯಾಂಗದಲ್ಲಿ ಏರ್ಪಟ್ಟಿರುವ ಸಂಘರ್ಷಕ್ಕೆ ದೊರಕಿರುವ ಹೊಸ ತಿರುವು ಎಂದು ತಿಳಿಯಲಾಗಿದೆ.
ಜಸ್ಟಿಸ್ ಕರ್ಣನ್ ಅವರನ್ನು ಬಂಧಿಸಿ ಜೈಲಿಗಟ್ಟಲು ಪೊಲೀಸರು ದೇಶದ ವಿವಿಧ ನಗರಗಳಲ್ಲಿ ಭಾರೀ ಹುಡುಕಾಟ ನಡೆಸಿದರಾದರೂ ಕರ್ಣನ್ ಅವರನ್ನು ಪತ್ತೆ ಹಚ್ಚಲು ಅವರಿಗೆ ಸಾಧ್ಯವಾಗಲಿಲ್ಲ.
“ಕುಲಭೂಷಣ್ ಜಾದವ್ ಕೇಸ್ನಲ್ಲಿ ಮಾಡಿರುವ ಹಾಗೆ ರಾಷ್ಟ್ರಪತಿಗಳು ಈ ಪ್ರಕರಣವನ್ನು ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಉಲ್ಲೇಖೀಸಬೇಕೆಂದು ನಾವು ಬಯಸುತ್ತೇವೆ; ನಾವು ಮುಂದಿನ ಹಂತದ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದ್ದೇವೆ; ಆದುದರಿಂದ ಆತ (ಕರ್ಣನ್) ಅಲ್ಲಿಯ ವರೆಗೆ ಅಡಗಿಕೊಂಡಿರುವ ಅಗತ್ಯವಿದೆ’ ಎಂದು ಮದ್ರಾಸ್ ಹೈಕೋರ್ಟಿನ ವಕೀಲರಾಗಿರುವ ಪೀಟರ್ ರಮೇಶ್ ಕುಮಾರ್ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು.
ಈ ನಡುವೆ ಕರ್ಣನ್ ಅವರ ಕಾನೂನು ಸಲಹಾ ತಂಡವು ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಿ ಕರ್ಣನ್ ಅವರಿಗಾಗಿರುವ ಶಿಕ್ಷೆ ಮತ್ತು ಬಂಧನದ ಆದೇಶವನ್ನು ಹಿಂಪಡೆಯುವಂತೆ ಕೇಳಿಕೊಂಡಿದೆ. ಜಸ್ಟಿಸ್ ಕರ್ಣನ್ ಅವರು “ನಾನೋರ್ವ ದಲಿತನಾಗಿರುವ ಕಾರಣಕ್ಕೆ ನನ್ನನ್ನು ಪ್ರತ್ಯೇಕಿಸಿ ಅನುಚಿತವಾಗಿ ನಡೆಸಿಕೊಳ್ಳಲಾಗುತ್ತಿದೆ; ನಿರಂತರ ಮಾನಸಿಕ ಹಿಂಸೆ, ಕಿರುಕುಳ ನೀಡಲಾಗುತ್ತಿದೆ’ ಎಂದು ಉನ್ನತ ನ್ಯಾಯಾಂಗದ ವಿರುದ್ಧ ಪದೇ ಪದೇ ಆರೋಪ ಮಾಡುತ್ತಾ ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?
Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್
SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ?
IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ
ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ