ಪಿಯು ಫಲಿತಾಂಶದಲ್ಲಿ ಜಿಲ್ಲೆ ನಂ.19


Team Udayavani, May 12, 2017, 12:53 PM IST

dvg2.jpg

ದಾವಣಗೆರೆ: ಕಳೆದ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಾವಣಗೆರೆ ಜಿಲ್ಲೆಗೆ ಶೇ. 55.17ರಷ್ಟು ಫಲಿತಾಂಶ ಲಭಿಸಿದೆ. ಗುರುವಾರ ಲಭ್ಯವಾದ ಪ್ರಾಥಮಿಕ ಮಾಹಿತಿ ಪ್ರಕಾರ ದಾವಣಗೆರೆ ಜಿಲ್ಲೆ ಶೇ.55.17ರಷ್ಟು ಫಲಿತಾಂಶದೊಂದಿಗೆ 19ನೇ ಸ್ಥಾನ ಗಳಿಸಿದೆ. ಕಳೆದ ವರ್ಷ ಶೇ. 58.01ರಷ್ಟು ಫಲಿತಾಂಶದೊಂದಿಗೆ 21ನೇ ಸ್ಥಾನದಲ್ಲಿತ್ತು.

ಈ ಬಾರಿ 18,810 ಹೊಸದಾಗಿ, 3,943  ಪುನರಾವರ್ತಿತ ಹಾಗೂ 448 ಖಾಸಗಿ ಅಭ್ಯರ್ಥಿಗಳು ಒಳಗೊಂಡಂತೆ 23,201 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. 11,313 ಬಾಲಕರು, 11,818 ಬಾಲಕಿಯರು 35 ಪರೀಕ್ಷಾ ಕೇಂದ್ರದಲ್ಲಿ ನೋಂದಣಿ ಮಾಡಿಸಿದ್ದರು. ಕಳೆದ ಸಾಲಿನ(2015-16)ನಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಒಟ್ಟಾರೆ 17,892 ವಿದ್ಯಾರ್ಥಿಗಳಲ್ಲಿ 10,380 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 

ಖಾಸಗಿಯಾಗಿ ಪರೀಕ್ಷೆ ತೆಗೆದುಕೊಂಡಿದ್ದ 440 ವಿದ್ಯಾರ್ಥಿಗಳಲ್ಲಿ ಶೇ. 22.5 ರಷ್ಟು ಪ್ರಮಾಣದಲ್ಲಿ ಅಂದರೆ 99 ವಿದ್ಯಾರ್ಥಿಗಳು, ಮರು ಪರೀಕ್ಷೆ ತೆಗೆದುಕೊಂಡ 3,524 ವಿದ್ಯಾರ್ಥಿಗಳಲ್ಲಿ 948 ವಿದ್ಯಾರ್ಥಿಗಳು (ಶೇ. 26.9) ಉತ್ತೀರ್ಣರಾಗಿದ್ದರು. 

ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿದ್ದ  6,401 ವಿದ್ಯಾರ್ಥಿಗಳಲ್ಲಿ 2,665(ಶೇ. 41.63), ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿದ್ದ 4,496 ವಿದ್ಯಾರ್ಥಿಗಳಲ್ಲಿ 2,713(ಶೇ. 60.34), ವಿಜ್ಞಾನ  ವಿಭಾಗದಲ್ಲಿ 6,995 ವಿದ್ಯಾರ್ಥಿಗಳಲ್ಲಿ 5,002(ಶೇ.71.51) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. 

ಪರೀಕ್ಷೆಗೆ ಹಾಜರಾಗಿದ್ದ 10,993 ಬಾಲಕರಲ್ಲಿ ಶೇ.47.21ರ ಪ್ರಮಾಣದಲ್ಲಿ 5,177 ಹಾಗೂ 10,883 ಬಾಲಕಿಯರಲ್ಲಿ ಶೇ.57.53ರ ಪ್ರಮಾಣದಲ್ಲಿ 6,250 ಬಾಲಕಿಯರು ಉತ್ತೀರ್ಣರಾಗಿದ್ದರು. ನಗರ ಪ್ರದೇಶ ಕಾಲೇಜುಗಳಿಗೆ ಶೇ.59.36, ಗ್ರಾಮೀಣ ಕಾಲೇಜುಗಳಲ್ಲಿ ಶೇ.52.97ರಷ್ಟು ಫಲಿತಾಂಶ ಬಂದಿತ್ತು.

ಈ ಬಾರಿ ಒಟ್ಟಾರೆ ಪರೀಕ್ಷೆಗೆ ಹಾಜರಾಗಿದ್ದ 18,535 ವಿದ್ಯಾರ್ಥಿಗಳಲ್ಲಿ 10,225 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿದ್ದ 5,981 ವಿದ್ಯಾರ್ಥಿಗಳಲ್ಲಿ 2,401 (ಶೇ.40.14) ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 4,784 ವಿದ್ಯಾರ್ಥಿಗಳಲ್ಲಿ ಶೇ.55.31ರಷ್ಟು ಫಲಿತಾಂಶದೊಂದಿಗೆ 2,646 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಜ್ಞಾನ  ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿದ್ದ 7,770 ವಿದ್ಯಾರ್ಥಿಗಳಲ್ಲಿ ಶೇ. 66.64 ರಷ್ಟು ಫಲಿತಾಂಶದೊಂದಿಗೆ 5,178 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಒಟ್ಟಾರೆ 12,143 ಬಾಲಕರಲ್ಲಿ 4,745 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 11,783 ಬಾಲಕಿಯರಲ್ಲಿ 6,467 ಬಾಲಕಿಯರು ಉತ್ತೀರ್ಣರಾಗುವ ಮೂಲಕ ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ.

ನಗರ ಪ್ರದೇಶದಲ್ಲಿ ಶೇ. 56.46 ಹಾಗೂ ಗ್ರಾಮೀಣ ಭಾಗದಲ್ಲಿ ಶೇ. 50.09 ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ ಹರಪನಹಳ್ಳಿಯ ಎಸ್‌. ಯು.ಜೆ.ಎಂ ಕಾಲೇಜಿನ ಶೃತಿ ವಾಲೇಕಾರ್‌ 579 ಅಂಕಗಳೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿದ್ದಾರೆ. ಅದೇ ಕಾಲೇಜಿನ ಮಂಗಳ 576 ಅಂಕ ಪಡೆದಿದ್ದಾರೆ. 

ಇಬ್ಬರು ವಿದ್ಯಾರ್ಥಿನಿಯರು ಮೂಲತಃ ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಕನ್ನಿಹಳ್ಳಿ ಗ್ರಾಮದವರು. ಕಳೆದ ಬಾರಿಯಂತೆಯೇ ಈ ಬಾರಿಯೂ ಕಲಾ ವಿಭಾಗದಲ್ಲಿ ಹರಪನಹಳ್ಳಿ ತಾಲೂಕು ವಿದ್ಯಾರ್ಥಿನಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅಥಣಿ ಪಪೂ ಕಾಲೇಜಿನ ಐಶ್ವರ್ಯ ಶಾನಭೋಗ 584 (ಶೇ.97.33) ಅಂಕ ಪಡೆದಿದ್ದಾಳೆ.

ವಾಣಿಜ್ಯ ಹಾಗೂ ಸಂಖ್ಯಾಶಾಸ್ತ್ರದಲ್ಲಿ ತಲಾ ನೂರು, ಲೆಕ್ಕಶಾಸ್ತ್ರದಲ್ಲಿ 99, ಅರ್ಥಶಾಸ್ತ್ರದಲ್ಲಿ 98, ಹಿಂದಿಯಲ್ಲಿ 97 ಹಾಗೂ ಇಂಗ್ಲಿಷ್‌ ವಿಷಯದಲ್ಲಿ 90 ಅಂಕ ಪಡೆದಿದ್ದಾಳೆ. ವಿಜ್ಞಾನ ವಿಭಾಗದಲ್ಲಿ ಶ್ರೀ ಸಿದ್ದಗಂಗಾ ವಿಜ್ಞಾನ ಪಿಯು ಕಾಲೇಜಿನ ಪಿ.ಎಚ್‌. ಬಸವರಾಜ್‌ 589 ಅಂಕ (ಶೇ. 98.16) ಗಳಿಸಿದ್ದಾರೆ.

ಕನ್ನಡ, ಜೀವಶಾಸ್ತ್ರದಲ್ಲಿ ತಲಾ 99, ಆಂಗ್ಲ ಭಾಷೆಯಲ್ಲಿ 91, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತದಲ್ಲಿ ತಲಾ 100 ಅಂಕ ಪಡೆದಿದ್ದಾರೆ. ಮೂಲತಃ ದಾವಣಗೆರೆ ತಾಲೂಕಿನ ಐಗೂರು ಗ್ರಾಮದವರು. ಡಾ| ತಿಮ್ಮಾರೆಡ್ಡಿ ಫೌಂಡೇಶನ್‌ ಬಾಲಕರ ಪಿಯು ಕಾಲೇಜಿನ ಎಚ್‌. ಆರ್‌. ಸಂಜಯ್‌ 581 (ಶೇ.96.83) ಅಂಕ ಪಡೆದಿದ್ದಾನೆ ಎಂದು ತಿಳಿದು ಬಂದಿದೆ.  

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು

KARADI (2)

Jagalur ; ರೈತನ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ ಮೂರು ಕರಡಿಗಳು

Shamanuru Shivashankarappa

Road ಅಲ್ಲಿ ಹೋಗುವವರು ಕಂಪ್ಲೆಂಟ್ ಕೊಟ್ಟರೆ ಅರೆಸ್ಟಾ?: ಬಿಎಸ್ ವೈ ಪರ ಶಾಮನೂರು

mp renukacharya

ಬಿಎಸ್ ವೈ ವಿರುದ್ದದ ಷಡ್ಯಂತ್ರದ ಹಿಂದೆ ಪ್ರಭಾವಿ ಸಚಿವರಿದ್ದಾರೆ: ರೇಣುಕಾಚಾರ್ಯ

17

Priyanka Jarakiholi: ಸಮಸ್ಯೆ ಇರುವ ಮಾತ್ರಕ್ಕೆ ಪ್ರತ್ಯೇಕ ರಾಜ್ಯ ಪ್ರಸ್ತಾವ ಸಲ್ಲ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.