ಕೆಂಪು ದೀಪ ತೆಗೆಸದ ಕೋಲ್ಕತಾ ಇಮಾಮ್ ಬರ್ಕಾತಿ ವಿರುದ್ಧ ಕೇಸು
Team Udayavani, May 12, 2017, 5:26 PM IST
ಕೋಲ್ಕತಾ : ಕೇಂದ್ರ ಸರಕಾರದ ಸೂಚನೆಗೆ ಡೋಂಟ್ ಕೇರ್ ಎನ್ನುವ ರೀತಿಯಲ್ಲಿ ತಮ್ಮ ಕಾರಿನ ಮೇಲೆ ಕೆಂಪು ದೀಪವನ್ನು ತೆಗೆಸಲು ನಿರಾಕರಿಸಿರುವ ಇಲ್ಲಿನ ಟಿಪ್ಪು ಸುಲ್ತಾನ್ ಮಸೀದಿಯ ಶಾಹಿ ಇಮಾಮ್ ಮೌಲಾನಾ ನೂರುರ್ ರೆಹಮಾನ್ ಬರ್ಕಾತಿ ವಿರುದ್ಧ ಇಂದು ಶುಕ್ರವಾರ ಕೇಸು ದಾಖಲಾಗಿದೆ.
ಕೇಂದ್ರ ಸರಕಾರದ ಸೂಚನೆಯ ಪ್ರಕಾರ ತಮ್ಮ ಕಾರಿನ ಕೆಂಪು ದೀಪವನ್ನು ತೆಗೆಸಲು ನಿರಾಕರಿಸಿದ್ದಲ್ಲದೇ ಅಸಂಬದ್ಧ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಇಮಾಮ್ ವಿರುದ್ಧ ಬಿಜೆಪಿ ನಾಯಕರೊಬ್ಬರು ಟೋಪ್ಸಿಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ವಾಹನಗಳ ಮೇಲಿನ ಕೆಂಪು ದೀಪ ತೆಗೆಸುವಂತೆ ಕೇಂದ್ರ ಸರಕಾರ ನೀಡಿದ್ದ ಆದೇಶವನ್ನು ಧಿಕ್ಕರಿಸಿದ್ದ ಇಮಾಮ್, ಕೇಂದ್ರ ಸರಕಾರ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿದಲ್ಲಿ ದೇಶದಲ್ಲಿನ ಮುಸ್ಲಿಮರು ಜಿಹಾದ್ ನಡೆಸಲಿದ್ದಾರೆ ಎಂಬ ಬೆದರಿಕೆಯನ್ನು ಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್