ಅಂಜನಾದ್ರಿಯ ಹನುಮ 


Team Udayavani, May 13, 2017, 12:31 PM IST

60.jpg

ಅಂಜನಾದ್ರಿ ಪರ್ವತ, ಗಂಗಾವತಿಯಿಂದ ಕಿಷ್ಕಿಂದಾ ಮಾರ್ಗದಲ್ಲಿ 16 ಕಿ.ಮೀ ದೂರದಲ್ಲಿದೆ. ಹುಲಗಿ  ಅಥವಾ ಗಂಗಾವತಿ ಯಾವುದೇ ಮಾರ್ಗದಿಂದಲೂ ಸುಲಭವಾಗಿ ಇಲ್ಲಿಗೆ ತಲುಪಬಹುದು.  ಈ ಪರ್ವತಕ್ಕೂ ಪುರಾಣಕ್ಕೂ ನಂಟು ಇದೆ. ಈ ಕ್ಷೇತ್ರ ರಾಮಾಯಣ ಕಾಲದ ಘಟನೆಗಳಿಗೆ ಸಾಕ್ಷಿಯಾಗಿ ನೆಲೆ ನಿಂತಿದೆ. ರಾಮಾಯಣ ಕಾಲಕ್ಕೆ ವಾನರ ಸೇನೆಯ ತಾಣವಾಗಿದ್ದ ಕಿಷ್ಕಿಂದಾ, ಅಂಜನಾದ್ರಿ, ವಿರುಪಾಪುರದಡ್ಡಿ, ಹನುಮಾಪುರ, ತಿರುಮಲಾಪುರ ಸುತ್ತಲಿನ ಪರಿಸರಕ್ಕೆ ಹೊಂದಿಕೊಂಡ ಅಂಜನಾದ್ರಿ ಪರ್ವತತಾಣವು ಆಂಜನೇಯನ ಜನ್ಮಸ್ಥಳವಾಗಿ ಪ್ರಸಿದ್ಧವಾಗಿದೆ. ಇಲ್ಲಿ ಉದ್ಬವ ಆಂಜನೇಯ ಭಕ್ತರನ್ನು ಸೆಳೆಯುತ್ತಿದ್ದಾನೆ. 

ಒಂದು ದಿನ ವಾನರರಾಜ ಕೇಸರಿ ಮತ್ತು ಅಂಜನಾದೇವಿಯರು ತಮ್ಮ  ರಾಜ್ಯದ ಸುಮೇರು ಪರ್ವತದ ಮೇಲೆ ವಿಹರಿಸುತ್ತಿದ್ದರು. ಹಾಗೇ ಮೃದುವಾಗಿ ಗಾಳಿ ಬೀಸುತ್ತಿರುವಾಗ ಅಂಜನಾದೇವಿಯ ಸೀರೆಯ ಸೆರಗು ಗಾಳಿಗೆ ಮೇಲಕ್ಕೆ ಹಾರಿತು. ಅವಳಿಗೆ ತನ್ನ ದೇಹವನ್ನು ಯಾರೋ ಸ್ಪರ್ಶಿಸುತ್ತಿರುವರೆಂಬ ಅನುಭವವಾಯಿತು.  ತನ್ನ ವಸ್ತ್ರವನ್ನು ಸರಿ ಮಾಡಿಕೊಂಡು “ನಾನು ಈಗಲೇ ಶಾಪವನ್ನು ಕೊಟ್ಟು ಅವನನ್ನು ಭಸ್ಮ ಮಾಡುತ್ತೇನೆ’ ಎಂದು ಕೋಪದಿಂದ ಶಾಪ ನೀಡಿದಳು. ಈಕೆಯ ಮಾತಿಗೆ ಪ್ರತಿಯಾಗಿ ವಾಯುದೇವನೆ ಹೇಳುತ್ತಿದ್ದಾನೆಂಬಂತೆ ಅವಳಿಗೆ ಭಾಸವಾಗಿ “ದೇವೀ, ನಾನು ನಿನ್ನ ವ್ರತವನ್ನು ಕೆಡಿಸಲಿಲ್ಲ’. ದೇವಿ ನಿನಗೆ ನನ್ನಷ್ಟೇ ತೇಜಸ್ವಿ, ಬಲಶಾಲಿಯಾದ ಹಾಗೂ ಬುದ್ದಿಶಕ್ತಿಯಲ್ಲಿ ಅದ್ವಿತೀಯನಾದ ಮಗನು ಜನಿಸುತ್ತಾನೆ. ಅವನು ಭಗವಂತನ ಸೇವಕನಾಗುತ್ತಾನೆ. ನಾನು ಅವನನ್ನು ರಕ್ಷಿಸುತ್ತೇನೆ’ ಎಂದಂತೆ ಭಾಸವಾಯಿತು.

ಅನಂತರ ಅಂಜನಾದೇವಿ ಮತ್ತು ಕೇಸರಿ ತಮ್ಮ ಸ್ಥಾನಕ್ಕೆ ಹೊರಟುಹೋದರು. ಭಗವಾನ್‌ ಶಂಕರರು  ಅಂಶರೂಪದಿಂದ ಅಂಜನಿಯ  ಕಿವಿಯ ಮುಖಾಂತರ ಅವಳ ಗರ್ಭದಲ್ಲಿ ಪ್ರವೇಶಿಸಿದನು. ಚೈತ್ರ ಶುಕ್ಲ ಪೌರ್ಣಮಿ ಮಂಗಳವಾರದ ದಿನ ಅಂಜನಾದೇವಿಯ ಮನೆಯಲ್ಲಿ ಭಗವಾನ್‌ ಶಂಕರನು ವಾನರ ರೂಪದಲ್ಲಿ ಜನಿಸಿದನು ಎಂಬುದು ರಾಮಾಯಣದಲ್ಲಿ ಬರುವ ದೃಷ್ಟಾಂತ. ಅದೇ ಈ ಅಂಜನಾ ಪರ್ವತದ ಮೇಲಿರುವ ಆಂಜನೇಯನ ಜನ್ಮಸ್ಥಳ. 

ಈ ಪರ್ವತ ಹತ್ತಲು ಕಡಿದಾದ  ಬೆಟ್ಟದ ಮಧ್ಯದಲ್ಲಿ 575 ಮೆಟ್ಟಿಲುಗಳು 
 ನಿರ್ಮಿತವಾಗಿದೆ.  ಈ ಮೆಟ್ಟಿಲುಗಳನ್ನೇರುವುದೇ ಒಂದು ಹರಸಾಹಸ. ಕೆಲವೆಡೆ ಚಿಕ್ಕಪುಟ್ಟ ಮೆಟ್ಟಿಲುಗಳಿವೆ ಇನ್ನು ಕೆಲವೆಡೆ ವಿಸ್ತಾರವಾದ ಮೆಟ್ಟಿಲುಗಳು.  ಅಲ್ಲಲ್ಲಿ ಬೆಟ್ಟದಲ್ಲಿ ಜಿನುಗುವ ನೀರಿನ ಝರಿಗಳು.  ಸುತ್ತಲೂ ಹಸಿರುಟ್ಟ ನಿಸರ್ಗ, ಇವುಗಳನ್ನೆಲ್ಲ ನೋಡುತ್ತ ಬೆಟ್ಟದ ಪೂರ್ಣ ಮೇಲು¤ದಿಗೆ ಬಂದರೆ ಸಾಕು, ಆಯಾಸವೆಲ್ಲ ಕರಗಿಹೋಗಿರುತ್ತದೆ.

ಈ ಬೆಟ್ಟದ ಮೇಲೆ ಧ್ಯಾನಮಂದಿರ. ದೇವಾಲಯದ ಮುಂದೆ ತುಳಸಿಕಟ್ಟೆ, ದೀಪಮಾಲಿಕಾ ಸ್ಥಂಭ ಇದೆ. ದೊಡ್ಡಬಂಡೆಗಲ್ಲೊಂದರ ಮೇಲೆ ನಿರ್ಮಿಸಿದ ದೇವಾಲಯ ಪ್ರದಕ್ಷಿಣಾ ಪಥವನ್ನು ಹೊಂದಿದ್ದು, ದೇವಾಲಯ ಒಳಗೆ ಬಂಡೆಗಲ್ಲಿನಲ್ಲಿ ಉದ್ಬವ ಆಂಜನೇಯ ಮೂರ್ತಿ ಇದೆ.    ಇಲ್ಲಿ ಕೋತಿಗಳ ಕಾಟ ಹೇಳತೀರದು. ಸದಾ ಕಾಲ ಇಲ್ಲಿ ರಾಮಜಪ ನಡೆಯುತ್ತಿರುತ್ತದೆ. ದೇವಾಲಯ ಸುತ್ತಲೂ ಬಂಡೆಗಲ್ಲುಗಳ ಆವೃತ್ತವಾಗಿದೆ.   ಬೆಟ್ಟದ ಮೇಲೆ ನಿಂತು ನಿಸರ್ಗದ ಸೌಂದರ್ಯ ಸವಿಯಬೇಕು. ಒಂದೆಡೆ ಆನೆಗೊಂದಿ. ಹಾಳು ಹಂಪೆಯ ಪರಿಸರ. ತುಂಗಭದ್ರಾ ನದಿಯಲ್ಲಿ ಮುಳುಗಿದ ಹಳೆಯ ಹಂಪೆಯ ದೇಗುಲಗಳು ಕಾಣುತ್ತವೆ. 

ವೈ.ಬಿ.ಕಡಕೋಳ

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.