ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ಉಗ್ರರು ಹತ್ಯೆ


Team Udayavani, May 15, 2017, 11:40 AM IST

Indian-Soldire-In-Action-3-600.jpg

ಶ್ರೀನಗರ: ಗಡಿಯೊಳಗೆ ಉಗ್ರರನ್ನು ಬಗ್ಗು ಬಡಿವಲ್ಲಿ ಭದ್ರತಾ ಪಡೆಗಳು ನಿರತವಾಗಿದ್ದರೆ, ಅತ್ತ ಗಡಿನಿಯಂತ್ರಣ ರೇಖೆಯಲ್ಲಿ ಪಾಕ್‌ ಅಪ್ರಚೋದಿತ ಶೆಲ್‌ ದಾಳಿ ಮುಂದುವರೆದಿದೆ. ಕುಪ್ವಾರಾದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಗುಂಡಿಕ್ಕಿ ಹತ್ಯೆಗೈದಿವೆ. ಇದೇ ವೇಳೆ ರಜೌರಿಯ ನೌಶೇರಾ ವಲಯದಲ್ಲಿ ಪಾಕ್‌ ಶೆಲ್‌ದಾಳಿಯಿಂದ ರಕ್ಷಿಸಲು 1 ಸಾವಿರ ಮಂದಿ ನಾಗರಿಕರನ್ನು ಸ್ಥಳಾಂತರಿಸಲಾಗಿದೆ. ಅಲ್ಲದೆ ಜನರೇ ಬಂಕರ್‌ ನಿರ್ಮಿಸಿಕೊಳ್ಳುತ್ತಿದ್ದಾರೆ. 

ಖಚಿತ ಮಾಹಿತಿ ಮೇರೆಗೆ ಕುಪ್ವಾರಾದ ಹಂದ್ವಾರಾದ ಭಗತ್ಪುರ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಶುರುಮಾಡಿವೆ. ಈ ವೇಳೆ ಉಗ್ರರು ಗುಂಡು ಹಾರಿಸಿದ್ದು, ಪ್ರತಿ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಪಾಕ್‌ ದಾಳಿ ಪರಿಣಾಮ ನೌಶೇರಾ ವಲಯದ 51 ಶಾಲೆಗಳನ್ನು ಮುಚ್ಚಲಾಗಿದೆ. ಕಳೆದ ಮೂರು ದಿನಗಳಿಂದ ಇವುಗಳು ತೆರೆದಿಲ್ಲ. ಇನ್ನು ಸ್ಥಳಾಂತರಗೊಂಡ ನಾಗರಿಕರಿಗೆ ಸೌಕರ್ಯಗಳನ್ನು ಒದಗಿಸಿಕೊಡಲಾಗುತ್ತಿದ್ದು 120 ಮಂದಿ ವಿವಿಧ ಇಲಾಖೆಗಳ ರಾಜ್ಯ ಸರಕಾರಿ ಅಧಿಕಾರಿಗಳನ್ನು ಇದಕ್ಕಾಗಿ ನೇಮಿಸಲಾಗಿದೆ. 

ಹಿಜ್ಬುಲ್‌ ಉಗ್ರನ ಬಂಧನ: ಪ್ರತ್ಯೇಕ ಪ್ರಕರಣವೊಂದರಲ್ಲಿ ಭಾರತ-ನೇಪಾಳ ಗಡಿಗೆ ತಾಗಿಕೊಂಡಂತೆ ಉತ್ತರ ಪ್ರದೇಶದ ಮಹಾರಾಜಗಂಜ್‌ನಲ್ಲಿ ಹಿಜ್ಬುಲ್‌ ಮುಜಾಹಿದೀನ್‌ ಉಗ್ರನನ್ನು ಬಂಧಿಸಲಾಗಿದೆ. ಪಾಕ್‌ ಪಾಸ್‌ಪೋರ್ಟ್‌ ಹೊಂದಿದ್ದ ಆತ ನೆಲಹಾಸು ವರ್ತಕನ ಸೋಗಿನಲ್ಲಿ ಗಡಿ ದಾಟಲು ಯತ್ನಿಸಿದ್ದ. ಈತ  ಭಯೋತ್ಪಾದನೆ ಕೃತ್ಯ ನಡೆಸುವ ಉದ್ದೇಶ ಹೊಂದಿದ್ದ ಎನ್ನಲಾಗಿದೆ. ನಾಸಿರ್‌ ಅಹ್ಮದ್‌ ಅಲಿಯಾಸ್‌ ಸಾದಿಕ್‌ (34) ಎಂಬಾತ ಬಂಧಿತ ಉಗ್ರನಾಗಿದ್ದು, ಈತ ಜಮ್ಮು- ಕಾಶ್ಮೀರದ ಬನಿಹಾಲ್‌ನವನಾಗಿದ್ದಾನೆ. ಹೆಚ್ಚಿನ ತನಿಖೆಗೆ ಆತನನ್ನು ಉತ್ತರಪ್ರದೇಶ ಭಯೋತ್ಪಾದನ ನಿಗ್ರಹ ದಳಕ್ಕೆ ಹಸ್ತಾಂತರಿಸಲಾಗಿದೆ. 

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.