ಆರನೇ ಕ್ಲಾಸಿಂದ ಆಂಗ್ಲ ಮಾಧ್ಯಮ: ತನ್ವೀರ್ ಸೇಠ್


Team Udayavani, May 18, 2017, 3:45 AM IST

Minister-Tanvir-Sait.jpg

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳ ಡ್ರಾಪ್‌ಔಟ್‌ ತಡೆಯಲು ಈ ಶೈಕ್ಷಣಿಕ ವರ್ಷದಿಂದಲೇ 3,770 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ವಿಭಾಗ ತೆರೆಯಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದರು.

ನಗರದ ನೃಪತುಂಗ ರಸ್ತೆಯಲ್ಲಿರುವ ಸರ್ವಶಿಕ್ಷಾ ಅಭಿಯಾನದ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ 1ನೇ ತರಗತಿಯಿಂದಲೇ ಇಂಗ್ಲಿಷ್‌ನ್ನು ಪರಿಣಾಮಕಾರಿಯಾಗಿ ಕಲಿಸಲಿದ್ದೇವೆ. ಹಾಗೆಯೇ 6ನೇ ತರಗತಿಯಿಂದ ಇಂಗ್ಲಿಷ್‌ ಮಾಧ್ಯಮವನ್ನು ಆಯ್ದ ಸರ್ಕಾರಿ ಶಾಲೆಗಳಲ್ಲಿ ಆರಂಭಿಸಲಿದ್ದೇವೆ. 6ನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿಸಲು ಅನೇಕ ವರ್ಷಗಳ ಹಿಂದೆಯೇ ಸರ್ಕಾರದಿಂದ ಅನುಮತಿ ಪಡೆಯಲಾಗಿದೆಯಾದರೂ, ಇಂಗ್ಲಿಷ್‌ ಶಿಕ್ಷಕರ ಕೊರತೆಯಿಂದ ಇದು ಸಾಧ್ಯವಾಗಿಲ್ಲ. ಈ ವರ್ಷ 5,200 ಇಂಗ್ಲಿಷ್‌ ಶಿಕ್ಷಕರಿಗೆ ವಿಶೇಷ  ತರಬೇತಿ ನೀಡಿದ್ದೇವೆ ಎಂದು ಹೇಳಿದರು.

ಕೆಲವು ಸರ್ಕಾರಿ ಪ್ರೌಢಶಾಲೆಯಲ್ಲಿ (9 ಮತ್ತು 10ನೇ ತರಗತಿ) ಈಗಾಗಲೇ ಆಂಗ್ಲ ಮಾಧ್ಯಮ ಇದೆ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಇಲ್ಲ. ಈ ವರ್ಷದಿಂದ ಆರಂಭವಾಗಲಿದೆ. ಇದರಿಂದ ಐದನೇ ತರಗತಿಯ ನಂತರ ಶಾಲೆ ಬಿಡುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಲಿದೆ. ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತೆರೆಯುವ ಸಂಬಂಧ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ನೀಡುವ ಪ್ರಸ್ತಾವನೆ ಪರಿಶೀಲಿಸಿ ಅನುಮತಿ ನೀಡಲಾಗುತ್ತದೆ ಎಂದರು.

176 ಕ್ಲಸ್ಟರ್‌ ಸ್ಕೂಲ್‌:
ಸರ್ಕಾರಿ ಶಾಲೆಗೆ ಕಾರ್ಪೊರೇಟ್‌ ಟಚ್‌ ನೀಡುವ ಉದ್ದೇಶದಿಂದ ರಾಜ್ಯದ ವಿವಿಧ ಹೋಬಳಿಗಳಲ್ಲಿ 176 ಕ್ಲಸ್ಟರ್‌ ಶಾಲೆ ತೆರೆಯಲಿದ್ದೇವೆ. 1ರಿಂದ 12ರವರೆಗೂ ಒಂದೇ ಕ್ಯಾಂಪಸ್‌ನಲ್ಲಿ ಎಲ್ಲ ತರಗತಿಗಳು ಲಭ್ಯವಿರುತ್ತವೆ. ಒಂದನೇ ತರಗತಿಗೆ ಸೇರಿದ ವಿದ್ಯಾರ್ಥಿ ಪಿಯು ತನಕ ಶಿಕ್ಷಣವನ್ನು ಒಂದೇ ಶಾಲೆಯಲ್ಲಿ ಪೂರೈಸಬಹುದು. ವಿದ್ಯಾರ್ಥಿಗಳು ಆಗಾಗ ಶಾಲೆ ಬದಲಾವಣೆ ಮಾಡುವ ಅವಶ್ಯಕತೆ ಇರುವುದಿಲ್ಲ. ಆಧುನಿಕ ಶಿಕ್ಷಣ ವ್ಯವಸ್ಥೆಗೆ ಪೂರಕವಾಗಿ ಕಂಪ್ಯೂಟರ್‌, ಇಧಿಗ್ರಂಥಾಲಯ ಮೊದಲಾದ ಸೌಲಭ್ಯವನ್ನು ಕ್ಲಸ್ಟರ್‌ ಶಾಲೆಗೆ ಒದಗಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಆದರ್ಶ ಶಾಲೆ ಮೇಲ್ದರ್ಜೆಗೆ:
ರಾಜ್ಯದಲ್ಲಿ 72 ಆದರ್ಶ ವಿದ್ಯಾಲಯ ಇದೆ. ಈ ವರ್ಷ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿಯಲ್ಲಿ ಶೇ.93.78ರಷ್ಟು ಫ‌ಲಿತಾಂಶ ಪಡೆದಿದ್ದಾರೆ. ಆದರ್ಶ ಶಾಲೆಯ ಎನ್‌ಸಿಇಆರ್‌ಟಿ ಪಠ್ಯಕ್ರಮ ಅಳವಡಿಸಲು ಕೇಂದ್ರೀಯ ವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಈ ಮೂಲಕ ಶಿಕ್ಷಕರಿಗೆ ತರಬೇತಿ ನೀಡುತ್ತೇವೆ. 450ಕ್ಕೂ ಅಧಿಕ ಮಕ್ಕಳಿದ್ದು, ಆದರ್ಶ ಶಾಲೆ ಆರಂಭಕ್ಕೆ ಪ್ರಸ್ತಾವನೆ ಸಲ್ಲಿಸಿದರೆ, ಪರಿಶೀಲಿಸಿ, ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

ಈ ಶೈಕ್ಷಣಿಕ ವರ್ಷದಿಂದ 9ನೇ ತರಗತಿಯ ವಿಜ್ಞಾನ ಮತ್ತು ಗಣಿತ ವಿಷಯಕ್ಕೆ ಎನ್‌ಸಿಇಆರ್‌ಟಿ ಪಠ್ಯಕ್ರಮವನ್ನು ಅಳವಡಿಸಲಾಗುತ್ತದೆ. ಮುಂದಿನ ವರ್ಷದಿಂದ ಎಸ್ಸೆಸ್ಸೆಲ್ಸಿ ವಿಜ್ಞಾನ ಮತ್ತು ಗಣಿತ ಪರೀಕ್ಷೆ ಎನ್‌ಸಿಇಆರ್‌ಟಿ ಪಠ್ಯಕ್ರಮದಂತೆ ನಡೆಯಲಿದೆ. ಎನ್‌ಸಿಇಆರ್‌ಟಿ ಪಠ್ಯಪುಸ್ತಕವನ್ನು ವೆಬ್‌ಸೈಟ್‌ನಲ್ಲೂ ಅಪ್‌ಲೋಡ್‌ ಮಾಡಲಾಗುತ್ತದೆ ಎಂದು ಹೇಳಿದರು.

ಆರ್‌ಟಿಇ ಮೊದಲ ಸುತ್ತಿನಲ್ಲಿ 96 ಸಾವಿರ ಸೀಟು ಹಂಚಿಕೆಯಾಗಿದ್ದು, ಅದರಲ್ಲಿ 84 ಸಾವಿರ ಮಕ್ಕಳ ದಾಖಲಾತಿ ಪೂರ್ಣಗೊಂಡಿದೆ. ಇನ್ನೂ 12 ಸಾವಿರ ಮಕ್ಕಳ ದಾಖಲಾತಿ ಬಾಕಿ ಇದೆ. ಈ ಬಗ್ಗೆ ಸಂಬಂಧಪಟ್ಟ ಬಿಇಒಗಳಿಂದ ಮಾಹಿತಿ ಪಡೆಯುತ್ತಿದ್ದೇವೆ. ಆದಷ್ಟು ಬೇಗ ದಾಖಲಾತಿಗೆ ಸೂಚನೆ ನೀಡಿದ್ದೇವೆ. ಮೇ.19ರಂದು ಎರಡನೇ ಸುತ್ತಿನ ಆರ್‌ಟಿಇ ಸೀಟು ಹಂಚಿಕೆ ನಡೆಯಲಿದೆ.

ದಾಖಲಾತಿ ಆಂದೋಲನ:
ಜೂನ್‌ 1ರಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಆರಂಭವಾಗಲಿದ್ದು, ಮೇ 31ರ ತನಕವೂ ದಾಖಲಾತಿ ಆಂದೋಲನ ನಡೆಯಲಿದೆ. ಇದಾದ ನಂತರ ಆಯಾ ಭಾಗದ ಸರ್ಕಾರಿ ಶಾಲೆ ಮುಖ್ಯಸ್ಥರು ಜೂ.1 ರಿಂದ ಜೂ.30ರ ವರೆಗೆ ಮಕ್ಕಳ ದಾಖಲಾತಿಗೆ ವಿಶೇಷ ಆಂದೋಲನ ನಡೆಸಲಿದ್ದಾರೆ.  ಆಂದೋಲನಕ್ಕೆ ಸಂಬಂಧಿಸಿದ ಎರಡು ವಿಡಿಯೋ ಕೂಡ ಸಿದ್ಧಪಡಿಸಲಾಗಿದೆ ಎಂದು ಸಚಿವ ತನ್ವೀರ್ ಸೇಠ್ ಹೇಳಿದರು.

ಟಾಪ್ ನ್ಯೂಸ್

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

1-aaa

Kanniyakumari; 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

BJP workers: ಸಿಎಂ ಮನೆಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಯತ್ನ

BJP workers: ಸಿಎಂ ಮನೆಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಯತ್ನ

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

1-sub

Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ

1-qewqeweqw

Mangaluru ನಮಾಜ್‌ ಪ್ರಕರಣ: ಬಿ ರಿಪೋರ್ಟ್‌ ಸಲ್ಲಿಕೆ; ಶರಣ್‌ ಪಂಪ್‌ವೆಲ್‌ ವಿರುದ್ಧ ಪ್ರಕರಣ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.