ಹಲವೆಡೆ ಮುಂಗಾರು ಪೂರ್ವ ಮಳೆ ಅಬ್ಬರ
Team Udayavani, May 18, 2017, 11:02 AM IST
ಬೆಂಗಳೂರು: ರಾಜ್ಯದ ವಿವಿಧೆಡೆ ಸುರಿಯುತ್ತಿದ್ದ ಮುಂಗಾರು ಪೂರ್ವ ಮಳೆ ಬುಧವಾರ ಕೆಲವೆಡೆ ಅಬ್ಬರಿಸಿದೆ.
ಬೆಂಗಳೂರು ನಗರ, ರಾಮನಗರ ಜಿಲ್ಲೆಯ ಕನಕಪುರ ಸೇರಿದಂತೆ ರಾಜ್ಯದ ಕೆಲವೆಡೆ ರಭಸವಾಗಿ ಮಳೆ ಸುರಿದಿದೆ.
ಬುಧವಾರದ ಮಳೆಗೆ ಕುದೂರು ಹೋಬಳಿಯ ನಾಲ್ಕು ಗ್ರಾಮ ಹಾಗೂ ಅದರಂಗಿ ಗ್ರಾಮದಲ್ಲಿ ತೆಂಗು, ಅಡಕೆ ಹಾಗೂ ಹಲಸಿನ ಮರಗಳು, ಮಾವಿನಮರ, ಬಾಳೆತೋಟ ಮುಂತಾದ ತೋಟಗಾರಿಕೆ ಬೆಳೆಗಳು ನಾಶವಾಗಿವೆ.
ರಾಜಧಾನಿ ಬೆಂಗಳೂರಲ್ಲಿ ಬುಧವಾರ ಸಂಜೆ ಸುರಿದ ಮಳೆಗೆ ಒಂದೆರಡು ಕಡೆ ಮರಗಳು ಧರೆಗುರುಳಿದ್ದು, ಅಲ್ಲಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ಗಾಳಿ ಸಹಿತ ಮಳೆಯ ಹೊಡೆತಕ್ಕೆ ಸಿಲ್ಕ್ ಬೋರ್ಡ್ನಲ್ಲಿ ಮರ ಉರುಳಿದ್ದು, ಶಿವನಗರ
ಮತ್ತು ಕೋರಮಂಗಲ 8ನೇ ಕ್ರಾಸ್ನಲ್ಲಿ ಮರದ ರೆಂಬೆಗಳು ಮುರಿದಿವೆ. ಕೆಲವು ಅಂಡರ್ಪಾಸ್ ಮತ್ತು ಜಂಕ್ಷನ್ಗಳಲ್ಲಿ
ನೀರು ಸರಾಗವಾಗಿ ಹರಿದುಹೋಗದೆ, ಸುಗಮ ಸಂಚಾರಕ್ಕೂ ವ್ಯತ್ಯಯ ಉಂಟಾಗಿತ್ತು.
ಉತ್ತರ ಕರ್ನಾಟಕದಲ್ಲಿ ಉಂಟಾಗಿದ್ದ ಮೇಲ್ಮೆ„ ಸುಳಿಗಾಳಿ ಹಾಗೂ ಕಡಿಮೆ ಒತ್ತಡದ ತಗ್ಗು (ಟ್ರಫ್) ಪರಿಣಾಮ 3-4 ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಇದೇ ವಾತಾವರಣ ಮುಂದುವರಿಯುವ
ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕನಕಪುರದಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 6 ಸೆಂ.ಮೀ. ಮಳೆಯಾಗಿದ್ದು, ಕೆ.ಆರ್.ನಗರ 4, ಶ್ರೀರಂಗಪಟ್ಟಣ, ಮಂಡ್ಯ ತಲಾ 3, ಎಲೆಕ್ಟ್ರಾನಿಕ್ ಸಿಟಿ, ಆನೇಕಲ್, ಚನ್ನಪಟ್ಟಣ ತಲಾ 2, ಮೈಸೂರು, ಕೃಷ್ಣರಾಜ ಸಾಗರ ತಲಾ 1
ಸೆಂ.ಮೀ. ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ