in focus : ರಂಗಭೂಮಿಯಿಂದ ಸಿನಿಮಾಗೆ


Team Udayavani, May 19, 2017, 8:58 PM IST

Anusha-19-5.jpg

ನೀವು ಯಾವುದೇ ಕ್ಷೇತ್ರದಲ್ಲಾದರೂ ತೊಡಗಿರಿ, ಆದರೆ ನಿಮ್ಮನ್ನು ಆಕರ್ಷಿಸುವ ಏಕೈಕ ರಂಗವೆಂದರೆ ಅದು ಸಿನಿಮಾ ರಂಗ. ಸಿನಿಮಾರಂಗದೆಡೆಗೆ ಆಕರ್ಷಿತರಾಗದೇ ಇರುವವರು ಕಡಿಮೆ. ಕೆಲವರು ದೂರದಿಂದಲೇ ಸಿನಿಮಾ ಮಾಡುವ ಕನಸು ಕಂಡರೆ ಇನ್ನು, ಕೆಲವರು ಆ ಕ್ಷೇತ್ರಕ್ಕೆ ಬಂದು ತಮ್ಮ ಕನಸನ್ನು ಸಾಕಾರಗೊಳಿಸುತ್ತಾರೆ. ಹೀಗೆ ಕನಸು ಈಡೇರಿದ ಖುಷಿಯಲ್ಲಿದ್ದಾರೆ ಅನುಷಾ. ಯಾವ ಅನುಷಾ ಎಂದರೆ ತೆರೆಗೆ ಸಿದ್ಧವಾಗಿರುವ ‘ಮೋಜೋ’ ಸಿನಿಮಾದ ನಾಯಕಿ ಎನ್ನಬೇಕು. ಅನುಷಾ ಮೂಲತಃ ಇಂಜಿನಿಯರ್‌. ಸದ್ಯ ಉದ್ಯೋಗದ ಜೊತೆ ಜೊತೆಗೆ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ.

‘ಮೋಜೋ’ ಎಂಬ ಸಿನಿಮಾವೊಂದು ತಯಾರಾಗಿದ್ದು, ಈಗಾಗಲೇ ಆ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಈ ಚಿತ್ರದ ಮೂಲಕ ಅನುಷಾ ನಾಯಕಿಯಾಗಿ ಎಂಟ್ರಿಕೊಟ್ಟಿದ್ದಾರೆ. ‘ಮೋಜೋ’ ಒಂದು ವಿಭಿನ್ನ ಕಥಾಹಂದರವಿರುವ ಸಿನಿಮಾವಾಗಿದ್ದು, ಅನುಷಾ ಪಾತ್ರ ಹಾಗೂ ಅದರ ಪೋಷಣೆ ಕೂಡಾ ಬೇರೆ ರೀತಿ ಇದೆಯಂತೆ. ಅನುಷಾ ಇಲ್ಲಿ ಮನೋವೈದ್ಯೆಯಾಗಿ ಕಾಣಸಿಕೊಂಡಿದ್ದಾರೆ. ಈ ಪಾತ್ರ ಮಾಡುವ ಮೊದಲು ಅನುಷಾ ಒಂದು ತಿಂಗಳ ಕಾಲ ರಿಹರ್ಸಲ್‌ ಕೂಡಾ ಮಾಡಿದ್ದಾರೆ.

ಅಂದಹಾಗೆ, ಅನುಷಾಗೆ ‘ಮೋಜೋ’ ಚೊಚ್ಚಲ ಸಿನಿಮಾ. ಹಾಗಂತ ನಟನೆ ಹೊಸದಲ್ಲ. ರಂಗಭೂಮಿಯಲ್ಲಿ ತೊಡಗಿಕೊಂಡಿದ್ದ ಅನುಷಾ ಕೆಲವು ನಾಟಕಗಳಲ್ಲಿ ಬಣ್ಣ ಹಚ್ಚಿದ್ದಾರೆ. ಆ ಅನುಭವದೊಂದಿಗೆ ‘ಮೋಜೋ’ ಪಾತ್ರ ಮಾಡಿದ್ದಾರೆ. ಅನುಷಾಗೆ ಸಿನಿಮಾ ಮೇಲೆ ಸಿನಿಮಾ ಮಾಡಬೇಕೆಂದಿಲ್ಲ. ಏಕೆಂದರೆ, ಅವರು ಇಷ್ಟಪಟ್ಟು ಆರಿಸಿಕೊಂಡು ಇಂಜಿನಿಯರಿಂಗ್‌ ಕ್ಷೇತ್ರವಿದೆ. ಆದರೆ, ತುಂಬಾ ಭಿನ್ನವಾಗಿರುವ ಕಥೆ, ಪಾತ್ರ ಸಿಕ್ಕರೆ ಮಾಡುವ ಆಸೆ ಅನುಷಾಗಿದೆ. ‘ನನಗೆ ಸಿನಿಮಾದಲ್ಲಿ ಎಷ್ಟು ಹೊತ್ತು ಬಂದು ಹೋಗುತ್ತೇನೆ ಅನ್ನೋದು ಮುಖ್ಯವಲ್ಲ. ಆದರೆ, ಬಂದಷ್ಟು ಹೊತ್ತು ನನಗೆ ಅಭಿನಯಕ್ಕೆ ಅವಕಾಶವಿದೆಯಾ ಅನ್ನೋದು ಮುಖ್ಯ’ ಎನ್ನುತ್ತಾರೆ ಅನುಷಾ. 

– ರವಿ ರೈ

ಟಾಪ್ ನ್ಯೂಸ್

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.