ಭೂಮಿಪುತ್ರನ ಜನಕ ಯಡಿಯೂರಪ್ಪ ! 


Team Udayavani, May 20, 2017, 11:41 AM IST

tejaswini-1.jpg

ಮಂಡ್ಯ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ 20 ತಿಂಗಳ ಅವಧಿಯ ಸಾಧನೆಗಳ ಬಗ್ಗೆ “ಭೂಮಿಪುತ್ರ’ ನಿರ್ಮಾಣ ಮಾಡುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿದೆ. “ಭೂಮಿಪುತ್ರ’ನ ನಿಜವಾದ ಜನಕನನ್ನು ಯಡಿಯೂರಪ್ಪ ಮೂಲಕ ತೋರಿಸಲು ಬಿಜೆಪಿ ಕಾರ್ಯಕರ್ತರು ಸಿದ್ಧರಾಗುತ್ತಿದ್ದಾರೆ. ಇಂತಹದೊಂದು ಸುಳಿವು ನೀಡಿದವರು ಮಾಜಿ ಸಂಸದೆ ತೇಜಸ್ವಿನಿ ರಮೇಶ್‌.

“ಕುಮಾರಸ್ವಾಮಿ ಬಗ್ಗೆ “ಭೂಮಿಪುತ್ರ’ ಎಂಬ ಸಿನಿಮಾ ಬರುತ್ತಿದೆ. ಆ ಭೂಮಿಪುತ್ರನ ನಿಜವಾದ ಜನಕ ಯಡಿಯೂರಪ್ಪ. ಇಪ್ಪತ್ತು ತಿಂಗಳು ಮುಖ್ಯಮಂತ್ರಿಗಿರಿ ಮಾಡಿಕೊಂಡು ಆಡಳಿತ ನಡೆಸಿದ ಮಾತ್ರಕ್ಕೆ ಕುಮಾರಸ್ವಾಮಿ ಭೂಮಿಪುತ್ರನಾಗುವುದಾದರೆ ನಲವತ್ತು ವರ್ಷ ಹೋರಾಟ ಮಾಡಿಕೊಂಡು ಬಂದಿರುವ, ಇಳಿವಯಸ್ಸಿನಲ್ಲೂ ಪರಿಶ್ರಮದ
ರಾಜಕಾರಣ ಮಾಡುತ್ತಿರುವ ಯಡಿಯೂರಪ್ಪ ಬಗ್ಗೆ ಸಿನಿಮಾ ಮಾಡಲೇಬೇಕು ಎಂಬ ಹಠಕ್ಕೆ ಬಿಜೆಪಿ ಕಾರ್ಯಕರ್ತರು ಬಿದ್ದಿದ್ದಾರೆ’ ಎಂದು ಶುಕ್ರವಾರ ಪ್ರವಾಸಿಮಂದಿರದಲ್ಲಿ ಮಾಜಿ ಸಂಸದೆ ತೇಜಸ್ವಿನಿ ರಮೇಶ್‌ ಸುದ್ದಿಗಾರರಿಗೆ ತಿಳಿಸಿದರು.

“ಭೂಮಿಪುತ್ರ’ ಸಿನಿಮಾದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದ ಮೇಲೆ ಯಡಿಯೂರಪ್ಪರನ್ನು ಮುಗಿಸಲು ಏನೇನು ತಂತ್ರಗಾರಿಕೆ ಮಾಡಿದರು ಎನ್ನುವುದನ್ನು ತೋರಿಸುವುದಿಲ್ಲ ಎಂಬ ಅನುಮಾನ ಕಾರ್ಯಕರ್ತರಲ್ಲಿದೆ. ಯಡಿಯೂರಪ್ಪ
ಕೃಪಾಶೀರ್ವಾದದಿಂದ ಮುಖ್ಯಮಂತ್ರಿ ಹುದ್ದೆಗೇರಿದ ಕುಮಾರಸ್ವಾಮಿ ಯಾವ ರೀತಿ ವಂಚನೆ ಮಾಡಿದರು. ಅವರ ಅವಕಾಶವಾದಿ ರಾಜಕಾರಣ ಹೇಗಿರುತ್ತೆ ಎನ್ನುವುದನ್ನು ನಮ್ಮ ಚಿತ್ರದಲ್ಲಿ ತೋರಿಸೋಣ ಎಂದು ನನ್ನ ಬೆನ್ನು ಹತ್ತಿದ್ದಾರೆ’ ಎಂದು ಹೇಳಿದರು. “ನಾನೇ ಈ ಚಿತ್ರವನ್ನು ನಿರ್ದೇಶಿಸಬೇಕೆಂಬ ಕಾರ್ಯಕರ್ತರ ಹಠಕ್ಕೆ ಒಂದು ಕಾರಣವೂ ಇದೆ.
ಚಿತ್ರದಲ್ಲಿ ಬರುವ ಪಾತ್ರಗಳನ್ನು ನಾನು ಹತ್ತಿರದಿಂದ ಕಂಡಿದ್ದೇನೆ. ದೇವೇಗೌಡ, ಕುಮಾರಸ್ವಾಮಿ, ಿ.ಕೆ.ಶಿವಕುಮಾರ್‌ರನ್ನು ಬಿಟ್ಟು ರಾಜಕಾರಣ ನೋಡಲಿಕ್ಕೆ ಸಾಧ್ಯವಿಲ್ಲ. ಅವೆಲ್ಲವನ್ನೂ ಚಿತ್ರದಲ್ಲಿ ತೋರಿಸಲಾಗುವುದು’ ಎಂದು ಹೇಳಿದರು.

“ಮುಖ್ಯವಾಗಿ ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣ ಎಂಥದ್ದು ಎನ್ನುವುದನ್ನು ತೋರಿಸಬೇಕಿದೆ.
ಪಕ್ಷ ಅಧಿಕಾರಕ್ಕೆ ಬರಲು ಕಾಂಗ್ರೆಸ್‌ನಿಂದಲೂ ಲಾಭ ಪಡೆಯುತ್ತಾರೆ. ಆನಂತರ ಬಿಜೆಪಿ ಸೇರಿಕೊಂಡು ಮುಖ್ಯಮಂತ್ರಿನೂ ಆಗುತ್ತಾರೆ. ಅದಕ್ಕೆ ಅವರು “ಭೂಮಿಪುತ್ರ’ ಆದರು. ಈಗ ತಯಾರಾಗುತ್ತಿರುವ ಭೂಮಿಪುತ್ರದಲ್ಲಿ ನೈಜ ಚಿತ್ರಣ ಸಿಗುವುದಿಲ್ಲ.

ಹಳೇ ಮೈಸೂರು ಪ್ರಾಂತ್ಯದ ರೈತರಿಗೆ ನಿಜವಾದ ಭೂಮಿಪುತ್ರನ ಕತೆಯನ್ನು, ಅದರ ಜನಕನನ್ನು ಯಡಿಯೂರಪ್ಪ ಮೂಲಕ ಸಿನಿಮಾ ಮಾಡಿ ತೋರಿಸುತ್ತೇವೆ’ ಎಂದು ನುಡಿದರು. “ನಿಜವಾದ ನೇಗಿಲಯೋಗಿ, ಅನ್ನದಾತರ ಅಪ್ರತಿಮ ನಾಯಕ ಯಡಿಯೂರಪ್ಪ. ಚಿತ್ರಕತೆಗಾಗಿ ಹುಡುಕುವ ಅಗತ್ಯವಿಲ್ಲ. ಪತ್ರಿಕಾ ವರದಿ ಹಾಗೂ ಟಿವಿ ಬೈಟ್ಸ್‌ಗಳನ್ನಿಟ್ಟುಕೊಂಡರೆ ಚಿತ್ರಕಥೆ ಸಿದ್ಧವಾಗಲಿದೆ. “ನೇಗಿಲಯೋಗಿ ಬಿಎಸ್‌ವೈ’, “ಭೂಮಿಪುತ್ರನ ಜನಕ ಬಿಎಸ್‌ವೈ’ ಅಂತ ಹೇಳಿ ಯಡಿಯೂರಪ್ಪಹೆಸರಿನಲ್ಲಿ ಸಿನಿಮಾ ನಿರ್ಮಾಣ ಮಾಡುವುದು. ನಾನೇ ನಿರ್ದೇಶನ ಮಾಡಲಿದ್ದು, ಬಿಜೆಪಿ ಕಾರ್ಯಕರ್ತರೇ ನಿರ್ಮಾಪಕರು ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Slander about Malabar group: Mumbai High Court harsh verdict

Malabar group ಬಗ್ಗೆ ಅಪಪ್ರಚಾರ:  ಮುಂಬಯಿ ಹೈಕೋರ್ಟ್‌ ಕಠಿನ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.