ಅಂಬರೀಶ್ ಭೇಟಿ ಮಾಡಿದ ಪರಮೇಶ್ವರ್
Team Udayavani, May 20, 2017, 11:56 AM IST
ಬೆಂಗಳೂರು: ಮಾಜಿ ಸಚಿವ, ಮಂಡ್ಯ ಶಾಸಕ ಅಂಬರೀಶ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಭೇಟಿ ಮಾಡಿ ಮಾತುಕತೆ ನಡೆಸಿದರು. ಗಾಲ್ಫ್ ರಸ್ತೆಯಲ್ಲಿರುವ ಅಂಬರೀಶ್ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ
ಪರಮೇಶ್ವರ್, ಅವರ ಕ್ಷೇತ್ರದ ಕೆಲಸದ ಕುರಿತು ಮಾತನಾಡಲು ಬಂದಿದ್ದೆ. ಯಾವುದೇ ರಾಜಕೀಯ ವಿಚಾರ ಚರ್ಚೆ ನಡೆಸಿಲ್ಲ. ಅಂಬರೀಶ್ ನಮಗೆ ಮೊದಲಿನಿಂದಲೂ ಆತ್ಮೀಯರು. ಮುಂದಿನ ಚುನಾವಣೆಯಲ್ಲಿಯೂ ಅವರು ಸ್ಪರ್ಧೆ ಮಾಡುತ್ತಾರೆ ಎಂದು ಪರಮೇಶ್ವರ್ ಹೇಳಿದರು.
ಇದೇ ವೇಳೆ ಕುಮಾರ ಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿ ಸಿರುವ ಅವರು, ಕುಮಾರ ಸ್ವಾಮಿ ರಾಜಕೀಯ ಮಾಡುವುದರ ಬಗ್ಗೆ ನಮಗೆ ಹೊಟ್ಟೆಯುರಿ ಇಲ್ಲ. ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿಯಾಗಿದ್ದು, ಎಲ್ಲವನ್ನೂ ಎದುರಿಸುವ
ಸಮರ್ಥರಿದ್ದಾರೆ. ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಎಸ್ಐಟಿ ನಡೆಸುತ್ತಿರುವ ತನಿಖೆಯಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರ ಇಲ್ಲ. ಸುಪ್ರೀಂಕೋರ್ಟ್ ಆದೇಶದಂತೆ ಎಸ್ಐಟಿ ತನಿಖೆ ನಡೆಸುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಂಬರೀಶ್, ಮಂಡ್ಯ ಕ್ಷೇತ್ರದ ಕುರಿತು ಪರಮೇಶ್ವರ್ ಅವರೊಂದಿಗೆ ಚರ್ಚಿಸಿದ್ದೇನೆ. ಬೇರೆ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ. ನಾನು ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ. ಮುಂದೆಯೂ
ಕಾಂಗ್ರೆಸ್ನಲ್ಲಿಯೇ ಇರುತ್ತೇನೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಹೈ ಕಮಾಂಡ್ ನಿರ್ಧಾರ ಮಾಡುತ್ತದೆ. ಮಂಡ್ಯದಲ್ಲಿ ತಮ್ಮ ಬಿಟ್ಟು ಬೇರೆ ಯಾರು ಸ್ಪರ್ಧಿಸುತ್ತಾರೆ ಎಂದು ಪ್ರಶ್ನಿಸಿದರು. ಸಿಎಂ ಸಿದ್ದರಾಮಯ್ಯ
ಅವರ ನಾಯಕತ್ವದ ಬಗ್ಗೆ ಯಾವ ಅಸಮಾಧಾನ ಇಲ್ಲ. ಅವರ ಬಗ್ಗೆ ಯಾವತ್ತೂ ಮಾತನಾಡುವುದಿಲ್ಲ ಎಂದು ಅಂಬರೀಶ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ