ಭಾರತ ಭಯೋತ್ಪಾದನೆಯ ಬಲಿಪಶು, ಉಗ್ರರಿಗೆ ಆಸರೆ ಸಲ್ಲದು: ಟ್ರಂಪ್‌


Team Udayavani, May 22, 2017, 11:58 AM IST

Donald Trump-700.jpg

ರಿಯಾಧ್‌ : ಭಾರತವು ಭಯೋತ್ಪಾದನೆಗೆ ಬಲಿಪಶುವಾಗಿರುವ ದೇಶವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. 

ಅರಬ್‌ ಮತ್ತು ಇಸ್ಲಾಮಿಕ್‌ ನಾಯಕರು “ಇಸ್ಲಾಮಿಕ್‌ ಭಯೋತ್ಪಾದನೆ’ಯನ್ನು ಮಟ್ಟ ಹಾಕುವಲ್ಲಿ ತಮ್ಮಿಂದ ಸಾಧ್ಯವಿರುವ ಎಲ್ಲವನ್ನೂ ಮಾಡಬೇಕು ಎಂದು ಟ್ರಂಪ್‌ ಕರೆ ನೀಡಿದ್ದಾರೆ. 

ಟ್ರಂಪ್‌ ಅವರು ನಿನ್ನೆ ಭಾನುವಾರ ರಿಯಾಧ್‌ನಲ್ಲಿ ಅರಬ್‌ ಇಸ್ಲಾಮಿಕ್‌ ಅಮೆರಿಕನ್‌ ಶೃಂಗ ಸಭೆಯಲ್ಲಿ ಮಾತನಾಡುತ್ತಿದ್ದರು.

ಪಾಕಿಸ್ಥಾನವನ್ನು ನೇರವಾಗಿ ಹೆಸರಿಸದೇ, ಎಲ್ಲ ಇಸ್ಲಾಮಿಕ್‌ ದೇಶಗಳು ತಮ್ಮ ನೆಲದಲ್ಲಿ  ಇಸ್ಲಾಮಿಕ್‌ ಉಗ್ರರಿಗೆ ಯಾವುದೇ ರೀತಿಯ ಆಸರೆಯನ್ನು ನೀಡಬಾರದು; ಭಯೋತ್ಪಾದಕರ ಬಗ್ಗೆ ಯಾವುದೇ ತಾರತಮ್ಯ ತೋರದೆ ಎಲ್ಲ ಉಗ್ರರನ್ನು ಸದೆ ಬಡಿಯಬೇಕು ಎಂದು ಟ್ರಂಪ್‌ ಹೇಳಿದರು. 

ಭಾರತವು ಭಯೋತ್ಪಾದನೆಗೆ ಬಲಿಪಶುವಾಗಿರುವ ದೇಶವಾಗಿದೆ; ಅರಬ್‌ ಮತ್ತು ಇಸ್ಲಾಮಿಕ್‌ ನಾಯಕರು ಭಯೋತ್ಪಾದನೆಯನ್ನು ಸೋಲಿಸಲು ತಮ್ಮ ನೆಲದಲ್ಲಿ ಅವುಗಳಿಗೆ ಯಾವುದೇ ನೆಲೆಯನ್ನು ಕಲ್ಪಿಸಕೂಡದು ಮತ್ತು ಭಯೋತ್ಪಾದನೆಯ ವಿರುದ್ಧ ಸಂಘಟಿತರಾಗಿ ಹೋರಾಡಬೇಕು ಎಂದು ಟ್ರಂಪ್‌ ಕರೆ ನೀಡಿದರು. 

ಮುಸ್ಲಿಮರ ವಿರುದ್ಧ ಯಾವುದೇ ಕಟುವಾದ ಮಾತುಗಳನ್ನು ಆಡದಿದ್ದ ಟ್ರಂಪ್‌,  ಇಸ್ಲಾಮಿಕ್‌ ಭಯೋತ್ಪಾದನೆಯನ್ನು ಅರಬ್‌ ಹಾಗೂ ಇಸ್ಲಾಮಿಕ್‌ ನಾಯಕರು ತಮ್ಮ ದೇಶಗಳಿಂದ ಹೊರಗಟ್ಟುವ ಕೆಲಸವನ್ನು ಮುಲಾಜಿಲ್ಲದೆ ಮಾಡಬೇಕು ಎಂದು ಹೇಳಿದರು. ಭಯೋತ್ಪಾದನೆಯನ್ನು ಮಟ್ಟ ಹಾಕುವುದಕ್ಕೆ ಅಮೆರಿಕ ಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದರು. 

ಟಾಪ್ ನ್ಯೂಸ್

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

Brahmavar ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Pakistan; ತಾಪ 52 ಡಿಗ್ರಿ: ಆರ್ಥಿಕ ಸಂಕಷ್ಟದ ನಡುವೆ ಏರಿದ ಬಿಸಿಲು

1-qweqweqw

Everest ಪರ್ವತ ತಪ್ಪಲಲ್ಲಿ ಈಗ ಟ್ರಾಫಿಕ್‌ ಜಾಮ್‌

nawaz sharif

India ಜತೆಗಿನ ಒಪ್ಪಂದ ಉಲ್ಲಂಘನೆ: ನವಾಜ್‌ ಶ‌ರೀಫ್ ತಪ್ಪೊಪ್ಪಿಗೆ

1-eqweeweqwe

LGBT ಅವಹೇಳನ: ಪೋಪ್‌ ಫ್ರ್ಯಾನ್ಸಿಸ್‌ ಕ್ಷಮಾಪಣೆ

17

Road Mishap: ಅಮೆರಿಕದಲ್ಲಿ ರಸ್ತೆ ಅಪಘಾತ; ತೆಲಂಗಾಣ ಮೂಲದ ಯುವತಿ ಸ್ಥಳದಲ್ಲೇ ಸಾವು

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.