ಗ್ರೀನ್‌ ಆ್ಯಪ್‌ ಜತೆ ಪಾಲಿಕೆಯ ಹಸಿರೀಕರಣದ ಹೆಜ್ಜೆ


Team Udayavani, May 22, 2017, 12:42 PM IST

green-app.jpg

ಬೆಂಗಳೂರು: ಸಾರ್ವಜನಿಕರಿಗೆ ಉಚಿತವಾಗಿ ಗಿಡಗಳನ್ನು ಪೂರೈಸಲು ಅನುಕೂಲ ವಾಗುವ “ಗ್ರೀನ್‌ ಆ್ಯಪ್‌’ಗೆ ಬಿಬಿಎಂಪಿ ಭಾನುವಾರ ಚಾಲನೆ ನೀಡಿದೆ. ತಮ್ಮ ಮನೆ ಆವರಣ ಅಥವಾ ಸುತ್ತಲಿನ ಖಾಲಿ ಜಾಗದಲ್ಲಿ ಗಿಡ ಬೆಳೆಸಲು ಮುಂದಾಗುವ ನಾಗರಿಕರು ಈ ಆ್ಯಪ್‌ ಮೂಲಕ ಮಾಹಿತಿ ನೀಡಿದರೆ ಅವರಿಗೆ ಬಿಬಿಎಂಪಿ ಉಚಿತವಾಗಿ ಗಿಡ ಒದಗಿಸಲಿದೆ. ಈ ಮೂಲಕ ಸುಮಾರು 10 ಲಕ್ಷ ಗಿಡಗಳನ್ನು ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ.

ಬಿಬಿಎಂಪಿ ವತಿಯಿಂದ ಕಬ್ಬನ್‌ಪಾರ್ಕ್‌ ನಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯ ಕ್ರಮದಲ್ಲಿ ಚಿತ್ರನಟ ಯಶ್‌ ಗ್ರೀನ್‌ ಆ್ಯಪ್‌ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,ನಗರದಲ್ಲಿ ಹಸಿರು ಮಾಯವಾಗುತ್ತಿದೆ. ಪರಿಸರ ಮಾಲಿನ್ಯ ಹೆಚ್ಚುತ್ತಿದ್ದು, ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮ ತಡೆಗೆ ಗಿಡ-ಮರಗಳನ್ನು ಬೆಳೆಸಲು ಸಾರ್ವಜನಿಕರು ಮುಂದಾಗಬೇಕು ಎಂದು ಸಲಹೆ ನೀಡಿದರು.

ಮೇಯರ್‌ ಜಿ.ಪದ್ಮಾವತಿ ಮಾತನಾಡಿ, ಸಾರ್ವಜನಿಕರು ತಮ್ಮ ಸುತ್ತಮುತ್ತಲ ಖಾಲಿ ಪ್ರದೇಶಗಳಲ್ಲಿ ಗಿಡ-ಮರ ಬೆಳೆಸುವ ಮಾಹಿತಿಯನ್ನು ಆ್ಯಪ್‌ ಮೂಲಕ ನೀಡಿದರೆ ಅವರ ಮನೆ ಬಾಗಿಲಿಗೆ ಸಸಿಗಳನ್ನು ಸರಬರಾಜು ಮಾಡಲಾಗುವುದು. ಅದ ಕ್ಕಾಗಿ ನಗರದ ವಿವಿಧೆಡೆ 16ಕ್ಕೂ ಹೆಚ್ಚು ಪ್ರಭೇದಗಳ ಗಿಡಗಳನ್ನು ಬೆಳೆಸಲಾಗಿದೆ. ಪಾಲಿಕೆ ವ್ಯಾಪ್ತಿಯ 198 ವಾರ್ಡ್‌ಗಳಿಗೆ ಅಗತ್ಯವಾದೆಡೆಗೆ ಸರಬರಾಜು ಮಾಡಲಾಗುವುದು.

ನಾಗರಿಕರು ಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಮಾಲಿನ್ಯ ಮುಕ್ತ ನಗರದ ನಿರ್ಮಾಣಕ್ಕೆ ಕೈಜೋಡಿಸಬೇಕು. ಗ್ರೀನ್‌ ಆ್ಯಪ್‌ ಸಾರ್ವಜನಿಕ ಸ್ನೇಹಿಯಾಗಿದ್ದು, ಪ್ರತಿಯೊಬ್ಬರು ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.  ಪಾಲಿಕೆಯೂ ತನ್ನ ವ್ಯಾಪ್ತಿಯ ಉದ್ಯಾನ ವನ, ಕೆರೆ ಅಚ್ಚುಕಟ್ಟು ಸೇರಿದಂತೆ ಖಾಲಿ ಪ್ರದೇಶಗಳಲ್ಲಿ ಗಿಡ, ಮರಗಳನ್ನು ಬೆಳೆಸಲಿದೆ. ಸಾರ್ವಜನಿಕರು ಕೂಡ ಈ ಯೋಜನೆ ಸಹಕಾರ ನೀಡುವ ಮೂಲಕ ಪುನಃ ಬೆಂಗಳೂರಿಗೆ ಉದ್ಯಾನ ನಗರಿ ಖ್ಯಾತಿಗೆ ಕಾಯಂಗೊಳಿಸಬೇಕು.

ಮಕ್ಕಳು, ಯುವಕರಿಗೆ ಈ ಯೋಜನೆ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌, ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಮಹೇಂದ್ರ ಜೈನ್‌  ಮತ್ತಿತರರು ಹಾಜರಿದ್ದರು.

ಯಾವ್ಯಾವ ಗಿಡಗಳು?
ಹೊಂಗೆ, ಮಹಾಗನಿ, ನೇರಳೆ, ನೆಲ್ಲಿ, ಹೊಳೆದಾಸವಾಳ, ಕಾಡುಬಾದಾಮಿ, ತಪಸಿ, ಬೇವು, ಹೂವರಸಿ, ತಬೂಬಿಯಾ, ಚೆರ್ರಿ, ಬಸವನಪಾದ, ಸಂಪಿಗೆ, ಜಕರಾಂಡ, ಶಬೂಬಿಯಾ ಗೈಕಾನಾ, ಸೀಮಾರೂಬಾ ಸಸಿಗಳು ಬಿಬಿಎಂಪಿಯಲ್ಲಿ ಲಭ್ಯವಿದೆ. ಸಾರ್ವಜನಿಕರು ಅಗತ್ಯ ಸಸಿಗಳನ್ನು ಪಡೆಯಬಹುದು. ಅತ್ಯುತ್ತಮವಾಗಿ ಸಸಿಗಲನ್ನು ಬೆಳೆಸಿ ಪ್ರೋತ್ಸಾಹಿಸುವ ನಾಗರಿಕರಿಗೆ ಮತ್ತು ಸಂಘ, ಸಂಸ್ಥೆಗಳಿಗೆ  ಪಾಲಿಕೆಯಿಂದ ಪ್ರಮಾಣಪತ್ರ ನೀಡಲು ಉದ್ದೇಶಿಸಲಾಗಿದೆ.

ಯಶ್‌ ಪ್ರತಿಷ್ಠಾನದಿಂದ 10 ಲಕ್ಷ 
ಸಿಲಿಕಾನ್‌ ಸಿಟಿಯನ್ನು ಹಸಿರುಗೊಳಿಸಲು ಮುಂದಾಗಿರುವ ಬಿಬಿಎಂಪಿ ಕಾರ್ಯಕ್ಕೆ ಯಶ್‌ ಪ್ರತಿಷ್ಠಾನ ಕೈ ಜೋಡಿಸಲಿದೆ ಎಂದು ಚಿತ್ರನಟ ಯಶ್‌ ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ನಗರವನ್ನು ಹಸಿರುಮಯಗೊಳಿಸಲು ಶ್ರಮಿಸಲಿರುವ ಪಾಲಿಕೆ ಕ್ರಮ ಸ್ವಾಗತಾರ್ಹ. ಈ ಕಾರ್ಯದಲ್ಲಿ ನಾನು ಕೂಡ ಕೈ ಜೋಡಿಸುತ್ತೇನೆ ಎಂದರು. ಅಲ್ಲದೆ, “ಗ್ರೀನ್‌ ಆ್ಯಪ್‌’ ಮೂಲಕ ಬಿಬಿಎಂಪಿ ಸಾರ್ವಜನಿಕರಿಗೆ ಉಚಿತವಾಗಿ 10 ಲಕ್ಷ ಗಿಡಗಳನ್ನು ಹಂಚಿಕೆ ಮಾಡಲು ಪ್ರತಿಷ್ಠಾನದಿಂದ ಗಿಡ ಬೆಳೆಸುವ ಕಾರ್ಯಕ್ಕೆ 10 ಲಕ್ಷ ರೂ. ದೇಣಿಗೆ ನೀಡುವುದಾಗಿ ಘೋಷಿಸಿದರು. 

ಬಿಡಿಎ ಮತ್ತು ಜಿಲ್ಲಾಧಿಕಾರಿಯವರು ಸರ್ಕಾರಿ ಸ್ಥಳಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದು, ಈ ವರ್ಷ ನಗರದಲ್ಲಿ 15 ಲಕ್ಷ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ. ಈ ಕಾರ್ಯದಲ್ಲಿ ಸಂಘ, ಸಂಸ್ಥೆಗಳು ಕೂಡ ಪಾಲ್ಗೊಳ್ಳಲಿವೆ. 
-ಕೆ.ಜೆ.ಜಾರ್ಜ್‌, ಬೆಂಗಳೂರು ನಗರಾಭಿವೃದ್ಧಿ ಸಚಿವ

ಟಾಪ್ ನ್ಯೂಸ್

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.