ತಂಗಾಳಿಯಾಗಿ ಬಂದವಳು ಬಿರುಗಾಳಿಯಾಗಿ ಹೋದೆಯೇಕೆ?


Team Udayavani, May 23, 2017, 10:43 AM IST

tangali.jpg

ಹಾಯ್‌ ಮೈ ಡಿಯರ್‌ ಸ್ವೀಟ್‌ ಹಾರ್ಟ್‌…
ನಿನಗೆ ನಾನೀಗ ಬಿಲ್‌ಕುಲ್ಲಾಗಿ ಬೇಡವಾಗಿರೋನು. ಕಣ್ಮುಚ್ಚಿ ಕಣ್ಣಬಿಟ್ಟರೂ ನೀನೇ… ಕಣ್‌ಬಿಟ್ಟು ಕಣ್‌ ಮುಚ್ಚಿದರೂ ನೀನೇ… ನೆನಪಿನ ಬುತ್ತಿಯಲ್ಲಿ ಬರೀ ನಿನದೇ ನೆನಪು ಕಣೆ. ಸಂತಸ, ಸಂಭ್ರಮ, ಸಡಗರ ಎಲ್ಲವೂ ಒಟ್ಟೊಟ್ಟಿಗೆ ತುಂಬಿ ತುಳುಕಾಡುತ್ತಿದ್ದ ನನ್ನ ಹೃದಯದ ಕಪಾಟಿನಲ್ಲಿ ನೀ ನನ್ನ ತೊರೆದಾಗಿನಿಂದ ಉಳಿದಿರೋದು ಮೌನವೊಂದೇ. ನೀನಂದು ಹಚ್ಚಿದ ಹಣತೆಯೂ ಆರಿದೆ. ನೀನಂದು ಗಟ್ಟಿಯಾಗಿ ತಬ್ಬಿಕೊಂಡು ನೀಡಿದ ಸಿಹಿಮುತ್ತು ಇಂದೇತಕೋ ಕಹಿಯಾಗುತ್ತಿದೆ. ನೀನಂದು ನನ್ನ ಕೈ ಮೇಲೆ ಕೈ ಇಟ್ಟು ಮಾಡಿದ ಆಣೆ ಪ್ರಮಾಣಗಳು ನೆನೆಗುದಿಗೆ ಬಿದ್ದು ಉಪಯೋಗಕ್ಕೆ ಬಾರದಾಗಿವೆ.

ನನ್ನ ಪತ್ರವಾಗಿರೋ ಪ್ರೀತಿಗೆ ನೀನು ಮುನ್ನುಡಿಯೂ ಆಗಲಿಲ್ಲ… ಬೆನ್ನುಡಿಯೂ ಆಗಲಿಲ್ಲ… ಬದುಕು ಕಟ್ಟಿಕೊಳ್ಳುವ ಆತುರದಲ್ಲಿ ನೀನು ಎಲ್ಲವನ್ನೂ ಮರೆತುಹೋದೆ. ಕಡಲ ತೀರದಲ್ಲಿ ಕುಳಿತು ಅಲೆಗಳನ್ನು ಲೆಕ್ಕಿಸುವ ಖಾಯಂ ಕೆಲಸವನ್ನು ಕೇಳದೇ ಹೋದರೂ ಕೊಟ್ಟು ಹೋದೆ. ರಾತ್ರಿಯ ಬಾನಂಗಳದಲ್ಲಿ ಫ‌ಳಫ‌ಳನೆ ಹೊಳೆಯುವ ನಕ್ಷತ್ರಗಳ ತಿಳಿ ಬೆಳಕಿನಲ್ಲಿ ಕಣ್ಣೀರ ಹನಿ ಹರಿಸುವ ಭಾವುಕ ಲೋಕಕ್ಕೆ ದಬ್ಬಿ ಹೋದೆ. ಇಷ್ಟು ದಿನ ಜೊತೆಗಿದ್ದು ಈಗ ಕೊಂಚವೂ ಕನಿಕರ ತೋರದೇ ಕಗ್ಗತ್ತಲಲ್ಲಿ ನನ್ನನ್ನು ಒಂಟಿಯಾಗಿ ಬಿಟ್ಟು ದೂರ ಹೋದೆ.

ನನ್ನ ಬದುಕಿನಲ್ಲಿ ನೀನು ಸದ್ದಿಲ್ಲದೆ ಸರಿದು ಹೋಗಿರುವೆ. ಬರಿದಾಗಿದ್ದ ಬಾಳಲ್ಲಿ ತಂಗಾಳಿಯಂತೆ ಬಂದು ಬಿರುಗಾಳಿಯಾಗಿ ಹೋದೆ. ನೀನೇತಕೆ ನನ್ನನ್ನು ತೊರೆದು ದೂರ ಸರಿದೆ ಎನ್ನುವ ಘೋರ ಪ್ರಶ್ನೆಯೊಂದಕ್ಕೆ ಉತ್ತರವೆಂದಿಗೂ ಸಿಗಲಾರದೆಂದು ಈ ಹುಚ್ಚು ಮನಸ್ಸಿಗೆ ಈಗ ಮನವರಿಕೆಯಾಗಿದೆ. ನಿನ್ನನ್ನು ಪ್ರೀತಿಸುವ ಯೋಗ್ಯತೆಯೂ ನನಗಿಲ್ಲ. ನಿನ್ನೊಂದಿಗೆ ಪ್ರೀತಿ ಹಂಚಿಕೊಳ್ಳುವ ಪಾಲುದಾರಿಕೆಯನ್ನು ಕಳೆದುಕೊಂಡಿರುವೆ. 

ಆದರೆ ನಿನ್ನನ್ನು ಕಣ್ತುಂಬ ನೋಡಿ…. ಮನಸ್‌ ತುಂಬ ತುಂಬಿಕೊಳ್ಳಬೇಕೆಂಬ ಬಯಕೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಎಲ್ಲೇ ಇರು…. ಹೇಗೇ ಇರು… ಎಂದೆಂದಿಗೂ ನಗುನಗುತ್ತಾ ನೂರು ಕಾಲ ಸುಖವಾಗಿರೆಂದು ತುಂಬು ಹೃದಯದಿಂದ ಹಾರೈಸುತ್ತೇನೆ. ನಿನಗೆ ನಾನು ಬೇಡವಾಗಿರೋನು… ಇನ್ನುಮುಂದೆ ಕನಸು ಮನಸಲ್ಲೂ ನನ್ನನ್ನು ನೆನಪಿಸಿಕೊಳ್ಳಬೇಡ.
                                                                                      ಇಂತಿ ನಿನ್ನ ಸುಖಾಭಿಲಾಷಿ

– ರಂಗನಾಥ ಎಸ್‌. ಗುಡಿಮನಿ, ಬಾಗಲಕೋಟ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.