ಹಾಸನ : ವಿದ್ಯುತ್ ತಂತಿ ತಗುಲಿ ಮೂವರು ಬೈಕ್ ಸವಾರರ ದಾರುಣ ಸಾವು
Team Udayavani, May 24, 2017, 10:16 AM IST
ಹಾಸನ: ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಗಾಳಿ ,ಗುಡುಗು ಮಿಂಚು ಸಹಿತ ಭರ್ಜರಿ ಮಳೆ ಸುರಿದ್ದಿದ್ದು ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಗಾಳಿ ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮೂವರು ಬೈಕ್ ಸವಾರರು ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಶಂಕರನ ಹಳ್ಳಿ ಎಂಬಲ್ಲಿ ನಡೆದಿದೆ.
ಒಂದೇ ಬೈಕ್ನಲ್ಲಿ ತೆರಳುತ್ತಿದ್ದ ಗೋಪನಹಳ್ಳಿ ಗ್ರಾಮದ ರವಿ(56), ಪ್ರಸಾದ್(23), ಕಿಟ್ಟಿ(59) ಅವರಿಗೆ ರಸ್ತೆಯಲ್ಲಿ ನೇತಾಡುತ್ತಿದ್ದ ಹೈಟೆನÒನ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಶವಗಳನ್ನು ಸ್ಥಳದಲ್ಲೇ ಇಟ್ಟು ಸ್ಥಳೀಯರು ಸೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದು ಅಧಿಕಾರಿಗಳು ಸ್ಥಳಕ್ಕಾಮಿಸುವವರೆಗೆ ಶವಗಳನ್ನು ಸ್ಥಳದಿಂದ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಹಾಸನ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.