ವಿಶ್ವ ಯೋಗ ದಿನಕ್ಕೆ ಒಂದು ತಿಂಗಳ ಉಚಿತ ಯೋಗ ತರಬೇತಿ


Team Udayavani, May 28, 2017, 3:51 PM IST

yoga.jpg

ಬೆಳ್ತಂಗಡಿ: ಕೇಂದ್ರ ಸರಕಾರ ಆಯುಷ್‌ ಮಂತ್ರಾಲಯ ಮೇ 21ರಿಂದ ಜೂ. 21ರ ವರೆಗೆ ಉಚಿತ ಯೋಗ ಶಿಬಿರ ನಡೆಸಿ ಸಾಮಾನ್ಯ ಜನರು ಹಾಗೂ ಯುವ ಜನಾಂಗದಲ್ಲಿ ಇದರ ಅರಿವು ಮೂಡಿಸಲಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಶಿಬಿರ ನಡೆಸುವ ಜವಾಬ್ದಾರಿ ಯನ್ನು ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿಗೆ ನೀಡಿದೆ.

ಅದಕ್ಕೆ ಪೂರ್ವಭಾವಿಯಾಗಿ ಶಿಬಿರ ನಡೆಸಿ ಜೂ. 21ಕ್ಕೆ ಸ್ಥಳೀಯ ಸಂಸದರು, ಶಾಸಕರು, ಉಸ್ತುವಾರಿ ಮಂತ್ರಿ ಜಿಲ್ಲಾಧಿಕಾರಿಗಳೆಲ್ಲರನ್ನೂ ಒಳಗೊಂಡಂತೆ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 7ರಿಂದ7.45ರ ವರೆಗೆ ಯೋಗ ಪ್ರಾತ್ಯಕ್ಷಿತೆಯನ್ನು ಸಾಮೂಹಿಕವಾಗಿ ಆಚರಿಸಲಾಗುತ್ತದೆ.

ಡಾ| ಡಿ. ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ವಿಶ್ವಯೋಗ ದಿನಾಚರಣೆ ಪ್ರಯುಕ್ತ ಕೇಂದ್ರ ಸರಕಾರದ ಸಹಯೋಗದೊಂದಿಗೆ ರಾಜ್ಯದ 5 ಜಿಲ್ಲೆಗಳಲ್ಲಿ ಒಂದು ತಿಂಗಳ ಉಚಿತ ಯೋಗ ತರಬೇತಿ, ಜೂ. 21ರಂದು ವಿಶ್ವಯೋಗ ದಿನಾಚರಣೆ. ಉಜಿರೆಯ ಶ್ರೀ ಧ. ಮ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯ ಆಶ್ರಯದಲ್ಲಿ ಕೇಂದ್ರ ಆಯುಷ್‌ ಮಂತ್ರಾಲಯದ ನಿರ್ದೇಶನದಂತೆ ಹಾಗೂ ರಾಜ್ಯದ ಸಲಹೆ ಮೇರೆಗೆ ರಾಜ್ಯದ 5 ಜಿಲ್ಲೆಗಳಾದ ಉಡುಪಿ, ದಕ್ಷಿಣಕನ್ನಡ, ಮೈಸೂರು, ದಾವಣಗೆರೆ, ಬಾಗಲಕೋಟೆ ವ್ಯಾಪ್ತಿಯಲ್ಲಿ ತಲಾ 10 ಕೇಂದ್ರಗಳಲ್ಲಿ ಒಂದು ತಿಂಗಳ ಕಾಲ ಸಾವಿರಾರು ಜನರಿಗೆ ಉಚಿತ ಯೋಗ ಶಿಬಿರವನ್ನು ಕಾಲೇಜಿನ ವೈದ್ಯರ ತಂಡ ಪ್ರಾರಂಭಿಸಿದೆ. ಜೂ. 21ರಂದು ಬೃಹತ್‌ ಯೋಗ ದಿನಾಚರಣೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ.

ರಾಜ್ಯದ 20 ವಿಶ್ವವಿದ್ಯಾನಿಲಯಗಳ ರಾಷ್ಟ್ರೀಯ ಸೇವಾ ಯೋಜನೆಯ ಆಯ್ದ 500 ಪ್ರತಿನಿಧಿಗಳಿಗೆ ಹಾಗೂ ಯೋಜನಾಧಿ ಕಾರಿಗಳಿಗೆ ರಾಜೀವ ಗಾಂಧಿ ಆರೋಗ್ಯ ವಿ.ವಿ. ಸಂಯೋಜನೆಯಲ್ಲಿ 3 ದಿನಗಳ ಯೋಗ ಮತ್ತು ಜೀವನ ಶೈಲಿಯ ಕಾರ್ಯಾಗಾರ ಹಾಗೂ ವಿಶ್ವಯೋಗ ದಿನಾಚರಣೆ ನಡೆಯಲಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಾಲೆಗಳಲ್ಲಿ ಸರಕಾರಿ ಸಹಯೋಗದೊಂದಿಗೆ ಶಾಂತಿವನ ಟ್ರಸ್ಟ್‌ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಮೂಲಕ ಯೋಗ ತರಬೇತಿ ಹಾಗೂ ವಿಶ್ವಯೋಗ ದಿನಾಚರಣೆ ನಡೆಯಲಿದೆ.

ಶ್ರೀ ಕ್ಷೇತ್ರಧರ್ಮಸ್ಥಳದಲ್ಲಿ 1 ಸಾವಿರ ಶಿಬಿರಾರ್ಥಿಗಳಿಂದ ವಿಶ್ವ ಯೋಗ ದಿನಾಚರಣೆ ನಡೆಯಲಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ| ಪ್ರಶಾಂತ್‌ ಶೆಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.