ದೇಹ ನಶ್ವರ; ದೇವರು ಶಾಶ್ವತ: ಕನ್ಯಾಡಿ ಶ್ರೀ


Team Udayavani, May 31, 2017, 2:43 PM IST

3005btlph1.jpg

ಬಂಟ್ವಾಳ: ದೇಹ ನಶ್ವರ; ದೇವರು ಶಾಶ್ವತ. ಮಾನವ ದೇಹ ಕೆಲವು ವರ್ಷ, ದೇವಾಲಯ ಹಲವು ವರ್ಷ ಇರುತ್ತದೆ. ಭೂಮಿಯಲ್ಲಿ ನಮ್ಮದು ಎಂಬುದು ಕೇವಲ ಭ್ರಮೆ. ಕಣ್ಣಿಗೆ ಕಾಣುವ ಎಲ್ಲವೂ ಯಾವುದೇ ಕ್ಷಣದಲ್ಲಿ ಇಲ್ಲವಾಗಬಹುದು. ದೇವರ ಇಚ್ಛೆಯಂತೆ ಎಲ್ಲವೂ ನಡೆಯುತ್ತವೆ ಎಂದು ಧರ್ಮಸ್ಥಳದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಅವರು ಪಾಣೆಮಂಗಳೂರು ನರಿಕೊಂಬು ನೂತನ ಶಿಲಾಮಯ ಶ್ರೀ ಭಯಂಕೇಶ್ವರ ದೇವಸ್ಥಾನದ ಬ್ರಹ್ಮಕಲಶದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ನಾವು ಇಂದ್ರಿಯ ನಿಗ್ರಹದ ಮೂಲಕ ಭಗವಂತನ ಅರಿವು ಪಡೆಯಬಹುದು. ಕುಂಡಲಿನಿ ಶಕ್ತಿ ಪಡೆ ಯುವ ಮೂಲಕ ಅತೀಂದ್ರಿಯ ಜ್ಞಾನ ಪಡೆಯಬಹುದು. ಅದಕ್ಕೆ ಬೇಕಾಗಿರುವುದು ನನ್ನಿಂದ ಏನಿಲ್ಲ ನಿನ್ನಿಂದಲೇ ಎಲ್ಲ ಪ್ರೇರಣೆ ಎಂಬ ಭಾವನೆ ಮಾತ್ರ ಎಂದು ಅವರು ಹೇಳಿದರು.

ಭಗವಂತನ ಇಚ್ಛೆ
ಸಚಿವ ಬಿ. ರಮಾನಾಥ ರೈ ಮಾತ ನಾಡಿ, ಭಗವಂತ ನಮಗೆಲ್ಲ ಪ್ರೀತಿಸುವ ಮನಸ್ಸು ಕೊಡುವಂತಾಗಲಿ ಎಂದರು. ನಾನು ಜನಪ್ರತಿನಿಧಿಯಾಗಿ ಇಲ್ಲಿನ ತಡೆಗೋಡೆ ನಿರ್ಮಿಸಲು 50 ಲಕ್ಷ ರೂ. ಅನುದಾನ ಒದಗಿಸಿಸದ್ದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಸಂಸದ ನಳಿನ್‌ ಕುಮಾರ್‌ ಕಟೀಲು ಮಾತ ನಾಡಿ, ದೇವಾಲಯ ಭಗವಂತನ ಅರಿವು ಉಂಟು ಮಾಡುವ ಕ್ಷೇತ್ರ. ನಾವು ಭಕ್ತಿಯ ಅನುಭೂತಿ ಪಡೆದಾಗ ಎಲ್ಲ ಅಪೇಕ್ಷೆಗಳಿಂದ ಮುಕ್ತರಾಗುತ್ತೇವೆ ಎಂದರು.

ಸಂಘಟಕರ ಸಾಧನೆ
ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ ಮಾತನಾಡಿ, ತಾನು ವಿಟ್ಲಶಾಸಕನಾಗಿದ್ದಾಗ ದೇಗುಲದ ಜಮೀನಿಗೆ ಸರಕಾರದಿಂದ 20 ಲಕ್ಷ ರೂ. ತಡೆಗೋಡೆ ಅನುದಾನ ನೀಡಿದ್ದೆ. ಸುದೀರ್ಘ‌ ಸಮಯದಿಂದ ದೇವಸ್ಥಾನದ ಕೆಲಸ ನಡೆದು ಇಂದು ಬ್ರಹ್ಮಕಲ ಶೋತ್ಸವ ಮಟ್ಟಕ್ಕೆ ಬಂದಿರುವುದು ಸಂಘಟಕರ ಸಾಧನೆಯಿಂದ ಎಂದರು.

ಸಮ್ಮಾನ
ವಾಸ್ತುಶಿಲ್ಪಿ ಪ್ರಸಾದ್‌ ಮುನಿಯಂಗಳ, ದಾರುಶಿಲ್ಪಿ ನಾರಾಯಣ ಆಚಾರ್ಯ ಕಲ್ಲಮುಂಡ್ಕೂರು ಅವರನ್ನು ಸಮ್ಮಾ ನಿಸಲಾಯಿತು.
ಮೂಡಬಿದಿರೆ ಶಾಸಕ ಅಭಯಚಂದ್ರ ಜೈನ್‌ ಶುಭ ಹಾರೈಸಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ. ಗಣಪತಿ ಸೋಮಯಾಜಿ, ಕೋಟ ಗುರುನರಸಿಂಹ ದೇವಸ್ಥಾನದ ಧರ್ಮದರ್ಶಿ ಯಜ್ಞನಾರಾಯಣ ಹೇರಳೆ ಉಪಸ್ಥಿತ ರಿದ್ದರು.ರಘುನಾಥ ಸೋಮಯಾಜಿ ಸ್ವಾಗತಿಸಿ, ವೇ| ಮೂ| ಪಿ. ಕೃಷ್ಣರಾಜ ಭಟ್‌ ವಂದಿಸಿದರು. ಶಿಕ್ಷಕ ಬಿ. ರಾಮಚಂದ್ರ ರಾವ್‌ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.