ನನ್ನ ಸಿನಿಮಾ ಮಾಡುವ ಅವಶ್ಯಕತೆ ಇಲ್ಲ,ಚುನಾವಣೆಯತ್ತ ಗಮನ ಕೊಡಿ
Team Udayavani, Jun 2, 2017, 2:27 PM IST
ಕಲಬುರಗಿ : ನನ್ನ ಜೀವನಾಧಾರಿತ ಸಿನಿಮಾ ಮಾಡುವ ಅವಶ್ಯಕತೆ ಇಲ್ಲ. ಯಾರಿಗೂ ನಾನು ಈ ಬಗ್ಗೆ ಒಪ್ಪಿಗೆ ನೀಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ,ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ’ನನ್ನ ಸಿನಿಮಾ ಮಾಡಲು ಅನೇಕರು ಒತ್ತಾಯ ಮಾದಿದ್ದಾರೆ. ಆದರೆ ನಾನು ಯಾರಿಗೂ ಒಪ್ಪಿಗೆ ನೀಡಿಲ್ಲ. ಇದು ಚುನಾವಣೆಯ ಸಮಯ ಎಲ್ಲರೂ ಚುನಾವಣೆಯತ್ತ ಗಮನ ಹರಿಸೋಣ’ ಎಂದರು.
ಜೆಡಿಎಸ್ ನಾಯಕ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಜೀವನಾಧಾರಿತ ಸಿನಿಮಾ ‘ಭೂಮಿಪುತ್ರ’ ಚಿತ್ರ ಲಾಂಚ್ ಆದ ಬೆನ್ನಲ್ಲೇ ಬಿಎಸ್ವೈ ಕುರಿತಾಗಿನ ಚಿತ್ರದ ಕುರಿತಾಗಿ ಮಾತುಕತೆಗಳು ನಡೆದಿದ್ದವು.ರುದ್ರೇಶ್, ಜಿ.ಮರಿಸ್ವಾಮಿ ನಿರ್ಮಾಣದಲ್ಲಿ ಎಂ.ಎಸ್. ರಮೇಶ್ ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರು ಯಡಿಯೂರಪ್ಪ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳುವ ಬಗ್ಗೆ ಚರ್ಚೆ ನಡೆದಿತ್ತು. ಇದೀಗ ಯಡಿಯೂರಪ್ಪ ಅವರು ಅನುಮತಿ ನಿರಾಕರಿಸಿರುವ ಹಿನ್ನಲೆಯಲ್ಲಿ ಚಿತ್ರ ಮುಂದುವರಿಯುವ ಸಾಧ್ಯತೆಗಳು ವಿರಳ.
‘ಭೂಮಿಪುತ್ರ’ ಚಿತ್ರದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತಾವಧಿಯ 20 ತಿಂಗಳ ಚಿತ್ರಣವಿರಲಿದ್ದು, ನಟ ಅರ್ಜುನ್ ಸರ್ಜಾ,ಕುಮಾರಸ್ವಾಮಿ ಅವರ ಪಾತ್ರ ನಿರ್ವಹಿಸುತ್ತಿದ್ದಾರೆ. ಎಸ್.ನಾರಾಯಣ್ ನಿರ್ದೇಶನ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ