ಸದೃಢ ಸಮಾಜಕ್ಕೆ ಸರ್ಕಾರಿ ಶಾಲೆ ಕೊಡುಗೆ ಅಪಾರ
Team Udayavani, Jun 5, 2017, 3:54 PM IST
ಕಲಘಟಗಿ: ಸಮಾಜದಲ್ಲಿ ಸಾಮಾಜಿಕ ನ್ಯಾಯದೊಂದಿಗೆ ಬದುಕಬೇಕೆಂಬ ಮನೋಭಾವನೆ ಬೀಜವನ್ನು ಮಕ್ಕಳಲ್ಲಿ ಬಿತ್ತಿ ಸದೃಢ ಸಮಾಜ ನಿರ್ಮಿಸುವಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳ ಕೊಡುಗೆ ಅಪಾರವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೆ. ಮರಿಗೌಡರ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಲ್ಲಿ ಜಾತಿ, ಧರ್ಮ, ಬಡವ-ಬಲ್ಲಿದ, ಮೇಲು-ಕೀಳು ಎಂಬ ಭೇದಭಾವವಿಲ್ಲದೇ ಒಂದೇ ಕುಟುಂಬದ ಸದಸ್ಯರಂತೆ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುತ್ತಾರೆ.
ತಾಲೂಕಿನ ಯಾವುದೇ ಮಗು ಶಿಕ್ಷಣ ವಂಚಿತವಾಗದಂತೆ ಕ್ರಮ ಜರುಗಿಸಲು ಪಾಲಕರು, ಚುನಾಯಿತ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ವಿನಂತಿಸಿದರು. ತಾಲೂಕಿನಾದ್ಯಂತ ಎಲ್ಲ ಶಾಲೆಗಳು ಈಗಾಗಲೇ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಪಠ್ಯ-ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗಿದೆ.
ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ತಾಲೂಕಿನ ಹಿರಿಮೆ ಹೆಚ್ಚಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಶಿಕ್ಷಕ ವೃಂದ ಇನ್ನೂ ಹೆಚ್ಚಿನ ಪರಿಶ್ರಮ ವಹಿಸಬೇಕಿದೆ. ಎಲ್ಲ ಶಾಲೆಗಳಲ್ಲಿ ಪ್ರತಿಶತ ನೂರರಷ್ಟು ಫಲಿತಾಂಶ ನೀಡಲು ಪ್ರಯತ್ನಿಸಬೇಕು ಎಂದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ, ಇಂಗ್ಲಿಷ್ ಹಾಗೂ ಉರ್ದು ಮಾಧ್ಯಮಗಳಲ್ಲಿ ತಾಲೂಕಿಗೆ ಅತಿ ಹೆಚ್ಚು ಅಂಕಗಳನ್ನು ಪಡೆದು ಪ್ರಥಮ ಮೂರು ಸ್ಥಾನ ಗಳಿಸಿದ 12 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಶಾಲಾ ಪ್ರಾರಂಭೋತ್ಸವದ ಅಕ್ಷರ ಪಲ್ಲಕ್ಕಿ ಮೆರವಣಿಗೆಗೆ ತಾಪಂ ಉಪಾಧ್ಯಕ್ಷ ಚಂದ್ರಗೌಡ ಪಾಟೀಲ ಹಾಗೂ ಪಪಂ ಅಧ್ಯಕ್ಷ ಬೂದಪ್ಪ ಹುರಕಡ್ಲಿ ಚಾಲನೆ ನೀಡಿದರು. ಅಕ್ಷರ ಪಲ್ಲಕ್ಕಿ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ರಾಜು ವಾಲಿಕಾರ ಕಾರ್ಯಕ್ರಮ ಉದ್ಘಾಟಿಸಿದರು. ಮಹಾವೀರ ಹಂಚಿನಾಳ, ಸಿ.ಸಿ.ಅಳಗೋಡಿ, ಎಸ್.ಎಂ. ಮಕ್ಕಣ್ಣವರ, ಐ.ವಿ. ಜವಳಿ, ಎಸ್ .ಎ. ಮಣಕೂರ, ಕೆ.ವೈ. ಗಂಜಿಗಟ್ಟಿ, ಜೆ.ಎಸ್. ಪಾಟೀಲ, ಶ್ರೀಧರ ಪಾಟೀಲಕುಲಕರ್ಣಿ, ಶಶಿಕಲಾ ರಾಠೊಡ, ಎಂ.ಪಿ. ದೊಡ್ಡಮನಿ, ಎಂ.ವೈ. ಅಂಚಟಗೇರಿ, ಎಲ್.ಸಿ. ಹೊಸಮನಿ, ಎಸ್.ಎ. ಚಿಕ್ಕನರ್ತಿ, ವಿಜಯಕುಮಾರ ಕುಲಕರ್ಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ