ಸ್ಲೊವಾಕಿಯಾದಲ್ಲಿ ಚಿನ್ನ, ಕಂಚು ಗೆದ್ದ ಕುಂದಾಪುರದ ಸಮರ್ಥ್


Team Udayavani, Jun 7, 2017, 1:30 PM IST

samarth.jpg

ಉಡುಪಿ: ವಿಭಿನ್ನ ಸಾಮರ್ಥ್ಯದ ಚೆಸ್‌ ಪಟು, ಕುಂದಾಪುರದ ಬಸೂÅರು ಮೂಲದ ಸಮರ್ಥ್ ಜೆ. ರಾವ್‌ ಸ್ಲೊವಾಕಿಯಾದಲ್ಲಿ ನಡೆದ ವಿಶ್ವ ಮಟ್ಟದ ದೈಹಿಕ ಅಸಮರ್ಥರ ಟೂರ್ನಿಯ ಜೂನಿಯರ್‌ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಮುಕ್ತ ಚೆಸ್‌ನ ಸಾಮಾನ್ಯ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದುಕೊಳ್ಳುವ ಮೂಲಕ ಅಂಗವೈಕಲ್ಯವನ್ನು ಮೆಟ್ಟಿ ನಿಂತು ಮತ್ತೂಮ್ಮೆ ದಿಗ್ವಿಜಯ ಸಾಧಿಸಿದ್ದಾರೆ.

ಮೇ 27 ರಿಂದ ಜೂ. 5ರ ವರೆಗೆ ಸ್ಲೊವಾ ಕಿಯಾದಲ್ಲಿ ನಡೆದ ವಿಶ್ವಮಟ್ಟದ ಟೂರ್ನಿ ಯಲ್ಲಿ ಸಮರ್ಥ್ ಎರಡು ಪ್ರಶಸ್ತಿ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ವೈಯಕ್ತಿಕ 131 ಅಂಕಗಳನ್ನು ತನ್ನ ಬುಟ್ಟಿ ಹಾಕಿಕೊಂಡಿದ್ದಾರೆ. ಈ ಹಿಂದೆಯೂ 2015ರಲ್ಲಿ  ಸ್ಲೊವಾಕಿಯಾದಲ್ಲಿ ನಡೆದ ವಿಶ್ವಮಟ್ಟದ ದೈಹಿಕ ಅಸಮರ್ಥರ ಟೂರ್ನಿಯಲ್ಲಿ ಕಂಚಿನ ಪದಕ, ಕಳೆದ ವರ್ಷ ಸರ್ಬಿಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಅಸಮರ್ಥರ ಚೆಸ್‌ ಕೂಟದಲ್ಲಿ ¸ಕಂಚಿನ ಪದಕ ಗೆದ್ದಿದ್ದ ಅವರು ಈ ಬಾರಿ ಮತ್ತೆ ಪದಕ ಗೆದ್ದು ಹ್ಯಾಟ್ರಿಕ್‌ ಸಾಧಿಸಿದರು.

ಈ ಟೂರ್ನಿಯಲ್ಲಿ ಒಟ್ಟು 9 ಸುತ್ತು ಗಳಿದ್ದು, ಸಮರ್ಥ್ 2 ಜಯ, 2 ಡ್ರಾ , 3 ಸೋಲಿನೊಂದಿಗೆ ಒಟ್ಟು 4 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆಯುವಲ್ಲಿ ಸಫ‌ಲರಾಗಿದ್ದಾರೆ. ಕೊನೆಯ ದಿನದವರೆಗೂ ಅಗ್ರಸ್ಥಾನದಲ್ಲಿದ್ದ ಸಮರ್ಥ್ ಕೊನೆಯ 2 ಪಂದ್ಯ ಸೋಲುವುದರೊಂದಿಗೆ ಮತ್ತೂಂದು ಚಿನ್ನದಿಂದ ವಂಚಿತರಾದರು.

ಹುಟ್ಟಿನಿಂದಲೇ ಸೆರೆಬ್ರಲ್‌ ಪಾಲ್ಸಿ ಕಾಯಿಲೆಯ ಸಮರ್ಥ್ ಕೈಗಳಿಂದ ಚೆಸ್‌ ಕಾಯಿ ನಡೆಸಲು, ಕಾಲುಗಳಿಂದ ಸರಿಯಾಗಿ ಕುಳಿತು ಕೊಳ್ಳಲು ಆಗದಿದ್ದರೂ, ಅದೊಂದು ಸಮಸ್ಯೆ ಅಲ್ಲ ಎನ್ನುವಂತೆ ಚೆಸ್‌ನಲ್ಲಿ ಅಸಾಧಾರಣ ಸಾಧನೆ ಮಾಡಿದ್ದಾರೆ. ಈಗಲೂ ಒಂದು ಹೆಜ್ಜೆ ನಡೆಯಲೂ ಆಗದ ಸಮರ್ಥ್ನನ್ನು ತಂದೆ- ತಾಯಿಯೇ ಎತ್ತಿಕೊಂಡು ಓಡಾಡುವ ಮೂಲಕ ನೆರವಾಗುತ್ತಿದ್ದಾರೆ. 

ಬಸೂÅರಿನ ಸಾಧಕ
ಜಗದೀಶ್‌ ರಾವ್‌-ವಿನುತಾ ದಂಪತಿ ಪುತ್ರನಾಗಿರುವ ಸಮರ್ಥ್ ಹುಟ್ಟಿದ್ದು ಕುಂದಾಪುರ ತಾಲೂಕಿನ ಬಸೂÅರಿನಲ್ಲಿ. ತಂದೆ ಜಗದೀಶ್‌ ಹೊನ್ನಾವರದಲ್ಲಿ  ಸಿಂಡಿಕೇಟ್‌ ಬ್ಯಾಂಕ್‌ ಉದ್ಯೋಗಿಯಾಗಿರುವುದರಿಂದ ಹೊನ್ನಾವರದ ಎಸ್‌ಡಿಎಂ ಪ.ಪೂ. ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ತಾಯಿ ವಿನುತಾ ಕಾಲೇಜು ಉಪನ್ಯಾಸಕಿ. ತಂಗಿ ಸಾನ್ವಿ ರಾವ್‌ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ.

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.