ಹೈನುಗಾರಿಕೆ, ಕೃಷಿ  ಮುಂಡ್ಕೂರು ಲಕ್ಷ್ಮೀನಾರಾಯಣ ಕಿಣಿ ಸಾಧನೆ 


Team Udayavani, Jun 7, 2017, 4:03 PM IST

2belmane5.jpg

ಬೆಳ್ಮಣ್‌: ಹೈನುಗಾರಿಕೆಯನ್ನು ತನ್ನ ಜೀವಾಳವನ್ನಾಗಿಸಿ ಜತೆಯಲ್ಲಿ  ವಿವಿಧ ತರಕಾರಿ ಬೆಳೆ, 35 ಎಕರೆ ಜಾಗದಲ್ಲಿ ರಬ್ಬರ್‌ ಕೃಷಿ ಹೀಗೆ ಹಲವು ವಿಧದ ಮಿಶ್ರ ಕೃಷಿಗಳನ್ನು ಮಾಡುವುದರ ಮೂಲಕ ಗ್ರಾಮೀಣ ಭಾಗದ ಕೃಷಿಕರಾದ ಲಕ್ಷ್ಮೀನಾರಾಯಣ ಕಿಣಿಯರು  ಜೀವನದಲ್ಲಿ ಭಾರೀ ಯಶಸ್ಸು ಕಂಡಿದ್ದಾರೆ.

ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ದಡ್ಡುವಿನ ಪ್ರಗತಿಪರ  ಕೃಷಿಕ ಲಕ್ಷ್ಮೀನಾರಾಯಣ ಕಿಣಿಯವರ ಕೃಷಿ ಬದುಕಿನ ಯಶೋಗಾಥೆ ಇತರರಿಗೆ ಮಾದರಿಯಾಗಿದೆ. ಮುಂಡ್ಕೂರು ದಡ್ಡು ಪ್ರದೇಶದಲ್ಲಿ ಸುಮಾರು 35 ಎಕರೆ ಪ್ರದೇಶ  ಹಚ್ಚ ಹಸಿರಾಗಿದ್ದು ಪರಿಸರ ಪ್ರೇಮಿಗಳನ್ನು ಕೈ ಬೀಸಿ ಕರೆಯುತ್ತಿದೆ. ಅಲ್ಲದೆ ಸ್ವಾವಲಂಬಿ ಬದುಕು ಕಟ್ಟಲು ಹೊರಟಿರುವ ಮಂದಿಗೆ ಪ್ರೇರಣೆ ನೀಡ ಹೊರಟಿದೆ. ಇವೆಲ್ಲಕ್ಕೆ  ಕಾರಣಕರ್ತರು ಲಕ್ಷ್ಮೀನಾರಾಯಣ ಕಿಣಿ  ತನ್ನ 30 ಎಕರೆ ಜಾಗದಲ್ಲಿ ಕಳೆದ ಹಲವು ವರ್ಷಗಳಿಂದ ರಬ್ಬರ್‌ ಬೆಳೆಯನ್ನು ಬೆಳೆದು ಉತ್ತಮ ಲಾಭವನ್ನು ಗಳಿಸುತ್ತಿದ್ದಾರೆ. ಅಲ್ಲದೆ ಇನ್ನುಳಿದ ಸುಮಾರು 5 ಎಕರೆ ಜಾಗದಲ್ಲಿ ವಿವಿಧ ರೀತಿಯ ಮಿಶ್ರ ಕೃಷಿಯನ್ನು ಬೆಳೆಯುವುದರ ಮೂಲಕ ಯಶಸ್ಸು ಕಂಡಿದ್ದಾರೆ.

ಕಳೆದ 3 ವರ್ಷಗಳಿಂದ ಸುಮಾರು 35 ದನಗಳನ್ನು ಸಾಕುವುದರೊಂದಿಗೆ ಹೈನು ಗಾರಿಕೆಯಲ್ಲಿಯೂ ಯಶಸ್ಸು ಕಂಡಿದ್ದಾರೆ. ತನ್ನ ಮನೆಯ ಪಕ್ಕದಲ್ಲೇ ಹೈನುಗಾರಿಕೆಯನ್ನು ಮಾಡುತ್ತಿದ್ದು ವಿವಿಧ ತಳಿಯ ದನಗಳನ್ನು ಸಾಕುತ್ತಿದ್ದು ಪ್ರತೀ ನಿತ್ಯ ಬೆಳಗ್ಗೆ 100 ಲೀಟರ್‌ ಹಾಗೂ ಸಂಜೆ 50ರಿಂದ 60 ಲೀಟರ್‌ ಹಾಲು ಪಡೆದು ಮಾರಾಟ ಮಾಡಿ ಉತ್ತಮ ಆದಾಯವನ್ನು ಗಳಿಸುತ್ತಿದ್ದಾರೆ.

ಸಾಧಕ ಕೃಷಿಕ
ಮುಂಡ್ಕೂರಿನ ಲಕ್ಷ್ಮೀನಾರಾಯಣ ಕಿಣಿ ಇದೀಗ ಸಾಧಕ ಕೃಷಿಕರ ಸಾಲಿಗೆ ಸೇರ್ಪಡೆಗೊಂಡಿದ್ದಾರೆ. ಆದರೆ ಇಲಾಖೆಯ ಕೆಲವೊಂದು ಯೋಜನೆ ಗಳು ರೈತರಿಗೆ ಸರಿಯಾದ ವೇಳೆಯಲ್ಲಿ ಸಿಗುವುದಿಲ್ಲವೆಂಬ ಕಾರಣದಿಂದ ಕಿಣಿ ಅವರು ಬೇಸರ ವ್ಯಕ್ತಪಡಿಸುತ್ತಾರೆ. ಹೈನುಗಾರಿಕೆಯಲ್ಲಿ ಕಿಣಿ ಅವರು 35 ದನಗಳಿಂದ ಸಾಕಷ್ಟು  ಲಾಭವನ್ನು ಪಡೆಯುತ್ತಿದ್ದಾರೆ. ಜತೆಗೆ ಮನೆಯ ಸುತ್ತ ತೊಂಡೆ, ಬೆಂಡೆ, ಬದನೆಯಂತಹ ಗಿಡಗಳನ್ನು ಬೆಳೆದಿದ್ದು ತರಕಾರಿಯಲ್ಲೂ ಉತ್ತಮ ಲಾಭ ಗಳಿಸುತ್ತಿದ್ದಾರೆ. ಈ ಮೂಲಕ  ಕಿಣಿ ಅವರು ಇತರ ರೈತರಿಗೆ ಮಾದರಿಯಾಗಿದ್ದಾರೆ. ತನ್ನ  ಕೃಷಿ ಚಟುವಟಿಕೆಗೆ ಬೇಕಾದ ನೀರಿ ಗಾಗಿ ಸುಮಾರು ರೂ. 5 ಲಕ್ಷ ವ್ಯಯಿಸಿ ಅಂತರ್ಜಲ ವೃದ್ಧಿಗೂ ಕೈ ಹಾಕಿದ್ದಾರೆ.

ಹಲವಾರು ಕಾರಣಗಳಿಂದ ಕೃಷಿ  ಕ್ಷೇತ್ರದಿಂದ ಹಿಂದೆ ಸರಿಯುತ್ತಿರುವ ಅದೆಷ್ಟೋ ಕೃಷಿಕರ ಮಧ್ಯೆ ಗ್ರಾಮೀಣ ಭಾಗದಲ್ಲಿದ್ದೂ ಕೃಷಿಯ ಜತೆ ಬದುಕು ಕಟ್ಟುತ್ತಿದ್ದು ಹೆ„ನುಗಾರಿಕೆಯ ಜೊತೆಯಲ್ಲಿ ಇತರ ಮಿಶ್ರ ಕೃಷಿಯಲ್ಲೂ ಯಶಸ್ಸು ಕಂಡಿದ್ದು , ಇವರ ಸಾಧನೆ ಎಲ್ಲಾ ಕೃಷಿಕರಿಗೂ ಮಾದರಿಯಾಗಿದೆ.

ಹೈನುಗಾರಿಕೆ ಹಾಗೂ ಮಿಶ್ರ ಕೃಷಿಯನ್ನು ಬೆಳೆಯುವುದರಿಂದ ಹೆಚ್ಚಿನ ಲಾಭವನ್ನು ಪಡೆಯಲು ಸಾಧ್ಯ, ವಿವಿಧ‌ ತರಕಾರಿ ಹಾಗೂ 30 ಎಕರೆ ಜಾಗದಲ್ಲಿ ರಬ್ಬರ್‌ ಕೃಷಿಯನ್ನು ಮಾಡಿದ ಪರಿಣಾಮ ಲಾಭವನ್ನು ಪಡೆಯುತ್ತಿದ್ದೇನೆ, ಸರಕಾರ, ಇಲಾಖೆ ಗುರುತಿಸಿಲ್ಲ ಬೇಸರವಿದೆ, ಖಾಲಿ ಜಮೀನು  ಬಿಡಬೇಡಿ ಎಲ್ಲರೂ ಕೃಷಿ ಮಾಡಿ.
– ಮುಂಡ್ಕೂರು ಲಕ್ಷ್ಮೀನಾರಾಯಣ ಕಿಣಿ, ಪ್ರಗತಿಪರ ಕೃಷಿಕ

– ಶರತ್‌ ಶೆಟ್ಟಿ

ಟಾಪ್ ನ್ಯೂಸ್

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.