ಧ್ಯಾನ್ಚಂದ್ಗೆ ಭಾರತ ರತ್ನ ನೀಡಿ,ಪ್ರಧಾನಿಗೆ ಪತ್ರ
Team Udayavani, Jun 8, 2017, 3:04 PM IST
ಹೊಸದಿಲ್ಲಿ: ಹಾಕಿ ದಂತಕತೆ ಧ್ಯಾನ್ಚಂದ್ ಅವರಿಗೆ ಮರಣೋತ್ತರ ಭಾರತ ರತ್ನ ಪುರಸ್ಕಾರ ನೀಡುವಂತೆ ಕೇಂದ್ರ ಕ್ರೀಡಾ ಸಚಿವಾಲಯದಿಂದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಾಗಿದೆ.
ಹಾಕಿಗೆ ಧ್ಯಾನ್ಚಂದ್ ಸಲ್ಲಿಸಿದ ಸೇವೆ ಅಮೋಘವಾದದ್ದು. ಅವರಿಗೆ ನಾಗರಿಕ ಅತ್ಯುನ್ನತ ಪುರಸ್ಕಾರ “ಭಾರತ ರತ್ನ’ ಗೌರವ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ. ಧ್ಯಾನ್ಚಂದ್ ಕೇವಲ ಹಾಕಿಗೆ ಮಾತ್ರವಲ್ಲ. ಇತರೆ ಕ್ರೀಡೆಗೂ ಅವರು ಸ್ಫೂರ್ತಿಯಾಗಿದ್ದಾರೆ ಎಂದು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ತಿಳಿಸಿದ್ದಾರೆ.
ಈ ವಿಷಯದಲ್ಲಿ ಪ್ರಧಾನಿಯವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ವಿಶ್ವ ಮಟ್ಟದಲ್ಲಿ ಭಾರತ ಶಕ್ತಿಯಾಗಿ ಹೊರಹೊಮ್ಮಬೇಕು ಅನ್ನುವುದನ್ನು ಪ್ರಧಾನಿಯವರು ಬಯಸುತ್ತಿದ್ದಾರೆ. ಹೀಗಾಗಿ ಕ್ರೀಡೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ ಎಂದು ಗೋಯಲ್ ತಿಳಿಸಿದರು.
ಧ್ಯಾನ್ಚಂದ್ ಪ್ರತಿನಿಧಿಸಿದ್ದ 1928, 1932 ಮತ್ತು 1936ರ ಒಲಿಂಪಿಕ್ಸ್ನಲ್ಲಿ ಭಾರತ ಚಿನ್ನದ ಪದಕ ಗೆದ್ದಿದೆ. ಅನೇಕ ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ಭಾರತ ಪದಕ ಗೆದ್ದಿದೆ. ಹೀಗಾಗಿ ಹಲವು ವರ್ಷ ಗಳಿಂದ ಧ್ಯಾನ್ಚಂದ್ಗೆ ಭಾರತ ರತ್ನ ನೀಡಬೇಕು ಎಂಬ ಕೂಗು ಕೇಳಿಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ