ಆದಾಯ ತೆರಿಗೆ ಸಲ್ಲಿಕೆಗೆ PAN ಜೊತೆ ಆಧಾರ್ ಸಂಖ್ಯೆ ಜೋಡಿಸಿ; ಸುಪ್ರೀಂ
Team Udayavani, Jun 9, 2017, 3:00 PM IST
ನವದೆಹಲಿ:ಆದಾಯ ತೆರಿಗೆ ಸಲ್ಲಿಕೆಗೆ ಪ್ಯಾನ್ ಕಾರ್ಡ್ ಜೊತೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕೆಂಬ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ಸುಪ್ರೀಂಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ. ಆ ನಿಟ್ಟಿನಲ್ಲಿ ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಆದಾಯ ತೆರಿಗೆ ಸಲ್ಲಿಕೆಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯವಾಗಲಿದೆ. ಆದರೆ ಸಾಂವಿಧಾನಿಕ ಪೀಠ ಅಂತಿಮ ತೀರ್ಪು ನೀಡುವವರೆಗೆ ಪ್ಯಾನ್ ಜೊತೆ ಆಧಾರ್ ಸಂಖ್ಯೆ ಕಡ್ಡಾಯ ಮಾಡದಿರುವಂತೆ ಸೂಚಿಸಿ ತಾತ್ಕಾಲಿಕ ತಡೆ ನೀಡಿದೆ.
ಪ್ಯಾನ್ ಕಾರ್ಡ್ ಜೊತೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕೆಂಬ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ನ್ಯಾ.ಎಕೆ ಸಿಕ್ರಿ ಹಾಗೂ ಅಶೋಕ್ ಭೂಷಣ್ ನೇತೃತ್ವದ ಪೀಠ, ಯಾರು ಈಗಾಗಲೇ ಆಧಾರ್ ಕಾರ್ಡ್ ಹೊಂದಿದ್ದಾರೋ ಅವರು ಕಡ್ಡಾಯವಾಗಿ ಪ್ಯಾನ್ ಜೊತೆ ಜೋಡಣೆ ಮಾಡಬೇಕು. ಆದರೆ ಯಾರ ಬಳಿ ಆಧಾರ್ ಕಾರ್ಡ್ ಇಲ್ಲವೋ ಅವರು ಜೋಡಿಸಬೇಕಾಗಿಲ್ಲ ಎಂದು ತೀರ್ಪು ನೀಡಿದೆ.
ಪ್ಯಾನ್ ಜೊತೆ ಆಧಾರ್ ಸಂಖ್ಯೆ ಕಡ್ಡಾಯ ಮಾಡಬೇಕೆಂಬ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ಭಾಗಶಃ ತಡೆಯಾಜ್ಞೆ ನೀಡಿದೆ. ಅಂದರೆ ಆಧಾರ್ ಕಾರ್ಡ್ ಹೊಂದದೆ ಇರುವವರು ಲಿಂಕ್ ಮಾಡಬೇಕಾಗಿಲ್ಲ. ಏತನ್ಮಧ್ಯೆ ಆದಾಯ ತೆರಿಗೆ ಕಾಯ್ದೆ 139ಎಎ ಕಲಂನ ವ್ಯಾಲಿಡಿಟಿಯನ್ನು ಸುಪ್ರೀಂ ಎತ್ತಿಹಿಡಿದಿದೆ.
ಆಧಾರ್ ಕಡ್ಡಾಯ ಮಾಡುತ್ತಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜಿನಕ ಹಿತಾಸಕ್ತಿ ಅರ್ಜಿಗಳ ಬಗ್ಗೆ (ಖಾಸಗಿತನದ ಹಕ್ಕು ಮತ್ತು ಡಾಟಾ ಸೋರಿಕೆಯಾಗುವ ಬೆದರಿಕೆಯ ಕುರಿತು ) ಸಾಂವಿಧಾನಿಕ ಪೀಠ ವಿಚಾರಣೆ ನಡೆಸಿ ತೀರ್ಪು ನೀಡಲಿದೆ ಎಂದು ಹೇಳಿದೆ.
ಅಷ್ಟೇ ಅಲ್ಲ ಆಧಾರ್ ಸ್ಕೀಂನಿಂದ ಜನರ ವೈಯಕ್ತಿಕ ಮಾಹಿತಿ ಸೋರಿಕೆಯಾಗದಂತೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂ ದ್ವಿಸದಸ್ಯ ಪೀಠ ಸೂಚನೆ ನೀಡಿದೆ.
ಕೇಂದ್ರ ಸರ್ಕಾರದ ವಿವಿಧ ಕಲ್ಯಾಣ, ಕ್ಷೇಮಾಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ಆದೇಶ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ