ಶ್ರೀ ಮೂಕಾಂಬಿಕಾ ಸೋಶಿಯಲ್‌ ವೆಲ್ಫೇರ್‌ ಫೌಂಡೇಷನ್‌: ಆರೋಗ್ಯ ಶಿಬಿರ


Team Udayavani, Jun 9, 2017, 4:43 PM IST

22.jpg

ಡೊಂಬಿವಲಿ: ನಗರದಲ್ಲಿ ನೂತನವಾಗಿ ಸ್ಥಾಪನೆಗೊಂಡ ಶ್ರೀ ಮೂಕಾಂಬಿಕಾ ಸೋಶಿಯಲ್‌ ವೆಲ್ಫೇರ್‌ ಫೌಂಡೇಷನ್‌ ವತಿಯಿಂದ ಆರೋಗ್ಯ ತಪಾಸಣ ಶಿಬಿರವು ಜೂ. 4ರಂದು ನಗರದ ಪ್ರಗತಿ ಕಾಲೇಜಿನ ಎದುರುಗಡೆಯಿರುವ ದತ್ತ ನಗರ ಗಾರ್ಡನ್‌ ಸಭಾಗೃಹದಲ್ಲಿ ಜರಗಿತು.

ಶಿಬಿರವನ್ನು ಕಲ್ಯಾಣ್‌ ಜಿಲ್ಲಾ ಶಿವಸೇನ ಪ್ರಮುಖ ಗೋಪಾಲ ಲಾಂಡೆY ಅವರು ಉದ್ಘಾಟಿಸಿ ಮಾತನಾಡಿ, ಶಿವಸೇನ ಸೌತ್‌ ಇಂಡಿಯನ್‌ ಸೆಲ್‌ನ ಕಾರ್ಯಕರ್ತರು ಸಂಸ್ಥೆಯ ವತಿಯಿಂದ ಉತ್ತಮ ಸಮಾಜಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ. ಪ್ರಸ್ತುತ ಆರೋಗ್ಯ ತಪಾಸಣ ಶಿಬಿರವನ್ನು ಆಯೋಜಿಸಿದ್ದು, ಶಿಬಿರದ ಲಾಭವನ್ನು ಎಲ್ಲರೂ ಪಡೆಯಬೇಕು. ನಮ್ಮ ಆರೋಗ್ಯ ಭಾಗ್ಯವನ್ನು ಕಾಪಾಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಆರೋಗ್ಯ ಭಾಗ್ಯವಿದ್ದರೆ ಯಾವ ಕಾರ್ಯವನ್ನು ಬೇಕಾದರೂ ಮಾಡಬಹುದು. ಇಂತಹ ಕಾರ್ಯಕ್ರಮಗಳಿಗೆ ಶಿವಸೇನೆಯಿಂದ ಎಲ್ಲಾ ರೀತಿಯ ಸಹಕಾರ ದೊರೆಯ
ಲಿದೆ. ಈ ಸಂಸ್ಥೆಯಿಂದ ಇನ್ನಷ್ಟು ಸಮಾಜಪರ ಕಾರ್ಯಕ್ರಮಗಳು ಜರಗುವಂತಾಗಲಿ ಎಂದರು.

ಶಿವಸೇನಾ ತಾಲೂಕು ಪ್ರಮುಖರಾದ ಬಾವು ಸಾಹೇಬ್‌ ಚೌಧರಿ ಮಾತನಾಡಿ, ಶಿವಸೇನೆಯ ಸೌತ್‌ ಸೆಲ್‌ರ ಕಾರ್ಯಕರ್ತರ ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಕಂಡಾಗ ಸಂತೋಷವಾಗುತ್ತಿದೆ. ಇಂತಹ ಆರೋಗ್ಯ ಶಿಬಿರಗಳಿಂದ ಆರ್ಥಿಕವಾಗಿ ಹಿಂದುಳಿದವರಿಗೆ ಸಹಕಾರಿಯಾಗುತ್ತದೆ. ಈ ನೂತನ ಸಂಸ್ಥೆಯಿಂದ ಇನ್ನಷ್ಟು ಸಮಾಜಪರ ಕಾರ್ಯಗಳು ನಡೆದು ಉನ್ನತ ಮಟ್ಟಕ್ಕೆ ಏರಲಿ ಎಂದು ನುಡಿದು ಹಾರೈಸಿದರು.

ಕಾರ್ಯಕ್ರಮವನ್ನು ಗೋಪಾಲ್‌ ಲಾಂಡೆY, ಬಾವು ಸಾಹೇಬ್‌ ಚೌಧರಿ, ರಾಜೇಶ್‌ ಮೋರೆ, ವಿಶ್ವನಾಥ್‌ ರಾಣೆ, ಆನಂದ ಶೆಟ್ಟಿ ಎಕ್ಕಾರು ಹಾಗೂ ಅತಿಥಿ-ಗಣ್ಯರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ದಿವಾಕರ ರೈ, ಬಾಬು ಮೊಗವೀರ, ಚಂದ್ರ ನಾಯ್ಕ ಮೊದಲಾದವರನ್ನು ಪುಷ್ಪಗುಚ್ಚವನ್ನಿತ್ತು ಸತ್ಕರಿಸಲಾಯಿತು. ರಾಜೇಶ್‌ ಮೋರೆ ಕಾರ್ಯಕ್ರಮ ನಿರ್ವಹಿಸಿದರು. ಸುಭಾಶ್‌ ಶೆಟ್ಟಿ ಇನ್ನಂಜೆ ವಂದಿಸಿದರು.

ವೇದಿಕೆಯಲ್ಲಿ ಶಿವಸೇನಾ ಜಿಲ್ಲಾಧ್ಯಕ್ಷ ಗೋಪಾಲ್‌ ಲಾಂಡೆY, ತಾಲೂಕು ಅಧ್ಯಕ್ಷ ಬಾವು ಸಾಹೇಬ್‌ ಚೌಧರಿ, ಸಭಾಗೃಹ ನೇತಾರ ರಾಜೇಶ್‌ ಮೋರೆ, ನಗರ ಸೇವಕ ವಿಶ್ವನಾಥ ರಾಣೆ, ಸಂಸ್ಥೆಯ ಅಧ್ಯಕ್ಷೆ ಅನುಪಮಾ ಶೆಟ್ಟಿ, ಆನಂದ ಶೆಟ್ಟಿ ಎಕ್ಕಾರು, ಕಾರ್ಯದರ್ಶಿ ಸುಭಾಶ್‌ ಶೆಟ್ಟಿ ಇನ್ನಂಜೆ, ಬಾಲಕೃಷ್ಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಡೊಂಬಿವಲಿ ಹಾಗೂ ಆಸುಪಾಸಿನ ತುಳು-ಕನ್ನಡಿಗರು ಸೇರಿದಂತೆ ನೂರಾರು ಮಂದಿ ಶಿಬಿರದಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.