ಮಸಾಜ್‌ ಸೆಂಟರ್‌ಗಳಿಂದ ಕಾನೂನು ಉಲ್ಲಂಘನೆ!


Team Udayavani, Jun 11, 2017, 3:45 AM IST

spa-treatments-to-try.jpg

ಶಿವಮೊಗ್ಗ: ದೇಹಕ್ಕೆ ತೀರಾ ಶ್ರಮವಾದಾಗ ಮಾಡುವ ಅಭ್ಯಂಜನದ ಇನ್ನೊಂದು ರೂಪವಾಗಿ ಇತ್ತೀಚಿನ ವರ್ಷಗಳಲ್ಲಿ ಬೆಳೆದು ಬಂದ ಬ್ಯಾಂಕಾಕ್‌ ಮಾದರಿಯ ಅಂಗಮರ್ಧನ ಅಥವಾ ಮಸಾಜ್‌ ಸೆಂಟರ್‌ ಎಲ್ಲ ಕಾನೂನುಗಳನ್ನು ಮೀರಿ ಬೆಳೆಯುತ್ತಿದ್ದು, ರಾಜ್ಯಾದ್ಯಂತ ಇಂತಹ ಕೇಂದ್ರಗಳು ಪಾರ್ಥೇನಿಯಂನಂತೆ ಹಬ್ಬುತ್ತಿದೆ. ಆದರೆ ಕಾನೂನು ಉಲ್ಲಂಘಿಸಿ ನಡೆಯುವ ಈ ಕೇಂದ್ರಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ.

ಆಯುರ್ವೇದ ಪರಂಪರೆಯಲ್ಲಿ ಈ ರೀತಿಯ ಅಂಗಮರ್ಧನಕ್ಕೆ ವಿಶೇಷ ಹೆಸರುಂಟು. ಈಗಲೂ ಅನೇಕ ಆಯುರ್ವೇದ ಚಿಕಿತ್ಸಾ ಕೇಂದ್ರಗಳಲ್ಲಿ ಈ ರೀತಿಯ ಮಸಾಜ್‌ ಸೆಂಟರ್‌ಗಳು ಇವೆ. ಇವೆಲ್ಲವೂ ಆಯುರ್ವೇದ ಶಾಸ್ತ್ರದಲ್ಲಿ ಹೇಳಿದಂತೆ ಚಿಕಿತ್ಸಾ ರೂಪದಲ್ಲಿ ನಡೆಯುವ ಚಿಕಿತ್ಸೆಗಳು. ಆದರೆ ಇತ್ತೀಚಿನ ವರ್ಷಗಳಲ್ಲಿ ಇದು ಮಾರಾಟದ ಸರಕಾಗಿದ್ದು, ಮಸಾಜ್‌ ಎಂಬುದು “ತೃಪ್ತಿ’ ಒದಗಿಸುವ ಕೇಂದ್ರಗಳಾಗಿಯೂ ಬದಲಾಗುತ್ತಿದೆ ಎಂಬುದು ಕೇಳಿ ಬರುತ್ತಿರುವ ಆರೋಪ.
ಕಾನೂನಿನ ಎಲ್ಲ  ನಿಯಮಗಳನ್ನು ಉಲ್ಲಂಘಿಸಿ ಇದು ನಡೆಯುತ್ತಿದ್ದರೂ, ಇದರ ತಂಟೆಗೆ ಯಾವ ಅಧಿಕಾರಿಗಳೂ ಹೋಗುತ್ತಿಲ್ಲ ಎನ್ನುವುದೇ ಇದರಲ್ಲಿನ ವಿಶೇಷ.

ಮೂಲದ ಪ್ರಕಾರ ರಾಜ್ಯದಲ್ಲಿ ಸುಮಾರು 500 ಸೆಂಟರ್‌ಗಳು ನಡೆಯುತ್ತಿದ್ದು, ಇದರಲ್ಲಿ ಶೇ. 90ರಷ್ಟು ಯಾವುದೇ ಪರವಾನಗಿ ಇಲ್ಲದೆ ನಡೆಯುತ್ತಿವೆ. ಇವುಗಳಲ್ಲಿ ಬಹುತೇಕ ಸೆಂಟರ್‌ಗಳು ಇರುವುದು ಬೆಂಗಳೂರಿನಲ್ಲಿ. ಮೊದಮೊದಲು ನಿಜಾರ್ಥದಲ್ಲಿ  ಮಸಾಜ್‌ ಕೇಂದ್ರಗಳನ್ನು ನಡೆಸಲಾಗುತ್ತಿದ್ದು, ನಿಧಾನವಾಗಿ ಕೆಲವರು ಇದನ್ನು ಬೇರೆಯದೇ ಉದ್ದೇಶದಿಂದ ಸ್ಥಾಪಿಸಿದ್ದಾರೆ ಎಂಬ ದೂರುಗಳು ಕೇಳಿ ಬಂದವು. ಇಂತಹ ಕೇಂದ್ರಗಳಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ದೂರಿನ ಮೇರೆಗೆ ಸಿಸಿಬಿ ಮತ್ತು ಇತರೆ ಸಂಸ್ಥೆಗಳು ಬೆಂಗಳೂರು ಮತ್ತು ನೆರೆಯ ರಾಮನಗರ, ಮಂಡ್ಯ ಮೊದಲಾದ ನಗರಗಳಲ್ಲಿ ಕೂಡ ದಾಳಿ ನಡೆಸಿದವು. ಹೀಗಾಗಿ ಈ ಕೇಂದ್ರಗಳು ಅಲ್ಲಿಂದ ದೂರದ ಪ್ರವಾಸಿ ಕೇಂದ್ರಗಳಿಗೆ ತೆರಳಿವೆ. ಪ್ರಮುಖ ಸ್ಟಾರ್‌ ಹೋಟೆಲ್‌ಗ‌ಳಲ್ಲಿ ಕೂಡ ಈ  “ಸೇವೆ’ ವ್ಯಾಪಕವಾಗಿದೆ.

ಇದರ ಜತೆಗೆ ಕೂದಲು ಕಸಿ, ಬೊಜ್ಜು ಕರಗಿಸುವುದು, ಸೂಜಿ ಚಿಕಿತ್ಸೆಗಳು ಕೂಡ ನಡೆಯುತ್ತಿವೆ. ನಾನಾ ಬಗೆಯ ರಾಸಾಯನಿಕಗಳ ಬಳಕೆ ಇಲ್ಲಿ ಹೇರಳವಾಗಿ ಮಾಡಲಾಗುತ್ತಿದೆ. ಲೇಸರ್‌ ಚಿಕಿತ್ಸೆ ನೀಡುವಂತಹ ಸೇವೆ ಕೂಡ ನಡೆಸಲಾಗುತ್ತಿದೆ. ಇವೆಲ್ಲವೂ ಮನುಷ್ಯ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಲ್ಲವಾಗಿವೆ. ಇಂತಹ ಸೇವೆ ನೀಡುವ ಕೇಂದ್ರಗಳಲ್ಲಿ ಯಾವುದೇ ವೈದ್ಯರು ಇರುವುದಿಲ್ಲ. ಆದರೂ ಯಾವುದೇ ಅಧಿಕಾರಿಗಳು ಈ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ.

ಸುತ್ತೋಲೆಗೆ ಬೆಲೆ  ಇಲ್ಲ: ರಾಜ್ಯದಲ್ಲಿ ಈ ರೀತಿ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿರುವ ಮಸಾಜ್‌ ಪಾರ್ಲರ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿ ಕ್ರಮ ಕೈಗೊಳ್ಳುವ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಈ ತೀರ್ಮಾನ ಜಾರಿಯಾದ ಕುರಿತು ವರದಿ ನೀಡುವಂತೆ 2017 ರ ಜ.10ರಂದು ಎರಡನೇ ಬಾರಿಗೆ ಸುತ್ತೋಲೆ ಹೊರಡಿಸಲಾಗಿದೆ. ಆದರೆ ಇದುವರೆಗೆ ಕ್ರಮ ಕೈಗೊಂಡ ಕುರಿತು ವರದಿ ಸಲ್ಲಿಸಿರುವ ಕುರಿತು ಮಾಹಿತಿಯೇ ಇಲ್ಲ ಎಂದು ಮೂಲಗಳು ಹೇಳುತ್ತದೆ.

ಹೊಸ ಮಸಾಜ್‌, ಹೇರ್‌ ಕ್ಲಿನಿಕ್‌ಗಳು  ಸರ್ಕಾರದ ಮಾರ್ಗದರ್ಶಿ ನಿಯಮದ ಪ್ರಕಾರ ಕೆಪಿಎಂಇ ಕಾಯ್ದೆಯಡಿ ಕಡ್ಡಾಯವಾಗಿ ನೋಂದಣಿ ಆಗಬೇಕು. ಅದೇ ರೀತಿ ಈಗಾಗಲೇ ಸ್ಥಾಪನೆಯಾಗಿರುವ ಕೇಂದ್ರಗಳಲ್ಲಿ ನೀಡಲಾಗುತ್ತಿರುವ ಸೇವೆಯ ಗುಣಮಟ್ಟ ಮತ್ತು ಸೌಲಭ್ಯದ ಕುರಿತು ಪರಿಶೀಲಿಸಲಾಗುವುದು. ಈ ಹಂತದಲ್ಲಿ ಏನಾದರೂ ಲೋಪದೋಷ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ  ಕ್ರಮ ಕೈಗೊಳ್ಳಲಾಗುವುದು.
– ಡಾ.ಎಂ.ಲೋಕೇಶ್‌, ಡಿಸಿ, ಶಿವಮೊಗ್ಗ.

– ಗೋಪಾಲ್‌ ಯಡಗೆರೆ

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.