ನಡಾಲ್‌ ವರ್ಸಸ್‌ ವಾವ್ರಿಂಕ


Team Udayavani, Jun 11, 2017, 3:45 AM IST

nadala-open-11.jpg

ಪ್ಯಾರಿಸ್‌: “ಕ್ಲೇ ಕೋರ್ಟ್‌ ಕಿಂಗ್‌’ ರಫೆಲ್‌ ನಡಾಲ್‌ 10ನೇ ಸಲ ಫ್ರೆಂಚ್‌ ಓಪನ್‌ ಫೈನಲಿಗೆ ಲಗ್ಗೆ ಇರಿಸಿದ್ದಾರೆ. ಹಿಂದಿನ 9 ಸಲವೂ ಪ್ರಶಸ್ತಿ ಗೆದ್ದ ಹೆಗ್ಗಳಿಕೆ ನಡಾಲ್‌ ಅವರದು. ಹೀಗಾಗಿ ದಾಖಲೆ 10ನೇ ಸಲ “ರೊಲ್ಯಾಂಡ್‌ ಗ್ಯಾರೋಸ್‌’ನಲ್ಲಿ ಕಿರೀಟ ಏರಿಸಿಕೊಳ್ಳುವ ನೆಚ್ಚಿನ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದಾರೆ. ಅಂದಹಾಗೆ ಈ ಸ್ಪೇನಿಗನ ಎದುರಾಳಿ ಸ್ವಿಟ್ಸರ್‌ಲ್ಯಾಂಡಿನ ಸ್ಟಾನಿಸ್ಲಾಸ್‌ ವಾವ್ರಿಂಕ. ಇವರಿಗೆ 2015ರಲ್ಲಿ ಪ್ಯಾರಿಸ್‌ ಪ್ರಶಸ್ತಿ ಒಲಿದಿತ್ತು. 

ಇವರಿಬ್ಬರ ನಡುವಿನ ಕಾಳಗ ಭಾರತೀಯ ಕಾಲಮಾನದ ಪ್ರಕಾರ ರವಿವಾರ ಸಂಜೆ 6.30ಕ್ಕೆ ಆರಂಭವಾಗಲಿದೆ. 
ಶುಕ್ರವಾರ ರಾತ್ರಿಯ ಪುರುಷರ ದ್ವಿತೀಯ ಸೆಮಿಫೈನಲ್‌ ಪಂದ್ಯದಲ್ಲಿ ರಫೆಲ್‌ ನಡಾಲ್‌ ಆಸ್ಟ್ರಿಯಾದ ಅಚ್ಚರಿಯ ಸರದಾರ ಡೊಮಿನಿಕ್‌ ಥೀಮ್‌ ಅವರನ್ನು 6-3, 6-4, 6-0 ಅಂತರದಿಂದ ಹಿಮ್ಮೆಟ್ಟಿಸಿದರು. ಹಾಲಿ ಚಾಂಪಿ ಯನ್‌ ನೊವಾಕ್‌ ಜೊಕೋವಿಕ್‌ ಅವರನ್ನು ಮಣಿಸಿ ದೊಡ್ಡ ಹೀರೋ ಎನಿಸಿಕೊಂಡಿದ್ದ ಥೀಮ್‌ ಆಟ ನಡಾಲ್‌ ಎದುರು ನಡೆಯಲಿಲ್ಲ. 1995ರ ಬಳಿಕ ಗ್ರ್ಯಾನ್‌ಸ್ಲಾಮ್‌ ಫೈನಲ್‌ ಪ್ರವೇಶಿಸಿದ ಕೇವಲ 2ನೇ ಆಸ್ಟ್ರಿಯನ್‌ ಟೆನಿಸಿಗನೆಂಬ ಹೆಗ್ಗಳಿಕೆಯಿಂದ ಥೀಮ್‌ ದೂರವೇ ಉಳಿದರು. ಅಂದು ಥಾಮಸ್‌ ಮಸ್ಟರ್‌ ಈ ಸಾಧನೆ ಮಾಡಿದ್ದರು. ಜತೆಗೆ ಮಸ್ಟರ್‌ ಪ್ರಶಸ್ತಿಯನ್ನೂ ಎತ್ತಿದ್ದರು. 

ಮೊದಲ ಉಪಾಂತ್ಯದಲ್ಲಿ ಸ್ಟಾನಿಸ್ಲಾಸ್‌ ವಾವ್ರಿಂಕ ಬ್ರಿಟನ್ನಿನ ಆ್ಯಂಡಿ ಮರ್ರೆ ಅವರನ್ನು 5 ಸೆಟ್‌ಗಳ ಉಗ್ರ ಕಾದಾಟದ ಬಳಿಕ 6-7 (6-8), 6-3, 5-7, 7-6 (7-3), 6-1ರಿಂದ ಮಣಿಸುವಲ್ಲಿ ಯಶಸ್ವಿಯಾಗಿದ್ದರು.”ಆರಂಭದಲ್ಲಿ ನಾನು ಸ್ವಲ್ಪ ನರ್ವಸ್‌ ಆಗಿದ್ದೆ. ಆದರೆ ಕೂಡಲೇ ಲಯಕ್ಕೆ ಮರಳಿದೆ. ಥೀಮ್‌ ಇಲ್ಲಿ ಬಹಳಷ್ಟು ತಪ್ಪು ಮಾಡಿದರು. ಬಲವಾಗಿ ಬೀಸುತ್ತಿದ್ದ ಗಾಳಿ ಕೂಡ ಇದಕ್ಕೆ ಕಾರಣವಾಗಿರಬಹುದು…’ ಎಂದು ರಫೆಲ್‌ ನಡಾಲ್‌ ಪ್ರತಿಕ್ರಿಯಿಸಿದರು. 

ನಡಾಲ್‌ 15-3 ಮುನ್ನಡೆ
ಹಿಂದಿನ 9 ಫೈನಲ್‌ಗ‌ಳಲ್ಲೂ ಚಾಂಪಿಯನ್‌ ಆಗಿ ಮೂಡಿಬಂದಿದ್ದ ರಫೆಲ್‌ ನಡಾಲ್‌ ರವಿವಾರವೂ ಈ ಸಾಧನೆಯನ್ನು ಪುನರಾವರ್ತಿಸಿದರೆ 10 ಸಲ ಫ್ರೆಂಚ್‌ ಓಪನ್‌ ಪ್ರಶಸ್ತಿ ಗೆದ್ದ ವಿಶ್ವದ ಮೊದಲ ಟೆನಿಸಿಗನೆಂಬ ಹಿರಿಮೆಯನ್ನು ಒಲಿಸಿಕೊಳ್ಳಲಿದ್ದಾರೆ. ವಾವ್ರಿಂಕ ವಿರುದ್ಧ 15-3 ಗೆಲುವಿನ ದಾಖಲೆ ಹೊಂದಿರುವುದರಿಂದ ನಡಾಲ್‌ ಅವರೇ ನೆಚ್ಚಿನ ಆಟಗಾರನಾಗಿ ಗುರುತಿಸಲ್ಪಟ್ಟಿದ್ದಾರೆ. ಆದರೆ 3 ವರ್ಷಗಳ ಹಿಂದೆ ಆಸ್ಟ್ರೇಲಿಯನ್‌ ಓಪನ್‌ ಫೈನಲ್‌ನಲ್ಲಿ ನಡಾಲ್‌ ಅವರನ್ನೇ ಮಣಿಸುವ ಮೂಲಕ ವಾವ್ರಿಂಕ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದನ್ನು ಮರೆಯುವಂತಿಲ್ಲ. 32ರ ಹರೆಯದ ವಾವ್ರಿಂಕ ಕಳೆದ 44 ವರ್ಷಗಳಲ್ಲೇ ಫ್ರೆಂಚ್‌ ಓಪನ್‌ ಫೈನಲ್‌ ಪ್ರವೇಶಿಸಿದ ಅತೀ ಹಿರಿಯ ಆಟಗಾರನಾಗಿದ್ದಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.