ಗೋವು ತಾಯ್ತನದ ಸಂಕೇತ; ಪವಿತ್ರ ರಾಷ್ಟ್ರೀಯ ಸಂಪತ್ತು
Team Udayavani, Jun 11, 2017, 10:44 AM IST
ಅಮರಾವತಿ: “ಗೋವು ಎನ್ನುವುದು ತಾಯ್ತನದ ಸಂಕೇತ. ಅದು ಪವಿತ್ರ ರಾಷ್ಟ್ರೀಯ ಸಂಪತ್ತು. ಅದನ್ನು ಕೊಲ್ಲುವುದು ಅಥವಾ ನೋವುಂಟು ಮಾಡುವುದನ್ನು ಜಾಮೀನುರಹಿತ ಅಪರಾಧ ಎಂದು ಘೋಷಿಸಬೇಕು.’
ಹೀಗೆಂದು ಹೇಳಿರುವುದು ಹೈದರಾಬಾದ್ ಹೈಕೋರ್ಟ್ ನ್ಯಾಯಾಧೀಶ ಬಿ. ಶಿವಶಂಕರ ರಾವ್. ಗೋಹತ್ಯೆ ಮಾಡು ವವರಿಗೆ ಜೀವಾವಧಿ ಶಿಕ್ಷೆ ನೀಡುವಂತೆ ರಾಜಸ್ಥಾನ ಹೈಕೋರ್ಟ್ ನ್ಯಾಯಾಧೀಶರೊಬ್ಬರು ಹೇಳಿಕೆ ನೀಡಿದ ಬೆನ್ನಲ್ಲೇ ಮತ್ತೂಬ್ಬರು ನ್ಯಾಯಾಧೀಶರಿಂದ ಇಂಥ ಮಾತುಗಳು ಹೊರಬಿದ್ದಿವೆ. ತನ್ನ ಮನೆಯಿಂದ ಪೊಲೀಸರು ವಶಪಡಿಸಿಕೊಂಡಿದ್ದ 63 ಹಸು ಗಳು, 2 ಕೋಣಗಳನ್ನು ವಾಪಸ್ ಕೊಡಿಸಬೇಕೆಂದು ಕೋರಿ ಜಾನುವಾರು ವ್ಯಾಪಾರಿಯೊಬ್ಬರು ಸಲ್ಲಿಸಿದ್ದ ಮನವಿ ತಿರಸ್ಕರಿಸುವ ವೇಳೆ ನ್ಯಾ| ರಾವ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
“ಮೊಘಲ್ ದೊರೆಗಳೂ ಗೋಹತ್ಯೆಯನ್ನು ನಿರ್ಬಂಧಿಸಿದ್ದರು. ಜಾನುವಾರು ಕ್ರೌರ್ಯ ಪ್ರತಿಬಂಧಕ ಕಾಯ್ದೆಗೆ ತಿದ್ದುಪಡಿ ತರಬೇಕು. ಆರೋಗ್ಯವಂತ ಜಾನುವಾರುಗಳನ್ನು ವಯಸ್ಸಾಗಿದೆ, ವಧೆಗೆ ಅರ್ಹವಾಗಿವೆ ಎಂದು ಸುಳ್ಳು ಪ್ರಮಾಣಪತ್ರ ನೀಡುವ ಪಶುವೈದ್ಯರಿಗೂ ಶಿಕ್ಷೆಯಾಗಬೇಕು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್